ದಾವಣಗೆರೆ: ರಾಜ್ಯ ಚುನಾವಣಾ ಆಯೋಗವು ಮೇ-2021ರ ಮಾಹೆಯವರೆಗೆ ಅವಧಿ ಮುಕ್ತಾಯಗೊಳ್ಳಲಿರುವ ದಾವಣಗೆರೆ ತಾಲ್ಲೂಕು ವ್ಯಾಪ್ತಿಗೆ ಒಳಪಟ್ಟ ಬೇತೂರು, ಕನಗೊಂಡನಹಳ್ಳಿ, ಕುಕ್ಕವಾಡ ಹಾಗೂ ಮಾಯಕೊಂಡ ಗ್ರಾಮ ಪಂಚಾಯಿತಿಗಳಿಗೆ ಸಾರ್ವತ್ರಿಕ ಚುನಾವಣೆ ನಡೆಸಲು ಘೋಷಿಸಿದ್ದು, ಕರ್ನಾಟಕ ಗ್ರಾಮ ಸ್ವರಾಜ್ ಮತ್ತು ಪಂಚಾಯತ್ ರಾಜ್ ಅಧಿನಿಯಮದನ್ವಯ ಚುನಾವಣಾ ವೇಳಾಪಟ್ಟಿ ಘೋಷಣೆಯಾಗಿದೆ. ದಾವಣಗೆರೆ ಮಹಾನಗರ ಪಾಲಿಕೆ ಉಪ ಚುನಾವಣೆಗೆ ಡೇಟ್ ಫಿಕ್ಸ್; 20, 22 ನೇ ವಾರ್ಡ್ ನಲ್ಲಿ ಮಾ.29 ಬೈ ಎಲೆಕ್ಷನ್ ..!
ಮಾ.15 ರಂದು ಜಿಲ್ಲಾಧಿಕಾರಿಗಳು ಚುನಾವಣಾ ಅಧಿಸೂಚನೆಯನ್ನು ಹೊರಡಿಸುವರು. ದಿನಾಂಕ. ಮಾ.19 ರಂದು ನಾಮಪತ್ರಗಳನ್ನು ಸಲ್ಲಿಸಲು ಕೊನೆಯ ದಿನಾಂಕವಾಗಿರುತ್ತದೆ. ಮಾ.20 ರಂದು ನಾಮಪತ್ರಗಳನ್ನು ಪರಿಶೀಲಿಸುವ ದಿನವಾಗಿರುತ್ತದೆ. ಮಾ.22 ರಂದು ಉಮೇದುವಾರಿಕೆಗಳನ್ನು ಹಿಂತೆಗೆದುಕೊಳ್ಳಲು ಕೊನೆಯ ದಿನ. ಮಾ.29 ರಂದು ಬೆಳಿಗ್ಗೆ 7 ರಿಂದ ಸಂಜೆ 5 ಗಂಟೆಯವರೆಗೆ ಮತದಾನ ಅವಶ್ಯವಿದ್ದರೆ ಮತದಾನವನ್ನು ನಡೆಸುವ ದಿನ. ಮಾ.30 ರಂದು ಬೆಳಿಗ್ಗೆ 7 ರಿಂದ ಸಂಜೆ 5 ಗಂಟೆಯವರೆಗೆ ಮರು ಮತದಾನ ಅವಶ್ಯವಿದ್ದರೆ, ಮತದಾನವನ್ನು ನಡೆಸಬೇಕಾದ ದಿನ. ಮಾ.31 ರಂದು ಬೆಳಿಗ್ಗೆ 8 ಗಂಟೆಯಿಂದ ಮತ ಎಣಿಕೆ ಕಾರ್ಯ ನಡೆಸುವ ಮತ್ತು ಚುನಾವಣಾ ಮುಕ್ತಾಯ ದಿನಾಂಕವಾಗಿರುತ್ತದೆ ಎಂದು 108-ಮಾಯಕೊಂಡ ವಿಧಾನಸಭಾ ಕ್ಷೇತ್ರದ ಸಹಾಯಕ ಮತದಾರರ ನೋಂದಣಾಧಿಕಾರಿ ಹಾಗೂ ದಾವಣಗೆರೆ ತಹಶೀಲ್ದಾರ್ ಬಿ.ಎನ್ ಗಿರೀಶ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ದಾವಣಗೆರೆ: ಮೇಯರ್ ಎಸ್.ಟಿ. ವೀರೇಶ್ ಅಧ್ಯಕ್ಷತೆಯಲ್ಲಿ 4 ಸ್ಥಾಯಿ ಸಮಿತಿಗೆ ಅಧ್ಯಕ್ಷರ ಆಯ್ಕೆ



