Connect with us

Dvgsuddi Kannada | online news portal | Kannada news online

ಮೈಸೂರು ಮೇಯರ್ ಸ್ಥಾನ ಕಾಂಗ್ರೆಸ್ ಗೆ ಸಿಗಬೇಕಿತ್ತು; ಈ ಬಗ್ಗೆ ಶಾಸಕ ತನ್ವೀರ್ ಸೇಠ್ ಗೆ ನೋಟಿಸ್ ನೀಡಲು ನಿರ್ಧಾರ: ಡಿ.ಕೆ. ಶಿವಕುಮಾರ್

ಪ್ರಮುಖ ಸುದ್ದಿ

ಮೈಸೂರು ಮೇಯರ್ ಸ್ಥಾನ ಕಾಂಗ್ರೆಸ್ ಗೆ ಸಿಗಬೇಕಿತ್ತು; ಈ ಬಗ್ಗೆ ಶಾಸಕ ತನ್ವೀರ್ ಸೇಠ್ ಗೆ ನೋಟಿಸ್ ನೀಡಲು ನಿರ್ಧಾರ: ಡಿ.ಕೆ. ಶಿವಕುಮಾರ್

ಬೆಂಗಳೂರು: ಮೈಸೂರು ಪಾಲಿಕೆ ಮೇಯರ್ ಸ್ಥಾನ ಕಾಂಗ್ರೆಸ್ ಗೆ ಸಿಗಬೇಕಾಗಿತ್ತು. ಆದರೆ ಸಿಗಲಿಲ್ಲ. ಮೇಯರ್ ಸ್ಥಾನ ಪಡೆಯುವಂತೆ ನಾನು ಮತ್ತು ಸಿದ್ದರಾಮಯ್ಯ ಅವರ ಆದೇಶಿಸಿದ್ದೇವು. ಆದರ, ಅದು ಸಾಧ್ಯವಾಗಿಲ್ಲ. ಹೀಗಾಗಿ  ಶಾಸಕ ತನ್ವೀರ್ ಸೇಠ್ ಗೆ ನೊಟೀಸ್ ಕೂಡ ಕೊಡ್ತೇವೆ ಎಂದು  ಕಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಹೇಳಿದರು.

ಮೇಯರ್ ಆಯ್ಕೆ ಗೊಂದಲ ವಿಷಯವಾಗಿ ಪ್ರತಿಕ್ರಿಯೆ ನೀಡಿರುವ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ,  ಇವತ್ತು ತನ್ವೀರ್ ಸೇಠ್ ಬರ್ತಿದ್ದಾರೆ. ನಿನ್ನೆ ಸಿಕ್ಕಿರಲಿಲ್ಲ. ತನ್ವೀರ್ ಸೇಠ್ ಅವರಿಗೆ ನೋಟೀಸ್ ಕೊಡುತ್ತಿದ್ದೇವೆ.  ಮೈಸೂರು ಮೇಯರ್ ಆಯ್ಕೆ ವಿಷಯವಾಗಿ ಎದ್ದಿರುವ ಗೊಂದಲದ ಬಗ್ಗೆ ವರದಿ ನೀಡಲು ವೀಕ್ಷಕರಾಗಿ ಎಐಸಿಸಿ ಕಾರ್ಯದರ್ಶಿ ಮಧು ಯಾಕ್ಷಿ ಗೌಡ್ ಅವರು ರಾಜ್ಯಕ್ಕೆ ಬಂದಿದದ್ದಾರೆ.

ನನ್ನ ಕೂಡ ಭೇಟಿ ಮಾಡಿದ್ದರು.  ಮೈಸೂರಿಗೂ ಹೋಗ್ತಾರೆ,  ನಂತರ ಮಧು ಯಕ್ಷಿ ಗೌಡ್ ಹೈಕಮಾಂಡ್ ಗೆ ವರದಿ ಕೊಡಲಿದ್ದಾರೆ. ಯಾಕೆ ಮೇಯರ್ ಸ್ಥಾನ ಪಡೆಯಲಿಲ್ಲ ಅಂತ ಮಾಹಿತಿ ಪಡೆಯುತ್ತೇವೆ.ಪ್ರತಿಭಟನೆಗೆ ಸಿದ್ದರಾಮಯ್ಯ ಗೈರು ವಿಚಾರವಾಗಿ ಪ್ರತಿಕ್ರಿಯಿಸಿದ ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್ ಅವರು, ಸಿದ್ದರಾಮಯ್ಯ ಸಿಎಲ್​ಪಿ ಲೀಡರ್. ಅವರಿಗೆ ಸಾಕಷ್ಟು ಕೆಲಸ ಇರುತ್ತೆ. ಯಾಕೆ  ಎಲ್ಲವನ್ನೂ ಕ್ರಿಯೇಟ್ ಮಾಡ್ತಿದ್ದೀರ. ನಾನು ಕೆಲವು ಕಡೆ ಹೋಗಿಲ್ಲ. ಹಾಗೆ ಅವರು ಕೆಲವು ಕಡೆ ಬರೋಕೆ ಆಗ್ತಿಲ್ಲ. ಸಿದ್ದರಾಮಯ್ಯ ಬಂದಿಲ್ಲವೆಂದು ಯಾಕೆ ಆರೋಪ ಮಾಡ್ತೀರಾ ಎಂದು  ಪ್ರತಿಕ್ರಿಯಿಸಿದರು.

ಪಕ್ಷದಲ್ಲಿ ಅಶಿಸ್ತು ಸಹಿಸಲ್ಲ. ಪಕ್ಷದಲ್ಲಿ ಶಿಸ್ತು ಮುಖ್ಯ. ಅಖಂಡ ಶ್ರೀನಿವಾಸ್ ಮೂರ್ತಿ ಇರುಬಹುದು, ಪಕ್ಷದಲ್ಲಿ ಯಾರೇ ಇರಬಹುದು. ಯಾವ ನಾಯಕರ ವಿರುದ್ಧ ಮಾತನಾಡಬಾರದು. ಆಂತರಿಕವಾಗಿ ಚರ್ಚಿಸಬೇಕು. ಬಹಿರಂಗವಾಗಿ ಮಾತನಾಡಬಾರದು. ನಾನು ಇದರ ಬಗ್ಗೆ ಶಿಸ್ತುಕ್ರಮ ಕೈಗೊಳ್ತೇನೆ ಎಂದು ಅಖಂಡ ಶ್ರೀನಿವಾಸಮೂರ್ತಿ ಅವರಿಗೆ ಡಿಕೆಶಿ ಎಚ್ಚರಿಕೆ ನೀಡಿದರು.

ಮೈಸೂರು ಮೇಯರ್ ಚುನಾವಣೆಯಲ್ಲಾದ ಬೆಳವಣಿಗೆ ಬಗ್ಗೆ ಸತ್ಯಾಂಶ ವರದಿ ನೀಡಲು ರಾಹುಲ್ ಗಾಂಧಿ ಅವರಿಂದ ವೀಕ್ಷಕರಾಗಿ ಕಳುಹಿಸಲಾಗಿರುವ ಮಧು ಯಾಸ್ಕಿ ಗೌಡ್ ಅವರು ಇಂದು ಸಿದ್ದರಾಮಯ್ಯ ಮತ್ತು ಡಿಕೆ ಶಿವಕುಮಾರ್ ಅವರನ್ನು ಬೆಂಗಳೂರಿನಲ್ಲಿ ಭೇಟಿಯಾಗಿ ಚರ್ಚಿಸಿದ್ದಾರೆ.

ಈ ವೇಳೆ ಮಾತನಾಡಿದ ಸಿದ್ದರಾಮಯ್ಯ,  ನಾನು ಮುಖ್ಯಮಂತ್ರಿ ಆಗಿದ್ದವನು. ಬಿಜೆಪಿ, ಜೆಡಿಎಸ್ ವಿರುದ್ಧ ರಾಜಕೀಯ ಮಾಡಬೇಕೇ ಹೊರತು ನನ್ನ ಮೇಲೆಯೇ ರಾಜಕೀಯ ಮಾಡುವುದು ಸರಿಯಲ್ಲ ಎಂದು ಮಧು ಯಾಸ್ಕಿ ಅವರ ಬಳಿ ಅಸಮಾಧಾನ ವ್ಯಕ್ತಪಡಿಸಿದ್ದಾರೆ ಎನ್ನಲಾಗಿದೆ.

ಸಿದ್ದರಾಮಯ್ಯ ಭೇಟಿ ಬಳಿಕ ಮಾಧ್ಯಮಗಳೊಂದಿಗೆ ಮಾತನಾಡಿದ ಮಧು ಯಾಸ್ಕಿ ಗೌಡ್, ಕಾಂಗ್ರೆಸ್ ಪಕ್ಷ ಅಶಿಸ್ತು ಸಹಿಸಲ್ಲ, ಯಾರೇ ಆದರೂ ಶಿಸ್ತು ರೇಖೆಯನ್ನು ದಾಟಿದರೆ ಕ್ರಮ ಕೈಗೊಳ್ಳುವುದು ನಿಶ್ಚಿತ. ಈ ಬೆಳವಣಿಗೆಯಲ್ಲಿ ಯಾವುದೇ ನಾಯಕ ಇರಲಿ ನಾವು ಕ್ರಮ ಕೈಗೊಳ್ಳುತ್ತೇವೆ. ಮೈಸೂರು ಚುನಾವಣೆಯಲ್ಲಿ ನಡೆದ ಎಲ್ಲಾ ವಿಚಾರವನ್ನೂ ತಿಳಿಯುತ್ತೇನೆ. ನಂತರ ಹೈಕಮಾಂಡ್​ಗೆ ವರದಿ ನೀಡಲಿದ್ದೇವೆ ಎಂದಿದ್ದಾರೆ.

ಲೋಕಲ್ ಸುದ್ದಿಗಳನ್ನು ಕ್ಷಣಾರ್ಧದಲ್ಲಿ ಲೋಕದ ಜನರ ಬೆರಳ ತುದಿಗೆ ತಲುಪಿಸುವ ಉದ್ದೇಶದಿಂದ ಡಿವಿಜಿಸುದ್ದಿ.ಕಾಂ ಕನ್ನಡ ಆನ್ ಲೈನ್ ನ್ಯೂಸ್ ಪೋರ್ಟಲ್ (ಡಿಜಿಟಲ್ ಮಾಧ್ಯಮ) ಸ್ಥಾಪಿಸಲಾಗಿದೆ. ಸ್ಥಳೀಯ ಸುದ್ದಿ ಜೊತೆ ಇನ್ಫೋರ್ಮೆಟಿವ್ ನ್ಯೂಸ್ ಕೊಡುವುದು ಮೊದಲ ಆದ್ಯತೆ. ಇದಲ್ಲದೆ ರಾಜಕೀಯ, ಶಿಕ್ಷಣ, ಉದ್ಯೋಗ, ಕ್ರೀಡೆ, ಅಪರಾಧ ಸುದ್ದಿ ಹಾಗೂ ವಿಶೇಷವಾಗಿ ಕೃಷಿ ಮತ್ತು ರೈತರಿಗೆ ಉಪಯುಕ್ತ ಮಾಹಿತಿ ನೀಡುವುದು ಮುಖ್ಯ ಉದ್ದೇಶ. ಸುದ್ದಿ, ಮಾಹಿತಿ, ಸಲಹೆ, ಸೂಚನೆ ನೀಡಲು ವಾಟ್ಸಾಪ್ (7483892205) ಮಾಡಿ... Editor: munikondajji, MA journalism, contact number:7483892205, e-mail: dvgsuddi@gmail.com

Click to comment

Leave a Reply

Your email address will not be published. Required fields are marked *

More in ಪ್ರಮುಖ ಸುದ್ದಿ

To Top