Connect with us

Dvgsuddi Kannada | online news portal | Kannada news online

ರೋಡ್ ಸೇಫ್ಟಿ ವರ್ಲ್ಡ್ ಸೀರೀಸ್; ಭಾರತ ದಿಗ್ಗಜರ ತಂಡ ಪ್ರಕಟ

ಕ್ರೀಡೆ

ರೋಡ್ ಸೇಫ್ಟಿ ವರ್ಲ್ಡ್ ಸೀರೀಸ್; ಭಾರತ ದಿಗ್ಗಜರ ತಂಡ ಪ್ರಕಟ

ಬೆಂಗಳೂರು: ಮಾರ್ಚ್ 5ರಿಂದ ಆರಂಭಗೊಳ್ಳಲಿರುವ ರೋಡ್ ಸೇಫ್ಟಿ ವರ್ಲ್ಡ್ ಸೀರೀಸ್ ಟೂರ್ನಿಯಲ್ಲಿ ಭಾರತದ ಕ್ರಿಕೆಟ್ ದಿಗ್ಗಜರೆಲ್ಲ ಮತ್ತೆ ಮೈದಾನಕ್ಕಿಳಿಯಲಿದ್ದಾರೆ. ಈ ಟೂರ್ನಿಗೆ ಸಂಬಂಧಿಸಿ ಭಾರತದ ಬಲಿಷ್ಠ ತಂಡ ಪ್ರಕಟಗೊಂಡಿದೆ.

ಭಾರತದ ಕ್ರಿಕೆಟಿಗರಾದ ಯೂಸುಫ್ ಪಠಾಣ್, ನಮನ್ ಓಜಾ ಮತ್ತು ವಿನಯ್ ಕುಮಾರ್ ಇತ್ತೀಚೆಗಷ್ಟೇ ಕ್ರಿಕೆಟ್ ಗೆ ನಿವೃತ್ತಿ ಘೋಷಿಸಿದ್ದರು. ಆಟ ನಿಲ್ಲಿಸಿದ ಈ ಎಲ್ಲಾ ಆಟಗಾರರೊಂದಿಗೆ ಇನ್ನೊಂದಿಷ್ಟು ದಂತಕತೆಗಳು ಭಾರತ ಪರ ಮತ್ತೆ ಮೈದಾನಕ್ಕಿಳಿಯಲಿದ್ದಾರೆ

2021ರ ರೋಡ್ ಸೇಫ್ಟಿ ವರ್ಲ್ಡ್ ಸೀರೀಸ್ ನಲ್ಲಿ ಟೀಮ್ ಇಂಡಿಯಾ ಪರ ಮಾಜಿ ಬ್ಯಾಟ್ಸ್ಮನ್ ಗಳಾದ ಸಚಿನ್ ತೆಂಡೂಲ್ಕರ್ ಮತ್ತು ವೀರೇಂದ್ರ ಸೆಹ್ವಾಗ್ ಆರಂಭಿಕರಾಗಿ ಆಡಲಿದ್ದಾರೆ.ಸಿಕ್ಸರ್ ಕಿಂಗ್ ಯುವರಾಜ್ ಕೂಡ ಭಾರತ ತಂಡಕ್ಕೆ ಬಲ ತುಂಬಲಿದ್ದಾರೆ.

ರೋಡ್ ಸೇಫ್ಟಿ ವರ್ಲ್ಡ್ ಸೀರೀಸ್ ಗೆ ಭಾರತ ತಂಡ: ಸಚಿನ್ ತೆಂಡೂಲ್ಕರ್, ವೀರೇಂದ್ರ ಸೆಹ್ವಾಗ್, ಯುವರಾಜ್ ಸಿಂಗ್, ಮೊಹಮ್ಮದ್ ಕೈಫ್, ಪ್ರಗ್ಯಾನ್ ಓಜಾ, ನೋಯೆಲ್ ಡೇವಿಡ್, ಮುನಾಫ್ ಪಟೇಲ್, ಇರ್ಫಾನ್ ಪಠಾಣ್, ಮನ್‌ಪ್ರೀತ್ ಗೋನಿ, ಯೂಸುಫ್ ಪಠಾಣ್, ನಮನ್ ಓಜಾ, ಎಸ್ ಬದ್ರಿನಾಥ್ ಮತ್ತು ವಿನಯ್ ಕುಮಾರ್.

ಲೋಕಲ್ ಸುದ್ದಿಗಳನ್ನು ಕ್ಷಣಾರ್ಧದಲ್ಲಿ ಲೋಕದ ಜನರ ಬೆರಳ ತುದಿಗೆ ತಲುಪಿಸುವ ಉದ್ದೇಶದಿಂದ ಡಿವಿಜಿಸುದ್ದಿ.ಕಾಂ ಕನ್ನಡ ಆನ್ ಲೈನ್ ನ್ಯೂಸ್ ಪೋರ್ಟಲ್ (ಡಿಜಿಟಲ್ ಮಾಧ್ಯಮ) ಸ್ಥಾಪಿಸಲಾಗಿದೆ. ಸ್ಥಳೀಯ ಸುದ್ದಿ ಜೊತೆ ಇನ್ಫೋರ್ಮೆಟಿವ್ ನ್ಯೂಸ್ ಕೊಡುವುದು ಮೊದಲ ಆದ್ಯತೆ. ಇದಲ್ಲದೆ ರಾಜಕೀಯ, ಶಿಕ್ಷಣ, ಉದ್ಯೋಗ, ಕ್ರೀಡೆ, ಅಪರಾಧ ಸುದ್ದಿ ಹಾಗೂ ವಿಶೇಷವಾಗಿ ಕೃಷಿ ಮತ್ತು ರೈತರಿಗೆ ಉಪಯುಕ್ತ ಮಾಹಿತಿ ನೀಡುವುದು ಮುಖ್ಯ ಉದ್ದೇಶ. ಸುದ್ದಿ, ಮಾಹಿತಿ, ಸಲಹೆ, ಸೂಚನೆ ನೀಡಲು ವಾಟ್ಸಾಪ್ (7483892205) ಮಾಡಿ... Editor: munikondajji, MA journalism, contact number:7483892205, e-mail: dvgsuddi@gmail.com

Click to comment

Leave a Reply

Your email address will not be published. Required fields are marked *

More in ಕ್ರೀಡೆ

To Top