Connect with us

Dvgsuddi Kannada | online news portal | Kannada news online

ರಸ್ತೆ ಬದಿ ಬಿದಿದ್ದ ಚೀಲದಲ್ಲಿ 1 ಕೋಟಿ ಹಣ ಪತ್ತೆ; ಎಲ್ಲಿ ಗೊತ್ತಾ..?

ಪ್ರಮುಖ ಸುದ್ದಿ

ರಸ್ತೆ ಬದಿ ಬಿದಿದ್ದ ಚೀಲದಲ್ಲಿ 1 ಕೋಟಿ ಹಣ ಪತ್ತೆ; ಎಲ್ಲಿ ಗೊತ್ತಾ..?

ತಿರುಚಿರಾಪಳ್ಳಿ: ತಮಿಳುನಾಡು ವಿಧಾನಸಭಾ ಚುನಾವಣೆಯ ಹೊಸ್ತಿಲಲ್ಲೇ ತಿರುಚಿರಾಪಳ್ಳಿ ಜಿಲ್ಲೆಯಲ್ಲಿ ಚುನಾವಣಾ ಅಧಿಕಾರಿಗಳು ರಸ್ತೆಯಲ್ಲಿ ಬಿದ್ದಿದ್ದ 1 ಕೋಟಿ ರೂಪಾಯಿ ಮೌಲ್ಯದ ನಗದನ್ನ ಹೊಂದಿದ್ದ ಚೀಲವನ್ನ ವಶಕ್ಕೆ ಪಡೆದಿದ್ದಾರೆ.

ಮಂಗಳವಾರ ರಾತ್ರಿ ಎರಡು ಕಾರಿನಲ್ಲಿ ಬಂದ ಜನರ ಗುಂಪು ರಸ್ತೆ ಬದಿಯಲ್ಲಿ ಜಗಳ ಮಾಡುತ್ತಿತ್ತು. ಇದರಲ್ಲಿ ಒಂದು ಗುಂಪು ಪೊಲೀಸರನ್ನ ನೋಡುತ್ತಿದ್ದಂತೆಯೇ ಸ್ಥಳದಿಂದ ಕಾಲ್ಕಿತ್ತಿದ್ದಾರೆ. ಈ ವೇಳೆ ಅಲ್ಲೇ  ಇದ್ದ ಗೋಣಿಚೀಲವನ್ನು ಪೊಲೀಸರು ಪತ್ತೆ ಹಚ್ಚಿದ್ದಾರೆ. ಈ ಗೋಣಿಚೀಲ ತೆರೆದು ನೋಡಿದಾಗ ಅದರಲ್ಲಿ ಕೋಟಿ ಹಣ ಪತ್ತೆಯಾಗಿದೆ.  ಕೂಡಲೇ ಹಿರಿಯ ಪೊಲೀಸ್​ ಅಧಿಕಾರಿಗಳು ಹಾಗೂ ಚುನಾವಣಾ ಅಧಿಕಾರಿಗಳು ಸ್ಥಳಕ್ಕೆ ಧಾವಿಸಿದ್ದಾರೆ.

ಇನ್ನು ಹಣದ ಚೀಲವಿದ್ದ ಸ್ಥಳದಲ್ಲೇ ಕಾರನ್ನು ನಿಲ್ಲಿಸಿದ್ದ ಎಐಎಡಿಎಂಕೆ ಪಕ್ಷಕ್ಕೆ ಸೇರಿದ ಕಾರ್ಯಕರ್ತರು ನಾವು ರಸ್ತೆ ಬದಿಯಲ್ಲಿ ಕಾರು ನಿಲ್ಲಿಸಿದ್ದೇವೆ ಅಷ್ಟೇ. ನಮಗೂ ಹಣದ ಚೀಲಕ್ಕೂ ಯಾವುದೇ ಸಂಬಂಧ ಇಲ್ಲ ಎಂದು ಪೊಲೀಸರಿಗೆ ಹೇಳಿದ್ದಾರೆ.

ವಾರಸುದಾರರಿಲ್ಲದ ಈ ಹಣವನ್ನ ರಾಜ್ಯ ಸರ್ಕಾರದ ಖಜಾನೆಗೆ ಜಮಾ ಮಾಡಲಾಗಿದೆ. ಸ್ಥಳದಿಂದ ಪರಾರಿಯಾದ ಕಾರನ್ನ ಪೊಲೀಸರು ಇನ್ನೂ ಪತ್ತೆ ಮಾಡಿಲ್ಲ. ತಮಿಳುನಾಡಿನಲ್ಲಿ ಏಪ್ರಿಲ್​ 6ರಂದು ವಿಧಾನಸಭಾ ಚುನಾವಣೆ ನಡೆಯಲಿದೆ. ಮೇ 2ರಂದು ವಿಧಾನಸಭಾ ಚುನಾವಣೆಯ ಫಲಿತಾಂಶ ಹೊರಬೀಳಲಿದೆ.

 

ಲೋಕಲ್ ಸುದ್ದಿಗಳನ್ನು ಕ್ಷಣಾರ್ಧದಲ್ಲಿ ಲೋಕದ ಜನರ ಬೆರಳ ತುದಿಗೆ ತಲುಪಿಸುವ ಉದ್ದೇಶದಿಂದ ಡಿವಿಜಿಸುದ್ದಿ.ಕಾಂ ಕನ್ನಡ ಆನ್ ಲೈನ್ ನ್ಯೂಸ್ ಪೋರ್ಟಲ್ (ಡಿಜಿಟಲ್ ಮಾಧ್ಯಮ) ಸ್ಥಾಪಿಸಲಾಗಿದೆ. ಸ್ಥಳೀಯ ಸುದ್ದಿ ಜೊತೆ ಇನ್ಫೋರ್ಮೆಟಿವ್ ನ್ಯೂಸ್ ಕೊಡುವುದು ಮೊದಲ ಆದ್ಯತೆ. ಇದಲ್ಲದೆ ರಾಜಕೀಯ, ಶಿಕ್ಷಣ, ಉದ್ಯೋಗ, ಕ್ರೀಡೆ, ಅಪರಾಧ ಸುದ್ದಿ ಹಾಗೂ ವಿಶೇಷವಾಗಿ ಕೃಷಿ ಮತ್ತು ರೈತರಿಗೆ ಉಪಯುಕ್ತ ಮಾಹಿತಿ ನೀಡುವುದು ಮುಖ್ಯ ಉದ್ದೇಶ. ಸುದ್ದಿ, ಮಾಹಿತಿ, ಸಲಹೆ, ಸೂಚನೆ ನೀಡಲು ವಾಟ್ಸಾಪ್ (7483892205) ಮಾಡಿ... Editor: munikondajji, MA journalism, contact number:7483892205, e-mail: dvgsuddi@gmail.com

Click to comment

Leave a Reply

Your email address will not be published. Required fields are marked *

More in ಪ್ರಮುಖ ಸುದ್ದಿ

To Top