ಡಿವಿಡಿ ಸುದ್ದಿ, ದಾವಣಗೆರೆ: ಮಹಾನಗರ ಪಾಲಿಕೆಯ ಚುನಾವಣೆ ಘೋಷಣೆ ಹಿನ್ನೆಲೆ ದಾವಣಗೆರೆ ದಕ್ಷಿಣ ವಿಭಾಗದ ಕಾಂಗ್ರೆಸ್ ಪಕ್ಷದ ಟಿಕೆಟ್ ಆಕಾಂಕ್ಷಿಗಳ ಪೂರ್ವಭಾವಿ ಸಭೆಯನ್ನು ನಾಳೆ ಬೆಳಗ್ಗೆ 11.30 ಕ್ಕೆ ನಗರದ ಬಕ್ಕೇಶ್ವರ ಕಲ್ಯಾಣ ಮಂಟಪದಲ್ಲಿ ಆಯೋಜಿಸಿದೆ.
ದಾವಣಗೆರೆ ದಕ್ಷಿಣ ವಿಧಾನ ಸಭಾಕ್ಷೇತ್ರದ ಶಾಸಕ ಹಾಗೂ ಪಕ್ಷದ ಹಿರಿಯರಾದ ಶಾಮನೂರು ಶಿವಶಂಕರಪ್ಪ ,ಮಾಜಿ ಶಾಸಕ ಎಸ್.ಎಸ್. ಮಲ್ಲಿಕಾರ್ಜುನ, ಎಂಎಲ್ಸಿ ಅಬ್ದುಲ್ ಜಬ್ಬರ್, ಜಿಲ್ಲಾ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಎಚ್.ಬಿ.ಮಂಜಪ್ಪ , ಕೆಪಿಸಿಸಿ ಜಿಲ್ಲಾ ಪ್ರಧಾನ ಕಾಯ೯ದಶಿ೯ ದಿನೇಶ್ ಕೆ. ಶೆಟ್ಟಿ, ದಾವಣಗೆರೆ ದಕ್ಷಿಣ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಅಯೂಬ್ ಪೈಲ್ವಾನ್ ಸಭೆಯಲ್ಲಿ ಭಾಗಿಯಾಗಲಿದ್ದಾರೆ.
ದಾವಣಗೆರೆ ದಕ್ಷಿಣ ವಲಯದ ಟಿಕೆಟ್ ಆಕಾಂಕ್ಷಿಗಳು, ಕಾಯ೯ಕತ೯ರು, ಅಭಿಮಾನಿಗಳು ಆಗಮಿಸಿ ಈ ಪೂರ್ವಭಾವಿ ಸಭೆಯನ್ನು ಯಶಸ್ವಿಗೊಳಿಸಬೇಕೆಂದು ಕೋರಲಾಗಿದೆ.



