ದಾವಣಗೆರೆ: ಗ್ರೂಪ್ ಆಫ್ ಐರನ್ ಗೆಮ್ಸ್ ಸಂಸ್ಥೆ ಏ.10ರಿಂದ ಎರಡು ದಿನಗಳ ಕಾಲ ನಗರದ ಕುವೆಂಪು ಭವನದಲ್ಲಿ ಬೆಂಚ್ ಪ್ರೆಸ್ ಸ್ಪರ್ಧೆಯನ್ನು ಆಯೋಜಿಸಲಾಗಿದೆ. ಈ ಸ್ಪರ್ಧೆ ಮೂಲಕ ಗೋವಾದಲ್ಲಿ ನಡೆಯಲಿರುವ ರಾಷ್ಟ್ರಮಟ್ಟದ ಸ್ಪರ್ಧೆಗೆ ರಾಜ್ಯ ತಂಡವನ್ನು ಆಯ್ಕೆ ಮಾಡಲಾಗುವುದು ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಹನುಮಂತರಾಯ ಮಾಹಿತಿ ನೀಡಿದರು.
ಸುದ್ದಿಗೋಷ್ಠಿಯಲ್ಲಿ ಸ್ಪರ್ಧೆಯ ಪೋಸ್ಟರ್ ಬಿಡುಗಡೆ ಮಾಡಿ ಮಾತನಾಡಿದ ಅವರು, ಈ ಸ್ಪರ್ಧೆಯಲ್ಲಿ ದಾವಣಗೆರೆ ಸೇರಿದಂತೆ ವಿವಿಧ ಜಿಲ್ಲೆಯ ಸ್ಪರ್ಧಿಗಳು ಭಾಗವಹಿಸಲಿದ್ದಾರೆ. ಇಲ್ಲಿ ಉತ್ತಮ ಸಾಧನೆ ತೋರಿದವರನ್ನು ಜೂನ್ 27ರಿಂದ 30 ವರೆಗೆ ಗೋವಾದಲ್ಲಿ ನಡೆಯಲಿರುವ ರಾಷ್ಟ್ರ ಮಟ್ಟದ ಸ್ಪರ್ಧೆಗೆ ರಾಜ್ಯ ತಂಡಕ್ಕೆ ಆಯ್ಕೆ ಮಾಡಲಾಗುವುದು ಎಂದು ತಿಳಿಸಿದರು.
ಈ ಸಂದರ್ಭದಲ್ಲಿ ಜಿಲ್ಲಾ ಮೀಸಲು ಪಡೆಯ ಡಿವೈಎಸ್ ಪಿ ಪ್ರಕಾಶ್, ಹಿರಿಯ ಕ್ರೀಡಾಪಟುಗಳಾದ ಸಬ್ ಇನ್ಸ್ ಪೆಕ್ಟರ್ ಶೈಲಜಾ, ದಾದಾಪೀರ್, ಮಹೇಶ್ವರಪ್ಪ, ಷಣ್ಮುಖಪ್ಪ, ಅಜ್ಜಯ್ಯ, ಪ್ರಶಾಂತ ಸೇರಿದಂತೆ ಮತ್ತಿತರರು ಉಪಸ್ಥಿತರಿದ್ದರು.



