Connect with us

Dvgsuddi Kannada | online news portal | Kannada news online

ರೈತರಿಗೆ ಸಿಹಿ ಸುದ್ದಿ: ಗೃಹ ಮಂಡಳಿಯಿಂದ ಹೆಚ್ಚುವರಿಯಾಗಿ ಪಡೆದ ಭೂಮಿ ರೈತರಿಗೆ ವಾಪಸ್ ; ಸಚಿವ ವಿ.ಸೋಮಣ್ಣ

ಪ್ರಮುಖ ಸುದ್ದಿ

ರೈತರಿಗೆ ಸಿಹಿ ಸುದ್ದಿ: ಗೃಹ ಮಂಡಳಿಯಿಂದ ಹೆಚ್ಚುವರಿಯಾಗಿ ಪಡೆದ ಭೂಮಿ ರೈತರಿಗೆ ವಾಪಸ್ ; ಸಚಿವ ವಿ.ಸೋಮಣ್ಣ

ಬೆಂಗಳೂರು: ಗೃಹ ಮಂಡಳಿಯ ವಸತಿ ಯೋಜನೆಗಾಗಿ ವಶಪಡಿಸಿಕೊಳ್ಳಲಾದ ಹೆಚ್ಚುವರಿ ಭೂಮಿಯನ್ನು ರೈತರಿಗೆ ವಾಪಸ್ ನೀಡುವುದಾಗಿ ವಸತಿ ಸಚಿವ ವಿ.ಸೋಮಣ್ಣ ಹೇಳಿದರು.

ವಿಧಾನ ಪರಿಷತ್‍ನ ಪ್ರಶ್ನೋತ್ತರ ಅವಧಿಯಲ್ಲಿ ಜೆಡಿಎಸ್ ಸದಸ್ಯ ಮರಿತಿಬ್ಬೇಗೌಡ ಅವರ ಪರವಾಗಿ ಅಪ್ಪಾಜಿಗೌಡ ಕೇಳಿದ ಅವರ ಪ್ರಶ್ನೆಗೆ ಸಚಿವರು  ಈ ಈ ರೀತಿ ಉತ್ತರಿಸಿದರು.

ಮಂಡ್ಯ ಜಿಲ್ಲೆ ಕೊತ್ತತ್ತಿ ಹೋಬಳಿಯಲ್ಲಿ ಎಲೆಚಾಕನಹಳ್ಳಿ, ನೋದೆಕೊಪ್ಪಲು , ರಾಗಿಮುದ್ದನಹಳ್ಳಿ , ಊರಮಾರ ಕಸಲಗೆರೆ ಗ್ರಾಮಗಳಲ್ಲಿ ಗೃಹ ಮಂಡಳಿ ವಸತಿ ಯೋಜನೆಗಾಗಿ 800 ಎಕರೆ ಜಮೀನು ಸ್ವಾಧೀನ ಪಡಿಸಿಕೊಳ್ಳಲಾಗಿತ್ತು. ಬೇಡಿಕೆ ಆಧರಿಸಿ ಸಮೀಕ್ಷೆ ನಡೆಸಿದಾಗ 200 ಎಕರೆ ಸಾಕು ಎಂಬ ವರದಿ ಬಂದಿದೆ. ಹೆಚ್ಚುವರಿ ಯಾಗಿರುವ 600 ಎಕರೆಯ ಸದಸ್ಯರ ಸಲಹೆಯಂತೆ ರೈತರಿಗೆ ವಾಪಸ್ ನೀಡಲಾಗುತ್ತಿದೆ. ಒಂದು ವಾರದಲ್ಲಿ ನಿರಪೇಕ್ಷಣಾ ಪತ್ರ ನೀಡಲಾಗುವುದು.

ಬೆಂಗಳೂರು ಸಮೀಪ ತಾವರೆಕೆರೆ ಬಳಿ ಸಹ ಇದೇ ರೀತಿಯ ಪ್ರಕರಣ ಆಗಿದೆ. ವಸತಿ ಯೋಜನೆಗೆ 300 ಎಕರೆ ಸ್ವಾಧೀನವಾಗಿತ್ತು. ಅದರಲ್ಲಿ ಹೆಚ್ಚುವರಿ ಭೂಮಿಯನ್ನು ರೈತರಿಗೆ ವಾಪಸ್ ನೀಡಲು ನಿರ್ಧರಿಸಲಾಗಿದೆ ಎಂದರು.

 

 

ಲೋಕಲ್ ಸುದ್ದಿಗಳನ್ನು ಕ್ಷಣಾರ್ಧದಲ್ಲಿ ಲೋಕದ ಜನರ ಬೆರಳ ತುದಿಗೆ ತಲುಪಿಸುವ ಉದ್ದೇಶದಿಂದ ಡಿವಿಜಿಸುದ್ದಿ.ಕಾಂ ಕನ್ನಡ ಆನ್ ಲೈನ್ ನ್ಯೂಸ್ ಪೋರ್ಟಲ್ (ಡಿಜಿಟಲ್ ಮಾಧ್ಯಮ) ಸ್ಥಾಪಿಸಲಾಗಿದೆ. ಸ್ಥಳೀಯ ಸುದ್ದಿ ಜೊತೆ ಇನ್ಫೋರ್ಮೆಟಿವ್ ನ್ಯೂಸ್ ಕೊಡುವುದು ಮೊದಲ ಆದ್ಯತೆ. ಇದಲ್ಲದೆ ರಾಜಕೀಯ, ಶಿಕ್ಷಣ, ಉದ್ಯೋಗ, ಕ್ರೀಡೆ, ಅಪರಾಧ ಸುದ್ದಿ ಹಾಗೂ ವಿಶೇಷವಾಗಿ ಕೃಷಿ ಮತ್ತು ರೈತರಿಗೆ ಉಪಯುಕ್ತ ಮಾಹಿತಿ ನೀಡುವುದು ಮುಖ್ಯ ಉದ್ದೇಶ. ಸುದ್ದಿ, ಮಾಹಿತಿ, ಸಲಹೆ, ಸೂಚನೆ ನೀಡಲು ವಾಟ್ಸಾಪ್ (7483892205) ಮಾಡಿ... Editor: munikondajji, MA journalism, contact number:7483892205, e-mail: dvgsuddi@gmail.com

Click to comment

Leave a Reply

Your email address will not be published. Required fields are marked *

More in ಪ್ರಮುಖ ಸುದ್ದಿ

ದಾವಣಗೆರೆ

Advertisement
Advertisement Enter ad code here

Title

To Top