ಕೆರೆ ಮುಚ್ಚಿ ಬಸ್ ನಿಲ್ದಾಣ ನಿರ್ಮಾಣ ಮಾಡೋದಕ್ಕೆ ಖಡ್ಗ ಸಂಘಟನೆ ಖಂಡನೆ

Dvgsuddi
By
Dvgsuddi
ಲೋಕಲ್ ಸುದ್ದಿಗಳನ್ನು ಕ್ಷಣಾರ್ಧದಲ್ಲಿ ಲೋಕದ ಜನರ ಬೆರಳ ತುದಿಗೆ ತಲುಪಿಸುವ ಉದ್ದೇಶದಿಂದ ಡಿವಿಜಿಸುದ್ದಿ.ಕಾಂ ಕನ್ನಡ ಆನ್ ಲೈನ್ ನ್ಯೂಸ್ ಪೋರ್ಟಲ್ (ಡಿಜಿಟಲ್ ಮಾಧ್ಯಮ) ಸ್ಥಾಪಿಸಲಾಗಿದೆ. ಸ್ಥಳೀಯ ಸುದ್ದಿ ಜೊತೆ ಇನ್ಫೋರ್ಮೆಟಿವ್ ನ್ಯೂಸ್ ಕೊಡುವುದು ಮೊದಲ ಆದ್ಯತೆ....
1 Min Read

ಡಿವಿಜಿ ಸುದ್ದಿ, ದಾವಣಗೆರೆ: ಬರದ ಛಾಯೆಯಲ್ಲಿರುವ ಹರಪನಹಳ್ಳಿ ತಾಲ್ಲೂಕಿನ ಉಚ್ಚಂಗಿದುರ್ಗದಲ್ಲಿ ಕೆರೆ ಮುಚ್ಚಿ ಬಸ್ ನಿಲ್ದಾಣ ನಿರ್ಮಾಣ ಮಾಡವುದಕ್ಕೆ ಖಡ್ಗ ಸ್ವಯಂ ಸೇವಕ ಸಂಘಟನೆ ತೀವ್ರವಾಗಿ ಖಂಡಿಸಿದೆ.

ಈ ಬಗ್ಗೆ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ  ಸಂಘಟನೆ ಉಪಾಧ್ಯಕ್ಷ ಬಸವರಾಜ್ ಬೆಳ್ಳೂಡಿ, ಉಚ್ಚಂಗಿದುರ್ಗದಲ್ಲಿ ಸ.ನಂ 42 ರಲ್ಲಿ ಬರುವ 4.5 ಎಕರೆ ಕೆರೆ ಜಮೀನನಲ್ಲಿ ಈಗಾಗಲೇ ಒತ್ತುವರಿಯಾಗಿ ಕೇವಲ ಅರ್ಧ ಎಕೆರೆ ಮಾತ್ರ ಉಳಿದಿದ್ದು, ಇದೀಗ ಅದನ್ನು ಮುಚ್ಚಿ ಬಸ್ ನಿರ್ಮಾಣ ಮಾಡಲು ಮುಂದಾಗಿರುವ ಉಚ್ಚಂಗಿದುರ್ಗ ಗ್ರಾಮ ಪಂಚಾಯತಿ ನಿರ್ಧಾರವನ್ನು ಖಂಡಿಸುತ್ತೇವೆ.

duruga dvgsuddi 2

ಈ ಬಗ್ಗೆ ಕಳೆದ 2 ವರ್ಷದಿಂದ ಖಡ್ಗ ಸಂಘಟನೆ ಹೋರಾಟ ಮಾಡುತ್ತಾ ಬಂದಿದೆ. ಕೆರೆ ಉಳಿಸುವಂತೆ  ಜಿಲ್ಲಾಧಿಕಾರಿ, ತಹಶಿಲ್ದಾರ್ , ಗ್ರಾಮ ಪಂಚಾಯತಿ ಅಧಿಕಾರಿಗಳಿ ಮನವಿ ಸಲ್ಲಿಸಿದರೂ ಪ್ರಯೋಜನವಾಗಿಲ್ಲ.

duruga dvgsuddi 1

ಕುಡಿಯುವುದಕ್ಕೂ ನೀರಿನ ಬರ  ಎದುರಿಸುತ್ತಿರುವ  ಈ ಗ್ರಾಮದಲ್ಲಿ ಜಲ ಸಂರಕ್ಷಣೆ ಮಾಡಬೇಕಾದ ಗ್ರಾಮ ಪಂಚಾಯತಿ ಅಧ್ಯಕ್ಷರು, ಸದಸ್ಯರೇ ಕೆರೆ ಮುಚ್ಚಲು ಮುಂದಾಗಿದ್ದಾರೆ. ಈ ಬಗ್ಗೆ ಕೇಳಲು ಹೋದರ ಮೇಲೆ ದೌರ್ಜನ್ಯ ನಡೆಸುತ್ತಾರೆ. ಈ ಬಗ್ಗೆ ಜಿಲ್ಲಾಧಿಕಾರಿಗಳು ಗಮನಹರಿಸಿ ಕೊಡಲೇ ಕ್ರಮ ಕೈಗೊಳ್ಳಬೇಕು  ಎಂದು  ಆಗ್ರಹಿಸಿದರು.

 

Share This Article
Follow:
ಲೋಕಲ್ ಸುದ್ದಿಗಳನ್ನು ಕ್ಷಣಾರ್ಧದಲ್ಲಿ ಲೋಕದ ಜನರ ಬೆರಳ ತುದಿಗೆ ತಲುಪಿಸುವ ಉದ್ದೇಶದಿಂದ ಡಿವಿಜಿಸುದ್ದಿ.ಕಾಂ ಕನ್ನಡ ಆನ್ ಲೈನ್ ನ್ಯೂಸ್ ಪೋರ್ಟಲ್ (ಡಿಜಿಟಲ್ ಮಾಧ್ಯಮ) ಸ್ಥಾಪಿಸಲಾಗಿದೆ. ಸ್ಥಳೀಯ ಸುದ್ದಿ ಜೊತೆ ಇನ್ಫೋರ್ಮೆಟಿವ್ ನ್ಯೂಸ್ ಕೊಡುವುದು ಮೊದಲ ಆದ್ಯತೆ. ಇದಲ್ಲದೆ ರಾಜಕೀಯ, ಶಿಕ್ಷಣ, ಉದ್ಯೋಗ, ಕ್ರೀಡೆ, ಅಪರಾಧ ಸುದ್ದಿ ಹಾಗೂ ವಿಶೇಷವಾಗಿ ಕೃಷಿ ಮತ್ತು ರೈತರಿಗೆ ಉಪಯುಕ್ತ ಮಾಹಿತಿ ನೀಡುವುದು ಮುಖ್ಯ ಉದ್ದೇಶ. ಸುದ್ದಿ, ಮಾಹಿತಿ, ಸಲಹೆ, ಸೂಚನೆ ನೀಡಲು ವಾಟ್ಸಾಪ್ (7483892205) ಮಾಡಿ... Editor: munikondajji, MA journalism, contact number:7483892205, e-mail: dvgsuddi@gmail.com
Leave a Comment

Leave a Reply

Your email address will not be published. Required fields are marked *