ಹುಬ್ಬಳ್ಳಿ: 1ರಿಂದ 5ನೇ ತರಗತಿ ಆರಂಭಿಸುವಂತೆ ಒತ್ತಡ ಕೇಳಿ ಬರುತ್ತಿದೆ. ಈ ಕುರಿತು ಆರೋಗ್ಯ ಇಲಾಖೆ ತಜ್ಞರ ವರದಿ ಆಧರಿಸಿ ಮುಂದಿನ ತೀರ್ಮಾನ ಕೈಗೊಳ್ಳಲಾಗುವುದು ಎಂದು ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಎಸ್. ಸುರೇಶಕುಮಾರ್ ಹೇಳಿದರು.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನೆರೆಯ ರಾಜ್ಯಗಳಲ್ಲಿ ಕೋವಿಡ್-19 ಏರಿಕೆಯಾಗುತ್ತಿದ್ದು, ರಾಜ್ಯದಲ್ಲೂ ಹೆಚ್ಚಿನ ಮುನ್ನೆಚ್ಚರಿಕೆ ವಹಿಸಲಾಗುತ್ತಿದೆ. 1ರಿಂದ 5ನೇ ತರಗತಿಗಳ ಆರಂಭಕ್ಕೆ ಕೈಗೊಳ್ಳಬೇಕಾದ ಕ್ರಮಗಳು ಮತ್ತು ಮುಂದೆ ಎದುರಾಗಬಹುದಾದ ಸಮಸ್ಯೆಗಳ ಕುರಿತು ತಜ್ಞರು ವರದಿ ನೀಡಲಿದ್ದಾರೆ. ಆ ವರದಿ ಆಧರಿಸಿ ಮೇಲೆ, ಶಾಲೆ ಆರಂಭಿಸುವ ಬಗ್ಗೆ ತೀರ್ಮಾನಿಸಲಾಗುವುದು ಎಂದರು.