ನವದೆಹಲಿ : ಕೇಂದ್ರ ಸರ್ಕಾರವು ರೈತ ಸಮುದಾಯಕ್ಕೆ ಸಿಹಿ ಸುದ್ದಿ ನೀಡಿದ್ದು, ರಸಗೊಬ್ಬರ ಖರೀದಿಸುವ ರೈತರ ಖಾತೆಗಳಿಗೆ ನೇರವಾಗಿ ಹಣ ವರ್ಗಾವಣೆ ಮಾಡಲಾಗುವುದು ಎಂದು ಕೇಂದ್ರ ರಾಸಾಯನಿಕ ಮತ್ತು ರಸಗೊಬ್ಬರ ಖಾತೆ ಸಚಿವ ಡಿ.ವಿ.ಸದಾನಂದಗೌಡ ಹೇಳಿದ್ದಾರೆ.
ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ ಅವರೊಂದಿಗೆ ಕಾರ್ಖಾನೆಗೆ ಭೇಟಿ ನೀಡಿ ಪುನಶ್ಚೇತನ ಕಾಮಗಾರಿ ಪ್ರಗತಿ ಪರಿಶಿಲಿಸಿದ ನಂತರ ಜಂಟಿ ಸುದ್ದಿಗೋಷ್ಠಿ ಉದ್ದೇಶಿಸಿ ಮಾತನಾಡಿದ ಸದಾನಂದಗೌಡ ಈ ಮಾಹಿತಿ ನೀಡಿದ್ದಾರೆ.
ರಸಗೊಬ್ಬರ ಸಬ್ಸಿಡಿಯನ್ನು ರೈತರಿಗೆ ಉತ್ಪಾದಕರ ಮೂಲಕ ನೀಡಲಾಗುತ್ತಿತ್ತು. ಇದರ ಬದಲಿಗೆ ಇನ್ನುಮುಂದೆ ರಸಗೊಬ್ಬರ ಖರೀದಿಸುವ ರೈತರ ಖಾತೆಗಳಿಗೆ ನೇರವಾಗಿ ಹಣ ವರ್ಗಾವಣೆ ಮಾಡಲಾಗುವುದು. ಈ ಬಗ್ಗೆ ಇಲಾಖೆಯು ತಾಂತ್ರಿಕ ಸಿದ್ಧತೆ ಮಾಡಿಕೊಳ್ಳುತ್ತಿದೆ ಎಂದು ತಿಳಿಸಿದ್ದಾರೆ.



