ದಾವಣಗೆರೆ: ಸಿಎಂ ನೀಡಿದ ಭರವಸೆ ಯಂತೆ ಪಂಚಮಸಾಲಿ ಲಿಂಗಾಯತ ಸಮಾಜಕ್ಕೆ ಆರು ತಿಂಗಳಲ್ಲಿ 2ಎ ಮೀಸಲಾತಿ ನೀಡಬೇಕು. ಒಂದು ವೇಳೆ ಭರವಸೆ ಈಡೇರದಿದ್ದರೆ ಮತ್ತೆ ಕೂಡಲ ಸಂಗಮದಿಂದ ಪಾದಯಾತ್ರೆ ಆರಂಭಿಸಿ, 20ಲಕ್ಷ ಜನರನ್ನು ಬೆಂಗಳೂರಿನಲ್ಲಿ ಸೇರಿಸುತ್ತೇವೆ ಎಂದು ಪಂಚಮಸಾಲಿ ಲಿಂಗಾಯತ ರಾಷ್ಟ್ರೀಯ ಅಧ್ಯಕ್ಷ ವಿಜಯಾನಂದ ಕಾಪ್ಪನವರ್ ಹೇಳಿದರು.
ಹರಿಹರ ನಗರದಲ್ಲಿ ನಡೆದ ಶರಣು ಶರಣಾರ್ಥಿ ಸಮಾವೇಶದಲ್ಲಿ ಮಾತನಾಡಿದ ಅವರು, ಪಾದಯಾತ್ರೆ ಬಳಿಕ ಬಸವ ಜಯಮೃತ್ಯುಂಜ ಸ್ವಾಮೀಜಿ ನಡೆದ ಧರಣಿ ಸತ್ಯಾಗ್ರಹ ಆರಂಭಿಸಿದ್ದರು. ಆದ್ರೆ ಇಂತಹ ಧರಣಿ ಸತ್ಯಾಗ್ರಹದಲ್ಲಿ ಯಾರದೋ ಮಾತು ಕೇಳಿ ಹರಿಹರ ಪಂಚಮಸಾಲಿ ಗುರುಪೀಠದ ವಚನಾನಂದ ಸ್ವಾಮೀಜಿ ಪಾಲ್ಗೊಳ್ಳಲಿಲ್ಲ ಎಂದು ವಾಗ್ದಾಳಿ ನಡೆಸಿದರು.
ಆರು ತಿಂಗಳ ಬಳಿಕ ಸರ್ಕಾರ ಪಂಚಮಸಾಲಿ ಸಮಾಜಕ್ಕೆ ಮೀಸಲಾತಿ ಆದೇಶ ಹೊರಬರಬೇಕು. ಆದೇಶ ಬರದಿದ್ದರೇ ಮತ್ತೆ ಹೋರಾಟ ಖಚಿತ ಎಂದು ಎಚ್ಚರಿಕೆ ನೀಡಿದರು.