ಕಾಗೆ ಹಿಕ್ಕೆ ಹಾಕಿದ್ರೂ ಮೂಗು ತೂರಿಸುವ ಸಿದ್ದರಾಮಯ್ಯ ಡಿಕೆಶಿ ಪಾತ್ರದ ಬಗ್ಗೆ ಮೌನ ಯಾಕೆ..? ಬಿಜೆಪಿ ಪ್ರಶ್ನೆ

Dvgsuddi
By
Dvgsuddi
ಲೋಕಲ್ ಸುದ್ದಿಗಳನ್ನು ಕ್ಷಣಾರ್ಧದಲ್ಲಿ ಲೋಕದ ಜನರ ಬೆರಳ ತುದಿಗೆ ತಲುಪಿಸುವ ಉದ್ದೇಶದಿಂದ ಡಿವಿಜಿಸುದ್ದಿ.ಕಾಂ ಕನ್ನಡ ಆನ್ ಲೈನ್ ನ್ಯೂಸ್ ಪೋರ್ಟಲ್ (ಡಿಜಿಟಲ್ ಮಾಧ್ಯಮ) ಸ್ಥಾಪಿಸಲಾಗಿದೆ. ಸ್ಥಳೀಯ ಸುದ್ದಿ ಜೊತೆ ಇನ್ಫೋರ್ಮೆಟಿವ್ ನ್ಯೂಸ್ ಕೊಡುವುದು ಮೊದಲ ಆದ್ಯತೆ....
1 Min Read

ಬೆಂಗಳೂರು: ಕಾಗೆ ಹಿಕ್ಕೆ ಹಾಕಿದ್ದಕ್ಕೂ ಮೂಗು ತೂರಿಸುವ ಸೆಕ್ಷನ್ ಸಿದ್ದರಾಮಯ್ಯ ಸಿಡಿಗೇಟ್ ಷಡ್ಯಂತ್ರದಲ್ಲಿ ಡಿಕೆ ಶಿವಕುಮಾರ್ ಅವರ ಪಾತ್ರದ ಬಗ್ಗೆ ಏಕೆ ಇನ್ನೂ ಮೌನವಾಗಿದ್ದೀರಿ? ಎಂದು ಬಿಜೆಪಿ ಪ್ರಶ್ನಿಸಿದೆ. ಯಾವ ಸೆಕ್ಷನ್ ಪ್ರಕಾರ ಇದು ಅಪರಾಧವಾಗುತ್ತದೆ ಎಂದು ಜನರ ಮುಂದೆ ತೆರೆದಿಡಿ ಎಂದು ಬಿಜೆಪಿ ಟ್ವೀಟರ್ ಖಾತೆಯಲ್ಲಿ ಒತ್ತಾಯಿಸಲಾಗಿದೆ.

ಸಹಾಯ ಮಾಡುವುದಕ್ಕೂ ಷಡ್ಯಂತ್ರದಲ್ಲಿ ಭಾಗಿಯಾಗುವುದಕ್ಕೂ ವ್ಯತ್ಯಾಸವಿದೆ. ಷಡ್ಯಂತ್ರದ ಭಾಗವಾಗಿದ್ದುಕೊಂಡ ಕಾರಣದಿಂದಲೇ ಹೆಗಲು ಮುಟ್ಟಿ ನೋಡಿಕೊಂಡಿದ್ದಲ್ಲವೇ? ಮಹಾನಾಯಕರೇ, ಪ್ರಕರಣದ ಪ್ರಮುಖ ಮಾಸ್ಟರ್ ಮೈಂಡ್‌ ಗಳೊಂದಿಗೆ ಅದೂ ಈ ಪ್ರಕರಣದ ಬಳಿಕ ಸಂಬಂಧ ಹೊಂದಿರಲು ಅದು ಹೇಗೆ ಸಾಧ್ಯ? ಎಂದು ಪ್ರಶ್ನಿಸಲಾಗಿದೆ.

ಡಿಕೆ ಶಿವಕುಮಾರ್ ಅವರೇ ಆರಂಭದಲ್ಲಿ ಹೆಗಲು ಮುಟ್ಟಿಕೊಡು ನನ್ನನ್ನು ಸಿಲುಕಿಸುವ ಪ್ರಯತ್ನ ಎಂದಿರಿ. ಈಗ ಸಂತ್ರಸ್ಥೆ ನನ್ನ ಭೇಟಿಗೆ ಪ್ರಯತ್ನಿಸಿದ್ದು ನಿಜ, ನರೇಶ್ ಮನೆಗೆ ಹೋಗಿದ್ದೇನೆ ಎನ್ನುತ್ತಿದ್ದೀರಿ. ಅಂದರೆ ಪ್ರಕರಣದ ಎಲ್ಲಾ ಆಗುಹೋಗುಗಳು ನಿಮ್ಮ ನಿಯಂತ್ರಣದಲ್ಲೇ ನಡೆಯುತ್ತಿತ್ತು ಎಂಬುದು ಸ್ಪಷ್ಟ ಅಲ್ಲವೇ? ಎಂದು ಬಿಜೆಪಿ ಪ್ರಶ್ನಿಸಿದೆ.

 

Share This Article
Follow:
ಲೋಕಲ್ ಸುದ್ದಿಗಳನ್ನು ಕ್ಷಣಾರ್ಧದಲ್ಲಿ ಲೋಕದ ಜನರ ಬೆರಳ ತುದಿಗೆ ತಲುಪಿಸುವ ಉದ್ದೇಶದಿಂದ ಡಿವಿಜಿಸುದ್ದಿ.ಕಾಂ ಕನ್ನಡ ಆನ್ ಲೈನ್ ನ್ಯೂಸ್ ಪೋರ್ಟಲ್ (ಡಿಜಿಟಲ್ ಮಾಧ್ಯಮ) ಸ್ಥಾಪಿಸಲಾಗಿದೆ. ಸ್ಥಳೀಯ ಸುದ್ದಿ ಜೊತೆ ಇನ್ಫೋರ್ಮೆಟಿವ್ ನ್ಯೂಸ್ ಕೊಡುವುದು ಮೊದಲ ಆದ್ಯತೆ. ಇದಲ್ಲದೆ ರಾಜಕೀಯ, ಶಿಕ್ಷಣ, ಉದ್ಯೋಗ, ಕ್ರೀಡೆ, ಅಪರಾಧ ಸುದ್ದಿ ಹಾಗೂ ವಿಶೇಷವಾಗಿ ಕೃಷಿ ಮತ್ತು ರೈತರಿಗೆ ಉಪಯುಕ್ತ ಮಾಹಿತಿ ನೀಡುವುದು ಮುಖ್ಯ ಉದ್ದೇಶ. ಸುದ್ದಿ, ಮಾಹಿತಿ, ಸಲಹೆ, ಸೂಚನೆ ನೀಡಲು ವಾಟ್ಸಾಪ್ (7483892205) ಮಾಡಿ... Editor: munikondajji, MA journalism, contact number:7483892205, e-mail: dvgsuddi@gmail.com
Leave a Comment

Leave a Reply

Your email address will not be published. Required fields are marked *