ದಾವಣಗೆರೆ: ಭಾರತೀಯ ಜನತಾ ಪಾರ್ಟಿ ಪಕ್ಷದ ಜಿಲ್ಲಾ ಕಚೇರಿಯಲ್ಲಿ ದಾವಣಗೆರೆ ಉತ್ತರ ವಿಧಾನಸಭಾ ಕ್ಷೇತ್ರದ ಬಿಜೆಪಿ ಕಾರ್ಯಕಾರಿಣಿ ಸಭೆ ಮತ್ತು ಮಹಾನಗರ ಪಾಲಿಕೆ ಉತ್ತರ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ 22 ನೇ ವಾರ್ಡ್ ಉಪ ಚುನಾವಣಾ ಪೂರ್ವಭಾವಿ ಸಭೆಯನ್ನು ನಡೆಸಲಾಯಿತು. ಈ ಸಂದರ್ಭದಲ್ಲಿ ಮಾಜಿ ಸಚಿವರು ಶಾಸಕರಾದ ಎಸ್ ಎ ರವೀಂದ್ರನಾಥ್ ಮಾಜಿ ಮುಖ್ಯ ಸಚೇತಕರಾದ ಶ್ರೀ ಎ ಹೆಚ್ ಶಿವಯೋಗಿಸ್ವಾಮಿ ಜಿಲ್ಲಾ ಅಧ್ಯಕ್ಷರಾದ ವೀರೇಶ್ ಹನಗವಾಡಿ ಉತ್ತರ ಮಂಡಲ ಅಧ್ಯಕ್ಷ ಸಂಗನಗೌಡರು, ಉತ್ತರ ವಿಧಾನಸಭಾ ಉಪಾಧ್ಯಕ್ಷ ಉಮೇಶ್ ಪಾಟೀಲ್, ಜಿಲ್ಲಾ ಪ್ರಧಾನ ಕಾರ್ಯದರ್ಶಿ ಬಿ. ಎಸ್. ಜಗದೀಶ್ ಸೇರಿದಂತೆ ಪಕ್ಷದ ಅನೇಕ ಮುಖಂಡರು ಭಾಗವಹಿಸಿದ್ದರು.



