ದಾವಣಗೆರೆ ಮಹಾನಗರ ಪಾಲಿಕೆ ಉಪ ಚುನಾವಣೆ; ಎರಡು ವಾರ್ಡ್ ನಲ್ಲಿ 14 ನಾಮಪತ್ರ ಕ್ರಮ ಬದ್ಧ; 1 ಅರ್ಜಿ ತಿರಸ್ಕೃತ

Dvgsuddi
By
Dvgsuddi
ಲೋಕಲ್ ಸುದ್ದಿಗಳನ್ನು ಕ್ಷಣಾರ್ಧದಲ್ಲಿ ಲೋಕದ ಜನರ ಬೆರಳ ತುದಿಗೆ ತಲುಪಿಸುವ ಉದ್ದೇಶದಿಂದ ಡಿವಿಜಿಸುದ್ದಿ.ಕಾಂ ಕನ್ನಡ ಆನ್ ಲೈನ್ ನ್ಯೂಸ್ ಪೋರ್ಟಲ್ (ಡಿಜಿಟಲ್ ಮಾಧ್ಯಮ) ಸ್ಥಾಪಿಸಲಾಗಿದೆ. ಸ್ಥಳೀಯ ಸುದ್ದಿ ಜೊತೆ ಇನ್ಫೋರ್ಮೆಟಿವ್ ನ್ಯೂಸ್ ಕೊಡುವುದು ಮೊದಲ ಆದ್ಯತೆ....
1 Min Read

ದಾವಣಗೆರೆ: ದಾವಣಗೆರೆ ಮಹಾನಗರ ಪಾಲಿಕೆ ಉಪ ಚುನಾವಣೆಯ ಯಲ್ಲಮ್ಮನಗರ ಮತ್ತು ಭಾರತ್ ಕಾಲೋನಿ ಉಚುನಾವಣೆಯಲ್ಲಿ ಒಟ್ಟು 14 ನಾಮಪತ್ರ ಕ್ರಮ ಬದ್ಧವಾಗಿದ್ದು,  ಯಲ್ಲಮ್ಮನಗರದ ಪಕ್ಷೇತರರೊಬ್ಬರ ನಾಮಪತ್ರ ತಿರಸ್ಕೃತಗೊಂಡಿದೆ.

ಯಲ್ಲಮ್ಮನಗರದಲ್ಲಿ 11 ಮಂದಿ 12 ನಾಮಪತ್ರ ಸಲ್ಲಿಸಿದ್ದರು, ಇದರಲ್ಲಿ  ದೇವರಾಜ ಅರಸು ಬಡಾವಣೆಯ ಎಸ್‌.ಕೆ. ಅಫ್ಜಲ್‌ಖಾನ್‌ ಪಕ್ಷೇತರನಾಗಿ ಸಲ್ಲಿಸಿದ್ದ ನಾಮಪತ್ರ ತಿರಸ್ಕೃತಗೊಂಡಿದೆ. ಕಾಂಗ್ರೆಸ್‌ನಿಂದ ಎಸ್‌. ರವಿಸ್ವಾಮಿ, ಬಿಜೆಪಿಯಿಂದ ಶಿವಾನಂದ ಆರ್‌. ನಾಮಪತ್ರ ಸೇರಿದಂತೆ ಎಲ್ಲ ಪಕ್ಷೇತರರ ನಾಮಪತ್ರ ಕ್ರಮ ಬದ್ಧವಾಗಿದೆ.

ಭಾರತ್‌ ಕಾಲೊನಿಯಲ್ಲಿ ಬಿಜೆಪಿಯ ರೇಣುಕಾ ಎಂ. ಕೃಷ್ಣ ಅವರು  ಎರಡು ನಾಮಪತ್ರ ಸಲ್ಲಿಸಿದ್ದರು. ಎರಡು ಕೂಡ ಕ್ರಮ ಬದ್ಧವಾಗಿದ್ದವು. ಅದರಲ್ಲಿ ಪಕ್ಷದ ಅಭ್ಯರ್ಥಿಯಾಗಿ ಸಲ್ಲಿಸಿರುವ ನಾಮಪತ್ರವನ್ನು ಮಾತ್ರ ಪರಿಗಣಿಸಲಾಗುವುದು. ಕಾಂಗ್ರೆಸ್‌ ಅಭ್ಯರ್ಥಿಯಾಗಿ ಮೀನಾಕ್ಷಿ ಎಂ. ಜಗದೀಶ್‌ ಸಲ್ಲಿಸಿರುವ ನಾಮಪತ್ರ ಸಹ ಕ್ರಮಬದ್ಧವಾಗಿದೆ ಎಂದು ಚುನಾವಣೆ ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.

 

 

Share This Article
Follow:
ಲೋಕಲ್ ಸುದ್ದಿಗಳನ್ನು ಕ್ಷಣಾರ್ಧದಲ್ಲಿ ಲೋಕದ ಜನರ ಬೆರಳ ತುದಿಗೆ ತಲುಪಿಸುವ ಉದ್ದೇಶದಿಂದ ಡಿವಿಜಿಸುದ್ದಿ.ಕಾಂ ಕನ್ನಡ ಆನ್ ಲೈನ್ ನ್ಯೂಸ್ ಪೋರ್ಟಲ್ (ಡಿಜಿಟಲ್ ಮಾಧ್ಯಮ) ಸ್ಥಾಪಿಸಲಾಗಿದೆ. ಸ್ಥಳೀಯ ಸುದ್ದಿ ಜೊತೆ ಇನ್ಫೋರ್ಮೆಟಿವ್ ನ್ಯೂಸ್ ಕೊಡುವುದು ಮೊದಲ ಆದ್ಯತೆ. ಇದಲ್ಲದೆ ರಾಜಕೀಯ, ಶಿಕ್ಷಣ, ಉದ್ಯೋಗ, ಕ್ರೀಡೆ, ಅಪರಾಧ ಸುದ್ದಿ ಹಾಗೂ ವಿಶೇಷವಾಗಿ ಕೃಷಿ ಮತ್ತು ರೈತರಿಗೆ ಉಪಯುಕ್ತ ಮಾಹಿತಿ ನೀಡುವುದು ಮುಖ್ಯ ಉದ್ದೇಶ. ಸುದ್ದಿ, ಮಾಹಿತಿ, ಸಲಹೆ, ಸೂಚನೆ ನೀಡಲು ವಾಟ್ಸಾಪ್ (7483892205) ಮಾಡಿ... Editor: munikondajji, MA journalism, contact number:7483892205, e-mail: dvgsuddi@gmail.com
Leave a Comment

Leave a Reply

Your email address will not be published. Required fields are marked *