Connect with us

Dvgsuddi Kannada | online news portal | Kannada news online

ಶಿಕ್ಷಕರ ಬಡ್ತಿಗೆ ಜೇಷ್ಠತಾ ಪಟ್ಟಿ ಪ್ರಕಟ : ಆಕ್ಷೇಪಣೆ ಸಲ್ಲಿಸಲು ಅವಕಾಶ

ದಾವಣಗೆರೆ

ಶಿಕ್ಷಕರ ಬಡ್ತಿಗೆ ಜೇಷ್ಠತಾ ಪಟ್ಟಿ ಪ್ರಕಟ : ಆಕ್ಷೇಪಣೆ ಸಲ್ಲಿಸಲು ಅವಕಾಶ

ದಾವಣಗೆರೆ: ಸರ್ಕಾರಿ ಪ್ರಾಥಮಿಕ ಶಾಲಾ ಸಹ ಶಿಕ್ಷಕರ ಹುದ್ದೆಯಿಂದ ಮುಖ್ಯ ಶಿಕ್ಷಕರ ಹುದ್ದೆಗೆ ಹಾಗೂ ಬಡ್ತಿ ಮುಖ್ಯ ಶಿಕ್ಷಕರಿಂದ ಹಿರಿಯ ಮುಖ್ಯ ಶಿಕ್ಷಕರ ಹುದ್ದೆಗೆ ಬಡ್ತಿ ನೀಡುವ ಸಂಬಂಧ 2021 ರ ಜ.31 ರಲ್ಲಿದ್ದಂತೆ ಮಾಹಿತಿ ಸರಿಪಡಿಸಲಾಗಿದ್ದು, ಡಿಡಿಪಿಐ ಅವರ ಸೂಚನೆಯಂತೆ ಜೇಷ್ಠತಾ ಪಟ್ಟಿಯನ್ನು ಪ್ರಕಟಿಸಲಾಗಿದ್ದು, ಆಕ್ಷೇಪಣೆ ಸಲ್ಲಿಸಲು ಮಾ. 22 ಕೊನೆಯ ದಿನವಾಗಿದೆ.

ಜೇಷ್ಠತಾ ಪಟ್ಟಿಯನ್ನು ಕಛೇರಿಯ ಪ್ರಕಟಣಾ ಫಲಕದಲ್ಲಿ ಪ್ರಕಟಿಸಲಾಗಿದ್ದು ಸಂಬಂಧಿಸಿದ/ಬಾಧಿತ ಶಿಕ್ಷಕರು ಜೇಷ್ಠತಾ ಪಟ್ಟಿ ಪರಿಶೀಲಿಸಿಕೊಂಡು, ಮಾಹಿತಿ ತಪ್ಪಾಗಿದ್ದಲ್ಲಿ ಅಗತ್ಯ ದಾಖಲೆಗಳೊಂದಿಗೆ ಕಛೇರಿಗೆ ಆಕ್ಷೇಪಣೆ ಸಲ್ಲಿಸಬಹುದು. ಅಲ್ಲದೆ ಯಾವುದೇ ಶಿಕ್ಷಕರ ಹೆಸರು ಪಟ್ಟಿಯಲ್ಲಿ ಬಿಟ್ಟುಹೋಗಿದ್ದಲ್ಲಿ ಅಂತಹ ಹೆಸರುಗಳನ್ನು ಸೇರ್ಪಡೆ ಮಾಡಲು ಸಂಬಂಧಿಸಿದವರು ಲಿಖಿತ ಮನವಿಯನ್ನು ಮಾ.22 ರ ಒಳಗೆ ದಾವಣಗೆರೆ ಬಿಇಒ ಉತ್ತರ ವಲಯ ಈ ಕಚೇರಿಗೆ ಸಲ್ಲಿಸಲು ಈ ಹಿಂದೆ  ತಿಳಿಸಲಾಗಿತ್ತು. ಆದರೆ ಇದುವರೆಗೂ ಯಾವುದೇ ಸಂಬಂಧಿಸಿದ/ಬಾಧಿತ ಶಿಕ್ಷಕರು ಕಚೇರಿಗೆ ಆಕ್ಷೇಪಣೆ ಸಲ್ಲಿಸಿರುವುದಿಲ್ಲ. ಸಂಬಂಧಿಸಿದವರು ತಮ್ಮ ಆಕ್ಷೇಪಣೆಗಳನ್ನು ಮಾ.22 ರ ಒಳಗಾಗಿ ಸಲ್ಲಿಸಬಹುದು ಎಂದು ದಾವಣಗೆರೆ ಉತ್ತರ ವಲಯ ಕ್ಷೇತ್ರ ಶಿಕ್ಷಣಾಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

 

ಲೋಕಲ್ ಸುದ್ದಿಗಳನ್ನು ಕ್ಷಣಾರ್ಧದಲ್ಲಿ ಲೋಕದ ಜನರ ಬೆರಳ ತುದಿಗೆ ತಲುಪಿಸುವ ಉದ್ದೇಶದಿಂದ ಡಿವಿಜಿಸುದ್ದಿ.ಕಾಂ ಕನ್ನಡ ಆನ್ ಲೈನ್ ನ್ಯೂಸ್ ಪೋರ್ಟಲ್ (ಡಿಜಿಟಲ್ ಮಾಧ್ಯಮ) ಸ್ಥಾಪಿಸಲಾಗಿದೆ. ಸ್ಥಳೀಯ ಸುದ್ದಿ ಜೊತೆ ಇನ್ಫೋರ್ಮೆಟಿವ್ ನ್ಯೂಸ್ ಕೊಡುವುದು ಮೊದಲ ಆದ್ಯತೆ. ಇದಲ್ಲದೆ ರಾಜಕೀಯ, ಶಿಕ್ಷಣ, ಉದ್ಯೋಗ, ಕ್ರೀಡೆ, ಅಪರಾಧ ಸುದ್ದಿ ಹಾಗೂ ವಿಶೇಷವಾಗಿ ಕೃಷಿ ಮತ್ತು ರೈತರಿಗೆ ಉಪಯುಕ್ತ ಮಾಹಿತಿ ನೀಡುವುದು ಮುಖ್ಯ ಉದ್ದೇಶ. ಸುದ್ದಿ, ಮಾಹಿತಿ, ಸಲಹೆ, ಸೂಚನೆ ನೀಡಲು ವಾಟ್ಸಾಪ್ (7483892205) ಮಾಡಿ... Editor: munikondajji, MA journalism, contact number:7483892205, e-mail: dvgsuddi@gmail.com

Click to comment

Leave a Reply

Your email address will not be published. Required fields are marked *

More in ದಾವಣಗೆರೆ

ದಾವಣಗೆರೆ

Advertisement
Advertisement Enter ad code here

Title

To Top