Connect with us

Dvgsuddi Kannada | online news portal | Kannada news online

ದಾವಣಗೆರೆ ಮಹಾನಗರ ಪಾಲಿಕೆ ಉಪ ಚುನಾವಣೆಗೆ ಡೇಟ್ ಫಿಕ್ಸ್; 20, 22 ನೇ ವಾರ್ಡ್ ನಲ್ಲಿ ಮಾ.29 ಬೈ ಎಲೆಕ್ಷನ್ ..!  

ದಾವಣಗೆರೆ

ದಾವಣಗೆರೆ ಮಹಾನಗರ ಪಾಲಿಕೆ ಉಪ ಚುನಾವಣೆಗೆ ಡೇಟ್ ಫಿಕ್ಸ್; 20, 22 ನೇ ವಾರ್ಡ್ ನಲ್ಲಿ ಮಾ.29 ಬೈ ಎಲೆಕ್ಷನ್ ..!  

ದಾವಣಗೆರೆ: ಕಾಂಗ್ರೆಸ್ ಪಕ್ಷದಿಂದ ಗೆದ್ದು ಬದಲಾದ ರಾಜಕಾಣದಲ್ಲಿ ರಾಜೀನಾಮೆ ಸಲ್ಲಿಸಿದ ದಾವಣಗೆರೆ ಮಹಾನಗರ ಪಾಲಿಕೆಯ 20, 22 ನೇ ವಾರ್ಡ್ ಗಳಿಗೆ ರಾಜ್ಯ  ಚುನಾವಣೆ ಆಯೋಗ ಮಾ. 29 ರಂದು ಚುನಾವಣೆ ಘೋಷಣೆ ಮಾಡಿದೆ. ಈ ಮೂಲಕ ಕಾಂಗ್ರೆಸ್ ಪಕ್ಷದಿಂದ ಆಯ್ಕೆಯಾಗಿದ್ದ 20 ನೇ ವಾರ್ಡ್ನ   ಯಶೋಧ ಉಮೇಶ್ ಹಾಗೂ 22 ನೇ ವಾರ್ಡ್ ನ ದೇವರಮನಿ ಶಿವಕುಮಾರ್ ಅವರ ರಾಜೀನಾಮೆಯಿಂದ ತೆರವಾಗಿದ್ದ ಸ್ಥಾನಗಳಿಗೆ ಚುನಾವಣೆ ನಡೆಯಲಿದೆ.

ಈ ಎರಡು ವಾರ್ಡ್ ಗಳಿಗೆ ಜಿಲ್ಲಾಧಿಕಾರಿ ಇಂದು (ಮಾ.10 ) ಅಧಿಸೂಚನೆ ಹೊರಡಿಸಲಿದ್ದಾರೆ.  ಮಾ.17 ರಂದು ನಾಮಪತ್ರ ಸಲ್ಲಿಕೆ ಕೊನೆಯ ದಿನವಾಗಿದೆ. ಮಾ. 18 ರಂದು ನಾಮಪತ್ರ ಪರಿಶೀಲನೆ ನಡೆಯಲಿದೆ.  ಮಾ. 20 ರಂದು ಹಿಂಪಡೆಯಲು ಕೊನೆಯ ದಿನವಾಗಿದೆ. ಮತದಾನ ಅವಶ್ಯವಿದ್ದರೆ ಮಾ. 29 ರಂದು ಚುನಾವಣೆ ನಡೆಯಲಿದೆ.  ಮರು ಮತದಾನ ಇದ್ದಲ್ಲಿ ಮಾ.30 ನಡೆಲಿದೆ. ಮಾ. 31 ರಂದು ಮತ ಎಣಿಕೆ ನಡೆಯಲಿದೆ.

ಮಾದರಿ ನೀತಿ ಸಂಹಿತೆ ತಕ್ಷಣದಿಂದಲೇ ಜಾರಿ ಇರುತ್ತದೆ. ಮಾ. 10 ರಿಂದಲೇ 31 ವರೆಗೆ ಪಾಲಿಕೆ ವ್ಯಾಪ್ತಿಯಲ್ಲಿ ಸದಾಚಾರ ಸಂಹಿತೆ ಜಾರಿಯಲ್ಲಿರುತ್ತದೆ ಎಂದು ಆಯೋಗ ಪ್ರಕರಣೆಯಲ್ಲಿ ತಿಳಿಸಿದೆ.

 

davanere palike by election

ಲೋಕಲ್ ಸುದ್ದಿಗಳನ್ನು ಕ್ಷಣಾರ್ಧದಲ್ಲಿ ಲೋಕದ ಜನರ ಬೆರಳ ತುದಿಗೆ ತಲುಪಿಸುವ ಉದ್ದೇಶದಿಂದ ಡಿವಿಜಿಸುದ್ದಿ.ಕಾಂ ಕನ್ನಡ ಆನ್ ಲೈನ್ ನ್ಯೂಸ್ ಪೋರ್ಟಲ್ (ಡಿಜಿಟಲ್ ಮಾಧ್ಯಮ) ಸ್ಥಾಪಿಸಲಾಗಿದೆ. ಸ್ಥಳೀಯ ಸುದ್ದಿ ಜೊತೆ ಇನ್ಫೋರ್ಮೆಟಿವ್ ನ್ಯೂಸ್ ಕೊಡುವುದು ಮೊದಲ ಆದ್ಯತೆ. ಇದಲ್ಲದೆ ರಾಜಕೀಯ, ಶಿಕ್ಷಣ, ಉದ್ಯೋಗ, ಕ್ರೀಡೆ, ಅಪರಾಧ ಸುದ್ದಿ ಹಾಗೂ ವಿಶೇಷವಾಗಿ ಕೃಷಿ ಮತ್ತು ರೈತರಿಗೆ ಉಪಯುಕ್ತ ಮಾಹಿತಿ ನೀಡುವುದು ಮುಖ್ಯ ಉದ್ದೇಶ. ಸುದ್ದಿ, ಮಾಹಿತಿ, ಸಲಹೆ, ಸೂಚನೆ ನೀಡಲು ವಾಟ್ಸಾಪ್ (7483892205) ಮಾಡಿ... Editor: munikondajji, MA journalism, contact number:7483892205, e-mail: dvgsuddi@gmail.com

Click to comment

Leave a Reply

Your email address will not be published. Required fields are marked *

More in ದಾವಣಗೆರೆ

To Top