ಬೆಂಗಳೂರು: ಸಿಡಿ ಪ್ರಕರಣ ಕ್ಷಣ ಕ್ಷಣಕ್ಕೂ ಮಹತ್ವ ಪಡೆದುಕೊಳ್ಳುತ್ತಿದ್ದು, ಯುವತಿ ಮಾಜಿ ಸಚಿವ ರಮೇಶ್ ಜಾರಕಿಹೊಳಿ ವಿರುದ್ಧ ದೂರು ದಾಖಲಿಸಲು ಮುಂದಾಗಿದ್ದಾಳೆ. ಈ ಬಗ್ಗೆ ಪ್ರತಿಕ್ರಿಯಿಸಿರುವ ರಮೇಶ್ ಜಾರಕಿಹೊಳಿ, ಯುವತಿ ಯಾವ ಕೇಸ್ ಬೇಕಾದರೂ ದಾಖಲಿಸಿದ್ರೂ ಎದುರಿಸಲು ಎಲ್ಲದಕ್ಕೂ ರೆಡಿ ಇದ್ದೇನೆ ಎಂದು ಹೇಳಿದ್ದಾರೆ.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಯುವತಿ ದೂರು ದಾಖಲಿಸಲಿ. ಆಕೆ ನನ್ನ ವಿರುದ್ಧ ರೇಪ್ ಕೇಸ್ ದಾಖಲಿಸಿದರು ಕೂಡ ನಾನು ಕಾನೂನು ಪ್ರಕಾರ ಹೋರಾಡಲು ಮಾನಸಿಕವಾಗಿ ಸಿದ್ಧನಾಗಿದ್ದೇನೆ. ವಕೀಲರನ್ನು ಭೇಟಿಯಾಗಿ ಚರ್ಚಿಸಿ ಮುಂದಿನ ನಿರ್ಧಾರ ಮಾಡುತ್ತೇನೆ ಎಂದಿದ್ದಾರೆ.
ಯುವತಿ ಸಂತ್ರಸ್ತೆ ಆಗಿದ್ದರೆ, ಆವತ್ತೇ ಹೊರಗೆ ಬಂದು ದೂರು ದಾಖಲಿಸಬೇಕಿತ್ತು. ಈಗ ವಕೀಲರ ಮೂಲಕ ದೂರು ದಾಖಲಿಸುತ್ತಿದ್ದಾಳೆ. ಇದೆಲ್ಲವೂ ಒಂದು ಷಡ್ಯಂತ್ರ. ಇನ್ನು ಮುಂದೆ ಏನು ಆಗುತ್ತೆ ನೋಡ್ತಾ ಇರೀ. ನಾನು ಯಾವುದೇ ಜಾಮೀನು ಪಡೆಯಲ್ಲ. ವಕೀಲ ಸಲಹೆ ಪಡೆದು ಮುಂದುವರೆಯುತ್ತೇನೆ ಎಂದರು.



