ಮೈಸೂರು ಮೇಯರ್ ಮೈತ್ರಿ  ಸಣ್ಣ ವಿಚಾರ: ಡಿ.ಕೆ.ಶಿವಕುಮಾರ್

Dvgsuddi
By
Dvgsuddi
ಲೋಕಲ್ ಸುದ್ದಿಗಳನ್ನು ಕ್ಷಣಾರ್ಧದಲ್ಲಿ ಲೋಕದ ಜನರ ಬೆರಳ ತುದಿಗೆ ತಲುಪಿಸುವ ಉದ್ದೇಶದಿಂದ ಡಿವಿಜಿಸುದ್ದಿ.ಕಾಂ ಕನ್ನಡ ಆನ್ ಲೈನ್ ನ್ಯೂಸ್ ಪೋರ್ಟಲ್ (ಡಿಜಿಟಲ್ ಮಾಧ್ಯಮ) ಸ್ಥಾಪಿಸಲಾಗಿದೆ. ಸ್ಥಳೀಯ ಸುದ್ದಿ ಜೊತೆ ಇನ್ಫೋರ್ಮೆಟಿವ್ ನ್ಯೂಸ್ ಕೊಡುವುದು ಮೊದಲ ಆದ್ಯತೆ....
1 Min Read

ಕೋಲಾರ: ಮೈಸೂರು ಮಹಾನಗರ ಪಾಲಿಕೆ ಮೇಯರ್‌ ಚುನಾವಣಾ ಮೈತ್ರಿ ಗೊಂದಲ ಸಣ್ಣ ವಿಚಾರ. ಸ್ಥಳೀಯ ರಾಜಕೀಯದಲ್ಲಿ ಸಾಮಾನ್ಯ.  ಎಲ್ಲ ವಿಚಾರವನ್ನು ಪಕ್ಷದೊಳಗೆ ಬಗೆಹರಿಸಿಕೊಳ್ಳುತ್ತೇವೆ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್‌ ಹೇಳಿದರು.

ಮುಳಬಾಗಿಲು ಮಾತನಾಡಿ, ಸಿದ್ದರಾಮಯ್ಯ ಅವರು ರಾಜ್ಯ ಕಾಂಗ್ರೆಸ್ ಉಸ್ತುವಾರಿ ಸುರ್ಜೇವಾಲ ಅವರ ಪುತ್ರನ ಮದುವೆಗೆ  ದೆಹಲಿಗೆ ಹೋಗಿದ್ದಾರೆ ಅಷ್ಟೇ. ನಾನೂ ಹೋಗಬೇಕಿತ್ತು. ಮನೆ ಕಾರ್ಯಕ್ರಮ ಇದ್ದಿದ್ದರಿಂದ ಹೋಗಲು ಸಾಧ್ಯವಾಗಿಲ್ಲ. ಮೈಸೂರು ಮೇಯರ್‌ ಚುನಾವಣೆ ವಿಚಾರವಾಗಿ ಜೆಡಿಎಸ್‌ ಶಾಸಕ ಸಾ.ರಾ.ಮಹೇಶ್‌ ಅವರಿಗೆ ಕರೆ ಮಾಡಿದ್ದು ನಿಜ. ನಮಗೆ ಅವರು ಈ ಹಿಂದೆ ಮಾತು ಕೊಟ್ಟಿದ್ದರು. ಈ ವರ್ಷ ಮೈತ್ರಿ ಮುಂದುವರಿಸಿ ನಮಗೆ ಅಧಿಕಾರ ಬಿಟ್ಟು ಕೊಡಬೇಕಿತ್ತು. ಜೆಡಿಎಸ್ ಕೊಡ್ತಾರೆ ಅಂತಾ  ನಂಬಿದ್ದೆ. ಆದರೆ, ಅದು ಸಾಧ್ಯವಾಗಿಲ್ಲ.ಈ ಬಗ್ಗೆ ಶಾಸಕ ತನ್ವಿರ್ ಸೇಠ್ ಜೊತೆ ಮಾತನಾಡುತ್ತೇನೆ ಎಂದರು.

ಮುಖ್ಯಮಂತ್ರಿ ಹುದ್ದೆಗೆ ಪೈಪೋಟಿ ಇಲ್ಲ. ಮೊದಲು ಪಕ್ಷವನ್ನು ಅಧಿಕಾರಕ್ಕೆ ತರಬೇಕು. ಬಿಜೆಪಿಯವರಿಗೆ ರಾಜ್ಯದಲ್ಲಿ ಮತ್ತೆ ಅಧಿಕಾರಕ್ಕೆ ಬರುವುದಿಲ್ಲ ಎಂದು ಅರ್ಥವಾಗಿದೆ.  ನಾಡಿನ ಜನ ಮತ್ತೆ ಕಾಂಗ್ರೆಸ್‌ನ ಕೈ ಹಿಡಿಯುತ್ತಾರೆ. ಯಾವ ಕ್ಷೇತ್ರಗಳಲ್ಲಿ ಸೊತ್ತಿದೇವೋ ಅಲ್ಲಿಯೇ ಪಕ್ಷ ಸಂಘಟನೆ ಮಾಡುತ್ತೇವೆ. 1999ರಲ್ಲಿ ಎಸ್.ಎಂ.ಕೃಷ್ಣ ಅವರು ಪಾಂಚಜನ್ಯ ಮೊಳಗಿಸಿ ಅಧಿಕಾರಕ್ಕೆ ಬಂದರು. ಅದೇ ರೀತಿ ನಾನು ಪಾಂಚಜನ್ಯ ಮೊಳಗಿಸಲಿದ್ದೇನೆ ಎಂದರು.

Share This Article
Follow:
ಲೋಕಲ್ ಸುದ್ದಿಗಳನ್ನು ಕ್ಷಣಾರ್ಧದಲ್ಲಿ ಲೋಕದ ಜನರ ಬೆರಳ ತುದಿಗೆ ತಲುಪಿಸುವ ಉದ್ದೇಶದಿಂದ ಡಿವಿಜಿಸುದ್ದಿ.ಕಾಂ ಕನ್ನಡ ಆನ್ ಲೈನ್ ನ್ಯೂಸ್ ಪೋರ್ಟಲ್ (ಡಿಜಿಟಲ್ ಮಾಧ್ಯಮ) ಸ್ಥಾಪಿಸಲಾಗಿದೆ. ಸ್ಥಳೀಯ ಸುದ್ದಿ ಜೊತೆ ಇನ್ಫೋರ್ಮೆಟಿವ್ ನ್ಯೂಸ್ ಕೊಡುವುದು ಮೊದಲ ಆದ್ಯತೆ. ಇದಲ್ಲದೆ ರಾಜಕೀಯ, ಶಿಕ್ಷಣ, ಉದ್ಯೋಗ, ಕ್ರೀಡೆ, ಅಪರಾಧ ಸುದ್ದಿ ಹಾಗೂ ವಿಶೇಷವಾಗಿ ಕೃಷಿ ಮತ್ತು ರೈತರಿಗೆ ಉಪಯುಕ್ತ ಮಾಹಿತಿ ನೀಡುವುದು ಮುಖ್ಯ ಉದ್ದೇಶ. ಸುದ್ದಿ, ಮಾಹಿತಿ, ಸಲಹೆ, ಸೂಚನೆ ನೀಡಲು ವಾಟ್ಸಾಪ್ (7483892205) ಮಾಡಿ... Editor: munikondajji, MA journalism, contact number:7483892205, e-mail: dvgsuddi@gmail.com
Leave a Comment

Leave a Reply

Your email address will not be published. Required fields are marked *