Connect with us

Dvgsuddi Kannada | online news portal | Kannada news online

ಅನಧಿಕೃತ ಮಸೀದಿ ಮೇಲಿನ ಮೈಕ್ ತೆರವಿಗೆ ಹೋರಾಟ: ಗಂಗಾಧರ ಕುಲಕರ್ಣಿ

ದಾವಣಗೆರೆ

ಅನಧಿಕೃತ ಮಸೀದಿ ಮೇಲಿನ ಮೈಕ್ ತೆರವಿಗೆ ಹೋರಾಟ: ಗಂಗಾಧರ ಕುಲಕರ್ಣಿ

ದಾವಣಗೆರೆ: ಶ್ರೀರಾಮ ಸೇನೆಯಿಂದ  ಏಪ್ರೀಲ್ ಕೊನೆಯಲ್ಲಿ  ರಾಜ್ಯಾದ್ಯಂತ ಅನಧಿಕೃತ ಮಸೀದಿ ಮೇಲಿನ ಮೈಕ್‍ಗಳನ್ನು ತೆರವುಗೊಳಿಸಲು ಹೋರಾಟ ನಡೆಸಲಾಗುವುದು ಎಂದು ಸೇನೆಯ ರಾಜ್ಯ ಕಾರ್ಯಾಧ್ಯಕ್ಷ ಗಂಗಾಧರ ಕುಲಕರ್ಣಿ ಹೇಳಿದರು.

ರಾಜ್ಯದಲ್ಲಿರುವ ಅನಧಿಕೃತ ಮಸೀದಿಗಳ ಬಗ್ಗೆ ನಮ್ಮ ತಂಡದಿಂದ ಮಾಹಿತಿ ಕಲೆಹಾಕಲಾಗುತ್ತಿದೆ. ರಾತ್ರಿ 10 ರಿಂದ ಬೆಳಿಗ್ಗೆ 6 ರವರೆಗೆ ಯಾವುದೇ ಮೈಕ್ ಹಾಕಬಾರದು ಹಾಕಿದರಾದರೂ ಇಂತಿಷ್ಟು ಡೆಸಿಬಲ್‍ನಲ್ಲಿ ಮಾತ್ರ ಹಾಕಲು ಸುಪ್ರೀಂ ಆದೇಶ ನೀಡಿದೆ.  ಸುಪ್ರೀಂ ನಿಯಮ ಪಾಲಿಸುತ್ತಿಲ್ಲ. ಹೀಗಾಗಿ ಇದರ ವಿರುದ್ಧ ಹೋರಾಟ ನಡೆಸಲಾಗುವುದು ಎಂದು ಸುದ್ದಿಗೋಷ್ಠಿಯಲ್ಲಿ ತಿಳಿಸಿದರು.

ಆಯೋಧ್ಯೆಯ ರಾಮ ಮಂದಿರ ನಿರ್ಮಾಣಕ್ಕೆ ಹಿಂದೂಗಳು ಸಂತೋಷದಿಂದ ಜಾತಿ, ಮತ, ಪ್ರಾಂತವನ್ನು ತೊರೆದು ಸ್ವಯಂ ಪ್ರೇರಣೆಯಾಗಿ ದಾನ ಮಾಡುತ್ತಿದ್ದಾರೆ. ಆದರೆ, ಈ ಕಾರ್ಯಕ್ಕೆ ಮಾಜಿ ಸಿಎಂ ಸಿದ್ದರಾಮಯ್ಯ ಅವರು ಟೀಕಿಸಿದ್ದಾರೆ. ಅವರೂ ಮೂಲತಃ ವಕೀಲರೂ ಆಗಿದ್ದರು. ಸುಪ್ರೀಂ ಕೋರ್ಟ್‍ನ ಐವರು ಸದಸ್ಯರ ಪೀಠ ನೀಡಿದ ತೀರ್ಪು ಇವರಿಗೆ ವಿವಾದಿತ ಅನ್ನಿಸುತ್ತಿದಿಯಾ? ತುಷ್ಠಿಕಾರಣ ರಾಜಕಾರಣ ಮಾಡಿ, ಸಮಾಜದಲ್ಲಿ ಹುಳಿ ಹಿಂಡುವ ಕೆಲಸ ಮಾಡುತ್ತಿದ್ದಾರೆ  ಎಂದು ದೂರಿದರು.

ಸುದ್ದಿಗೋಷ್ಠಿಯಲ್ಲಿ ಪರಶುರಾಮ ನಡುಮನಿ, ವಿನೋದರಾಜ್, ಜಿಲ್ಲಾಧ್ಯಕ್ಷ ಮಣಿಸರ್ಕಾರ್, ಜಿಲ್ಲಾ ಉಪಾಧ್ಯಕ್ಷ ಆಲೂರು ರಾಜಶೇಖರ್, ಜಿ ಪ್ರಧಾನ ಕಾರ್ಯದರ್ಶಿ ಸಾಗರ್, ಖಜಾಂಚಿ ಶ್ರೀಧರ್, ರಮೇಶ್ ಕರಾಟೆ, ಸುನೀಲ್ ವಾಲಿ, ಪ್ರಭು ಮತ್ತಿತರರು ಇದ್ದರು.

 

ಲೋಕಲ್ ಸುದ್ದಿಗಳನ್ನು ಕ್ಷಣಾರ್ಧದಲ್ಲಿ ಲೋಕದ ಜನರ ಬೆರಳ ತುದಿಗೆ ತಲುಪಿಸುವ ಉದ್ದೇಶದಿಂದ ಡಿವಿಜಿಸುದ್ದಿ.ಕಾಂ ಕನ್ನಡ ಆನ್ ಲೈನ್ ನ್ಯೂಸ್ ಪೋರ್ಟಲ್ (ಡಿಜಿಟಲ್ ಮಾಧ್ಯಮ) ಸ್ಥಾಪಿಸಲಾಗಿದೆ. ಸ್ಥಳೀಯ ಸುದ್ದಿ ಜೊತೆ ಇನ್ಫೋರ್ಮೆಟಿವ್ ನ್ಯೂಸ್ ಕೊಡುವುದು ಮೊದಲ ಆದ್ಯತೆ. ಇದಲ್ಲದೆ ರಾಜಕೀಯ, ಶಿಕ್ಷಣ, ಉದ್ಯೋಗ, ಕ್ರೀಡೆ, ಅಪರಾಧ ಸುದ್ದಿ ಹಾಗೂ ವಿಶೇಷವಾಗಿ ಕೃಷಿ ಮತ್ತು ರೈತರಿಗೆ ಉಪಯುಕ್ತ ಮಾಹಿತಿ ನೀಡುವುದು ಮುಖ್ಯ ಉದ್ದೇಶ. ಸುದ್ದಿ, ಮಾಹಿತಿ, ಸಲಹೆ, ಸೂಚನೆ ನೀಡಲು ವಾಟ್ಸಾಪ್ (7483892205) ಮಾಡಿ... Editor: munikondajji, MA journalism, contact number:7483892205, e-mail: dvgsuddi@gmail.com

Click to comment

Leave a Reply

Your email address will not be published. Required fields are marked *

More in ದಾವಣಗೆರೆ

ದಾವಣಗೆರೆ

Advertisement
Advertisement Enter ad code here

Title

To Top