ಬೆಂಗಳೂರು: ಸಿಎಂ ಯಡಿಯೂರಪ್ಪ, ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಚಿವ ಕೆ. ಎಸ್. ಈಶ್ವರಪ್ಪ ನಡುವೆ ಅಸಮಾಧಾನ ಹೊರ ಬಿದ್ದಿದೆ. ತಮ್ಮ ಇಲಾಖೆಯಲ್ಲಿ ಸಿಎಂ ಹಸ್ತಕ್ಷೇಪ ಮಾಡುತ್ತಿದ್ದಾರೆ ಎಂದು ರಾಜ್ಯಪಾಲರಿಗೆ ಪತ್ರ ಬರದಿರುವುದು ರಾಜ್ಯ ರಾಜಕಾರಣದಲ್ಲಿ ಸಂಚಲ ಮೂಡಿಸಿದೆ.
ಈ ಕುರಿತು ಈಶ್ವರಪ್ಪ ರಾಜ್ಯಪಾಲರಿಗೆ ಪತ್ರವನ್ನು ಬರೆದು ದೂರು ನೀಡಿದ್ದಾರೆ. ರಾಜ್ಯಪಾಲ ವಜುಭಾಯಿ ವಾಲಾಗೆ ಬರೆದಿರುವ 5 ಪುಟಗಳ ಪತ್ರ ಬರೆದಿದ್ದಾರೆ. ಈ ಪತ್ರವನ್ನು ಬಿಜೆಪಿ ವರಿಷ್ಠರಿಗೆ ಸಹ ಪತ್ರವನ್ನು ಕಳುಹಿಸಿ ಕೊಡಲಾಗಿದೆ. ಕಳೆದ ಒಂದು ವರ್ಷದಿಂದ ನನ್ನ ಇಲಾಖೆಯಲ್ಲಿ ಮುಖ್ಯಮಂತ್ರಿಗಳು ಅನಗತ್ಯವಾಗಿ ಹಸ್ತಕ್ಷೇಪ ಮಾಡುತ್ತಿದ್ಧಾರೆ ಎಂದು ಅಸಮಾಧಾನ ಹೊರ ಹಾಕಿದ್ದಾರೆ.
ನಮ್ಮ ಗಮನಕ್ಕೆ ಬರದೇ ಇಲಾಖೆ ಸಂಬಂಧಿಸಿದ ನಿರ್ಧಾರಗಳನ್ನು ಕೈಗೊಳ್ಳುತ್ತಿದ್ದಾರೆ. ಹಿರಿಯ ಸದಸ್ಯನಾದ ನನಗೆ ಇದು ಮುಜುಗರ ತರುತ್ತಿದೆ ಎಂದು ಪತ್ರದಲ್ಲಿ ಉಲ್ಲೇಖಿಸಿದ್ದಾರೆ. ಸಚಿವ ಸಂಪುಟ ಸಭೆಯಲ್ಲಿ ಸಚಿವರ ಅಭಿಪ್ರಾಯ ನಿರ್ಲಕ್ಷಿಸಿ ತೀರ್ಮಾನ ತೆಗೆದುಕೊಳ್ಳುತ್ತಿದ್ದಾರೆ ಎಂದು ದೂರಿದ್ದಾರೆ.



