ಆಂಧ್ರ ಸರ್ಕಾರದ ಸ್ಪಂದನಾ ಕಾರ್ಯಕ್ರಮವನ್ನು ರಾಜ್ಯದಲ್ಲಿಯೂ ಜಾರಿಗೊಳಿಸಲು ಮುಂದಾದ ಸರ್ಕಾರ

Dvgsuddi
By
Dvgsuddi
ಲೋಕಲ್ ಸುದ್ದಿಗಳನ್ನು ಕ್ಷಣಾರ್ಧದಲ್ಲಿ ಲೋಕದ ಜನರ ಬೆರಳ ತುದಿಗೆ ತಲುಪಿಸುವ ಉದ್ದೇಶದಿಂದ ಡಿವಿಜಿಸುದ್ದಿ.ಕಾಂ ಕನ್ನಡ ಆನ್ ಲೈನ್ ನ್ಯೂಸ್ ಪೋರ್ಟಲ್ (ಡಿಜಿಟಲ್ ಮಾಧ್ಯಮ) ಸ್ಥಾಪಿಸಲಾಗಿದೆ. ಸ್ಥಳೀಯ ಸುದ್ದಿ ಜೊತೆ ಇನ್ಫೋರ್ಮೆಟಿವ್ ನ್ಯೂಸ್ ಕೊಡುವುದು ಮೊದಲ ಆದ್ಯತೆ....
1 Min Read

ವಿಜಯವಾಡ:  ಆಂಧ್ರ ಪ್ರದೇಶ ಮುಖ್ಯಮಂತ್ರಿ ವೈ.ಎಸ್.ಜಗನ್ ಮೋಹನ್ ರೆಡ್ಡಿ ಅವರ ಸಾರ್ವಜನಿಕ ಕುಂದುಕೊರತೆ ಪರಿಹಾರ ಕಾರ್ಯಕ್ರಮ ‘ಸ್ಪಂದನಾ’ವನ್ನು ಕರ್ನಾಟಕದಲ್ಲೂ ಜಾರಿಗೊಳಿಸಲು ಸರ್ಕಾದ ಮುಂದಾಗಿದೆ.

ಆಂಧ್ರ ಸರ್ಕಾರದ ಸ್ಪಂದನಾ ಕಾರ್ಯಕ್ರಮದಿಂದ ಪ್ರೇರಿತವಾಗಿರುವ ರಾಜ್ಯ ಸರ್ಕಾರ, ರಾಜ್ಯದ ಯೋಜನೆಯ ನಿರ್ದೇಶಕ, ಇ-ಗವರ್ನನ್ಸ್ ಯುನಿಟ್, ಪ್ರೋಗ್ರಾಂ ಮ್ಯಾನೇಜರ್, ಸೆಂಟರ್ ಫಾರ್ ಸ್ಮಾರ್ಟ್ ಗವರ್ನೆನ್ಸ್ ಮತ್ತು ಇತರರು ಸೋಮವಾರ ಆಂಧ್ರ ಪ್ರದೇಶ ಸೆಕ್ರೆಟರಿಯೇಟ್‌ನ ಆರ್‌ಟಿಜಿಎಸ್‌ನಲ್ಲಿರುವ ಕೇಂದ್ರ ಸ್ಪಂದನಾ ಮಾನಿಟರಿಂಗ್ ಘಟಕಕ್ಕೆ ಭೇಟಿ ನೀಡಿ ಮಾಹಿತಿ ಪಡೆದಿದ್ದಾರೆ.

ರಾಜ್ಯದಲ್ಲೂ ಸಾರ್ವಜನಿಕ ಕುಂದುಕೊರತೆ ಪರಿಹಾರಕ್ಕೆ ಸ್ಪಂದನಾ ಮಾದರಿಯ ಯೋಜನೆ ಜಾರಿಗೆ ತರಬೇಕು ಎಂಬ ಉದ್ದೇಶದಿಂದ ಕರ್ನಾಟಕ ತಂಡ ಆಂಧ್ರಕ್ಕೆ ಭೇಟಿ ನೀಡಿದ್ದು, ಆಂಧ್ರ ಮುಖ್ಯಮಂತ್ರಿಗಳ ವಿಶೇಷ ಅಧಿಕಾರಿ ಡಾ.ಎಂ.ಹರಿಕೃಷ್ಣ ಮತ್ತು ಆರ್‌ಟಿಜಿಎಸ್ ಸಿಇಒ ವಿದ್ಯಾ ಸಾಗರ್ ಅವರು ಸ್ಪಂದನಾ ಯೋಜನೆ ಮತ್ತು ಅದರ ತಾಂತ್ರಿಕತೆಗಳ ಬಗ್ಗೆ ಮಾಹಿತಿ ನೀಡಿದ್ದಾರೆ.

ಸ್ಪಂದನಾ ಯೋಜನೆ ಕರ್ನಾಟಕ ತಂಡಕ್ಕೆ ಸ್ಫೂರ್ತಿ ನೀಡಿದೆ ಮತ್ತು ಮುಖ್ಯಮಂತ್ರಿಗಳು ಈ ಕಾರ್ಯಕ್ರಮವನ್ನು ವೈಯಕ್ತಿಕವಾಗಿ ಹೇಗೆ ಮೇಲ್ವಿಚಾರಣೆ ಮಾಡುತ್ತಾರೆ ಎಂಬುದನ್ನು ತಿಳಿದುಕೊಂಡರು ಎಂದು ಅಧಿಕಾರಿಗಳು ತಿಳಿಸಿದ್ದಾರೆ.

 

Share This Article
Follow:
ಲೋಕಲ್ ಸುದ್ದಿಗಳನ್ನು ಕ್ಷಣಾರ್ಧದಲ್ಲಿ ಲೋಕದ ಜನರ ಬೆರಳ ತುದಿಗೆ ತಲುಪಿಸುವ ಉದ್ದೇಶದಿಂದ ಡಿವಿಜಿಸುದ್ದಿ.ಕಾಂ ಕನ್ನಡ ಆನ್ ಲೈನ್ ನ್ಯೂಸ್ ಪೋರ್ಟಲ್ (ಡಿಜಿಟಲ್ ಮಾಧ್ಯಮ) ಸ್ಥಾಪಿಸಲಾಗಿದೆ. ಸ್ಥಳೀಯ ಸುದ್ದಿ ಜೊತೆ ಇನ್ಫೋರ್ಮೆಟಿವ್ ನ್ಯೂಸ್ ಕೊಡುವುದು ಮೊದಲ ಆದ್ಯತೆ. ಇದಲ್ಲದೆ ರಾಜಕೀಯ, ಶಿಕ್ಷಣ, ಉದ್ಯೋಗ, ಕ್ರೀಡೆ, ಅಪರಾಧ ಸುದ್ದಿ ಹಾಗೂ ವಿಶೇಷವಾಗಿ ಕೃಷಿ ಮತ್ತು ರೈತರಿಗೆ ಉಪಯುಕ್ತ ಮಾಹಿತಿ ನೀಡುವುದು ಮುಖ್ಯ ಉದ್ದೇಶ. ಸುದ್ದಿ, ಮಾಹಿತಿ, ಸಲಹೆ, ಸೂಚನೆ ನೀಡಲು ವಾಟ್ಸಾಪ್ (7483892205) ಮಾಡಿ... Editor: munikondajji, MA journalism, contact number:7483892205, e-mail: dvgsuddi@gmail.com
Leave a Comment

Leave a Reply

Your email address will not be published. Required fields are marked *