ದಾವಣಗೆರೆ ಮಹಾನಗರ  ಉಪ ಚುನಾವಣೆ:  ಮತದಾರರು ನಮ್ಮ ಪರ; ಕಾಂಗ್ರೆಸ್ ಅಭ್ಯರ್ಥಿಗಳ ಜಯ: ಶಾಮನೂರು ಶಿವಶಂಕರಪ್ಪ

Dvgsuddi
By
Dvgsuddi
ಲೋಕಲ್ ಸುದ್ದಿಗಳನ್ನು ಕ್ಷಣಾರ್ಧದಲ್ಲಿ ಲೋಕದ ಜನರ ಬೆರಳ ತುದಿಗೆ ತಲುಪಿಸುವ ಉದ್ದೇಶದಿಂದ ಡಿವಿಜಿಸುದ್ದಿ.ಕಾಂ ಕನ್ನಡ ಆನ್ ಲೈನ್ ನ್ಯೂಸ್ ಪೋರ್ಟಲ್ (ಡಿಜಿಟಲ್ ಮಾಧ್ಯಮ) ಸ್ಥಾಪಿಸಲಾಗಿದೆ. ಸ್ಥಳೀಯ ಸುದ್ದಿ ಜೊತೆ ಇನ್ಫೋರ್ಮೆಟಿವ್ ನ್ಯೂಸ್ ಕೊಡುವುದು ಮೊದಲ ಆದ್ಯತೆ....
1 Min Read

ದಾವಣಗೆರೆ: ದಾವಣಗೆರೆ ಮಹನಾಗರ ಪಾಲಿಕೆ ವಾರ್ಡ್ ನಂ. 20 ಮತ್ತು 22ರಲ್ಲಿ ಮಾ.29 ರಂದು  ಉಪ ಚುನಾವಣೆ ನಡೆಯಲಿದ್ದು, ಇಂದು  ಕಾಂಗ್ರೆಸ್ ಪಕ್ಷದ ಹಿರಿಯ ಮುಖಂಡ, ಶಾಸಕ ಶಾಮನೂರು ಶಿವಶಂಕರಪ್ಪ ಭರ್ಜರಿ ಪ್ರಚಾರ ನಡೆಸಿದರು.

ಎರಡೂ ವಾರ್ಡ್ ನ ಪ್ರಮುಖ ರಸ್ತೆಯಲ್ಲಿ ತೆರೆದ ವಾಹನದಲ್ಲಿ ತಮ್ಮ ಪಕ್ಷದ ಅಭ್ಯರ್ಥಿ ಪರ  ಪ್ರಚಾರ ನಡೆದಿದರು.  ಶಾಸಕ ಪಿ.ಟಿ. ಪರಮೇಶ್ವರ ನಾಯ್ಕ್, ಕಾಂಗ್ರೆಸ್ ಜಿಲ್ಲಾಧ್ಯಕ್ಷ ಮಂಜಪ್ಪ ಸೇರಿದಂತೆ ಪಕ್ಷದ ಮುಖಂಡರು ಕಾರ್ಯಕರ್ತರು ಪ್ರಚಾರಕ್ಕೆ ಸಾಥ್ ನೀಡಿದರು.

shamanuru shivashankarappa dvgsuddi 2

ಪ್ರಚಾರದ ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮತದಾರರು ಕಾಂಗ್ರೆಸ್ ಅಭ್ಯರ್ಥಿಗಳ ಪರವಾಗಿದ್ದಾರೆ. ಹೀಗಾಗಿ ಇಷ್ಟು ಜನ ಸೇರಿದ್ಧಾರೆ. ಕಾಂಗ್ರೆಸ್ ಅಭ್ಯರ್ಥಿಗಳು ಜಯಗಳಿಸುವಲ್ಲಿ ಅನುಮಾನ ಇಲ್ಲ. ಎರಡೂ ಕ್ಷೇತ್ರದಲ್ಲಿ ಕಾಂಗ್ರೆಸ್ ಪಕ್ಷ ಜಯ ಗಳಿಸಲಿದೆ ಎಂದರು.

ಕಾಂಗ್ರೆಸ್ ಸದದ್ಯರಾಗಿದ್ದ 20ನೇ ವಾರ್ಡ್ ನ (ಭಾರತ್ ಕಾಲೋನಿ) ನ ಯಶೋಧಮ್ಮ( 2020) ಹಾಗೂ 22 ನೇ ವಾರ್ಡ್ ನ (ಯಲ್ಲಮ್ಮನಗರ)  ದೇವರಮನಿ ಶಿವಕುಮಾರ್ (2021)  ಮೇಯರ್ ಚುನಾವಣೆ ಸಂದರ್ಭದಲ್ಲಿ ಕಾಂಗ್ರೆಸ್ ಪಕ್ಷಕ್ಕೆ ರಾಜೀನಾಮೆ ನೀಡಿದ್ದರು. ಹಿನ್ನೆಲೆ ಉಪ ಚುನಾವಣೆ ಎದುರಾಗಿದೆ. ಮಾ. 29 ರಂದು ಚುನಾವಣೆ ನಡೆಯಲಿದ್ದು, 31 ರಂದು ಫಲಿತಾಂಶ ಹೊರ ಬೀಳಲಿದೆ.

 

 

Share This Article
Follow:
ಲೋಕಲ್ ಸುದ್ದಿಗಳನ್ನು ಕ್ಷಣಾರ್ಧದಲ್ಲಿ ಲೋಕದ ಜನರ ಬೆರಳ ತುದಿಗೆ ತಲುಪಿಸುವ ಉದ್ದೇಶದಿಂದ ಡಿವಿಜಿಸುದ್ದಿ.ಕಾಂ ಕನ್ನಡ ಆನ್ ಲೈನ್ ನ್ಯೂಸ್ ಪೋರ್ಟಲ್ (ಡಿಜಿಟಲ್ ಮಾಧ್ಯಮ) ಸ್ಥಾಪಿಸಲಾಗಿದೆ. ಸ್ಥಳೀಯ ಸುದ್ದಿ ಜೊತೆ ಇನ್ಫೋರ್ಮೆಟಿವ್ ನ್ಯೂಸ್ ಕೊಡುವುದು ಮೊದಲ ಆದ್ಯತೆ. ಇದಲ್ಲದೆ ರಾಜಕೀಯ, ಶಿಕ್ಷಣ, ಉದ್ಯೋಗ, ಕ್ರೀಡೆ, ಅಪರಾಧ ಸುದ್ದಿ ಹಾಗೂ ವಿಶೇಷವಾಗಿ ಕೃಷಿ ಮತ್ತು ರೈತರಿಗೆ ಉಪಯುಕ್ತ ಮಾಹಿತಿ ನೀಡುವುದು ಮುಖ್ಯ ಉದ್ದೇಶ. ಸುದ್ದಿ, ಮಾಹಿತಿ, ಸಲಹೆ, ಸೂಚನೆ ನೀಡಲು ವಾಟ್ಸಾಪ್ (7483892205) ಮಾಡಿ... Editor: munikondajji, MA journalism, contact number:7483892205, e-mail: dvgsuddi@gmail.com
Leave a Comment

Leave a Reply

Your email address will not be published. Required fields are marked *