ಮೈಸೂರು: ಇನ್ನು ಮುಂದೆ ಜೆಡಿಎಸ್ ಜೊತೆ ಕಾಂಗ್ರೆಸ್ ಪಕ್ಷ ಯಾವುದೇ ಮೈತ್ರಿ ಹೊಂದಲ್ಲ. ಸಹಕಾರ ಸಂಘಗಳ ಚುನಾವಣೆ ಚಿಹ್ನೆ ಮೇಲೆ ನಡೆಯಲ್ಲ. ಹೀಗಾಗಿ ಸ್ಥಳೀಯವಾಗಿ ಹೊಂದಾಣಿಕೆ ಮಾಡಿಕೊಂಡಿರುತ್ತಾರೆ. ಆದರೂ ನಮ್ಮ ಕಡೆಯಿಂದ ಜೆಡಿಎಸ್ ಗೆ ಯಾವುದೇ ಬೆಂಬಲ ಇಲ್ಲ ಎಂದು ಮೈಸೂರಿನಲ್ಲಿ ಸಿದ್ದರಾಮಯ್ಯ ಹೇಳಿದ್ದಾರೆ.
ಸುದ್ದಿಗಾರರೊಅಮದಿಗೆ ಮಾತನಾಡಿದ ಅವರು, ಕುಮಾರಸ್ವಾಮಿ ಹೇಳಿದರು ಅಷ್ಟೆ, ಯಾರು ಹೇಳಿದ್ರು ಅಷ್ಟೆ ಇನ್ನು ಮುಂದೆ ಮೈತ್ರಿ ಇಲ್ಲ. ರಮೇಶ್ ಜಾರಕಿಹೊಳಿ ಸಿ.ಡಿ.ಪ್ರಕರಣ ತನಿಖೆ ನಡೆಯುತ್ತಿದೆ. ತನಿಖೆಯಿಂದ ಸತ್ಯಾಸತ್ಯತೆ ಗೊತ್ತಾಗಲಿ. ಡಿ.ಕೆ. ಶಿವಕುಮಾರ್ ಹೇಳಿಕೆಗೆ ನಾನು ಪ್ರತಿಕ್ರಿಯಿಸಲ್ಲ. ಅದು ಅವರಿಗೆ ಅನ್ನಿಸಿರಬಹುದು. ನನ್ನನ್ನು ಸಿಕ್ಕಿಸುತ್ತಿದ್ದಾರೆ ಅಂತ ಡಿಕೆಶಿಯೇ ಹೇಳಿದ್ದಾರೆ.
ಈಗ ತನಿಖೆ ನಡೆಯುತ್ತಿದೆ. ಇಂತಹ ಪ್ರಕರಣಗಳಿಂದ ರಾಜಕಾರಣಿಗಳ ಮಾನ ಮರ್ಯಾದೆ ಹೋಗುತ್ತೆ. ರಾಜಕಾರಣಿಗಳ ಬಗ್ಗೆ ಹಗುರವಾಗಿ ಮಾತನಾಡಲು ಶುರು ಮಾಡ್ತಾರೆ ಎಂದರು.



