Connect with us

Dvgsuddi Kannada | online news portal | Kannada news online

ಪೊಲೀಸರ ಭರ್ಜರಿ ಕಾರ್ಯಾಚರಣೆ; 7.9 ಕೋಟಿ ನಕಲಿ ನೋಟು ವಶ, ಅಂತರ ರಾಜ್ಯ ದಂಧೆಕೋರರ ಬಂಧನ

ರಾಷ್ಟ್ರ ಸುದ್ದಿ

ಪೊಲೀಸರ ಭರ್ಜರಿ ಕಾರ್ಯಾಚರಣೆ; 7.9 ಕೋಟಿ ನಕಲಿ ನೋಟು ವಶ, ಅಂತರ ರಾಜ್ಯ ದಂಧೆಕೋರರ ಬಂಧನ

ವಿಶಾಖಪಟ್ಟಣಂ: ಅಂತರ ರಾಜ್ಯ ದಂಧೆಕೋರರ ಭರ್ಜರಿ ಕಾರ್ಯಾಚರಣೆ ನಡೆದಿದ್ದು,  7.9 ಕೋಟಿ ರೂ. ಮೌಲ್ಯದ ನಕಲಿ ಹಣ ಹೊಂದಿದ್ದ ಇಬ್ಬರು ಆರೋಪಿಗಳನ್ನು ಆಂಧ್ರ ಪ್ರದೇಶ-ಒಡಿಶಾ ಗಡಿಯ ಸುಂಕಿ ಔಟ್​ಪೋಸ್ಟ್​ನಲ್ಲಿ ಪೊಲೀಸರು ಬಂಧಿಸಿ, ಹಣವನ್ನು ವಶಕ್ಕೆ ಪಡೆದಿದ್ದಾರೆ.

ಆರೋಪಿಗಳು ಅಂತಾರಾಜ್ಯ ದಂಧೆಕೋರರು ಎಂಬುದಾಗಿ ತಿಳಿದುಬಂದಿದ್ದು, ಛತ್ತೀಸ್​ಗಢದ ರಾಯ್ಪುರದಿಂದ ಆಂಧ್ರದ ವಿಶಾಖಪಟ್ಟಣಂ ಬರುವಾಗ ಮಾರ್ಗ ಮಧ್ಯೆಯೇ ಬಂಧಿಸಲಾಗಿದೆ.

ಖಚಿತ ಮಾಹಿತಿ ಮೇರೆಗೆ ಸುಂಕಿ ಔಟ್​ಪೋಸ್ಟ್​ನಲ್ಲಿ ಪೊಲೀಸರು ವಾಹನವನ್ನು ತಡೆದು ಪರಿಶೀಲನೆ ನಡೆಸಿದಾಗ 500 ರೂ. ನೋಟಿನ ಕಂತೆಗಳ ಒಟ್ಟು 7.9 ಕೋಟಿ ರೂ. ನಕಲಿ ಹಣ ಪತ್ತೆಯಾಗಿದೆ.

ಇನ್ನು ಆಂಧ್ರದಲ್ಲಿ ಸ್ಥಳೀಯ ಸಂಸ್ಥೆ ಚುನಾವಣೆ ಸಹ ಘೋಷಣೆಯಾಗಿದ್ದು, ಮಾರ್ಚ್​ 10ರಂದು ಮತದಾನ ನಡೆಯಲಿದೆ. ಇದರ ಬೆನ್ನಲ್ಲೇ ನಕಲಿ ಹಣ ಪತ್ತೆಯಾಗಿರುವುದು ಭಾರಿ ಕುತೂಹಲಕ್ಕೆ ಕಾರಣವಾಗಿದೆ. ಇದೀಗ ಆರೋಪಿಗಳ ವಿರುದ್ಧ ಭಾರತೀಯ ದಂಡ ಸಂಹಿತೆ (ಐಪಿಸಿ) 489ಎ, 489ಬಿ, 489ಸಿ ಮತ್ತು 120ಬಿ ಸೆಕ್ಷನ್​ ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿದೆ.ಆರೋಪಿಗಳು ಪೊಲೀಸ್​ ಕಸ್ಟಡಿಯಲ್ಲಿದ್ದು, ತನಿಖೆ ಆರಂಭವಾಗಿದೆ. ಇದೇ ವೇಳೆ ಆಂಧ್ರ, ಛತ್ತೀಸ್​ಗಢ ಮತ್ತು ಒಡಿಶಾ ಮೂರು ರಾಜ್ಯಗಳ ಪೊಲೀಸರು ತಂಡವೊಂದನ್ನು ರಚಿಸಿ ಗ್ಯಾಂಗ್​ನ ಉಳಿದ ಸದಸ್ಯರಿಗಾಗಿ ಬಲೆ ಬೀಡಲಾಗಿದೆ.

 

ಲೋಕಲ್ ಸುದ್ದಿಗಳನ್ನು ಕ್ಷಣಾರ್ಧದಲ್ಲಿ ಲೋಕದ ಜನರ ಬೆರಳ ತುದಿಗೆ ತಲುಪಿಸುವ ಉದ್ದೇಶದಿಂದ ಡಿವಿಜಿಸುದ್ದಿ.ಕಾಂ ಕನ್ನಡ ಆನ್ ಲೈನ್ ನ್ಯೂಸ್ ಪೋರ್ಟಲ್ (ಡಿಜಿಟಲ್ ಮಾಧ್ಯಮ) ಸ್ಥಾಪಿಸಲಾಗಿದೆ. ಸ್ಥಳೀಯ ಸುದ್ದಿ ಜೊತೆ ಇನ್ಫೋರ್ಮೆಟಿವ್ ನ್ಯೂಸ್ ಕೊಡುವುದು ಮೊದಲ ಆದ್ಯತೆ. ಇದಲ್ಲದೆ ರಾಜಕೀಯ, ಶಿಕ್ಷಣ, ಉದ್ಯೋಗ, ಕ್ರೀಡೆ, ಅಪರಾಧ ಸುದ್ದಿ ಹಾಗೂ ವಿಶೇಷವಾಗಿ ಕೃಷಿ ಮತ್ತು ರೈತರಿಗೆ ಉಪಯುಕ್ತ ಮಾಹಿತಿ ನೀಡುವುದು ಮುಖ್ಯ ಉದ್ದೇಶ. ಸುದ್ದಿ, ಮಾಹಿತಿ, ಸಲಹೆ, ಸೂಚನೆ ನೀಡಲು ವಾಟ್ಸಾಪ್ (7483892205) ಮಾಡಿ... Editor: munikondajji, MA journalism, contact number:7483892205, e-mail: dvgsuddi@gmail.com

Click to comment

Leave a Reply

Your email address will not be published. Required fields are marked *

More in ರಾಷ್ಟ್ರ ಸುದ್ದಿ

To Top