ಶಿವಮೊಗ್ಗ: ನನ್ನ ರಾಜೀನಾಮೆ ಕೇಳುತ್ತಿರುವ ಸಿದ್ದರಾಮಯ್ಯ ಅವರಿಗೆ ತಲೆಕೆಟ್ಟಿದೆ. ಅವರು ಮೊದಲು ವಿಪಕ್ಷ ಸ್ಥಾನಕ್ಕೆ ರಾಜೀನಾಮೆ ನೀಡಲಿ ಎಂದು ಸಚಿವ ಕೆ.ಎಸ್. ಈಶ್ವರಪ್ಪ ಹೇಳಿದರು.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸಿದ್ದರಾಮಯ್ಯಗೆ ರಾಜ್ಯದಲ್ಲಿ ನಡೆಯುತ್ತಿರುವ ಅಭಿವೃದ್ಧಿ ಕಾರ್ಯ ನೋಡಲಿಕ್ಕೂ ಆಗ್ತಿಲ್ಲ, ಕೇಳಲಿಕ್ಕೂ ಆಗ್ತಿಲ್ಲ, ಅನುಭವಿಸಲಿಕ್ಕೂ ಆಗ್ತಿಲ್ಲ. ಮುಖ್ಯಮಂತ್ರಿ ಸ್ಥಾನ ಕಳೆದುಕೊಂಡ ನಂತರ ಅವರಿಗೆ ಹುಚ್ಚು ಹಿಡಿದಂತೆ ಆಗಿದೆ ಎಂದರು.
ಅಧಿಕಾರಿಗಳು ಈಶ್ವರಪ್ಪ ಮಾತು ಕೇಳುತ್ತಿಲ್ಲ. ಹೀಗಾಗಿ ಈಶ್ವರಪ್ಪ ರಾಜೀನಾಮೆ ನೀಡಬೇಕು ಹಾಗೂ ರಾಜ್ಯದಲ್ಲಿ ರಾಷ್ಟ್ರಪತಿ ಆಳ್ವಿಕೆ ಹೇರಬೇಕು ಎಂದು ಸಿದ್ದರಾಮಯ್ಯ ಹೇಳಿಕೆಗೆ ಈ ರೀತಿ ಪ್ರತಿಕ್ರಿಯಿಸಿದ್ದಾರೆ. ನಾಳೆ ಅಥವಾ ನಾಡಿದ್ದು ನನ್ನ ಇಲಾಖೆಯ ಅಧಿಕಾರಿಗಳು ಮಾಡಿರುವ ಅಭಿವೃದ್ಧಿ ಪಟ್ಟಿಯನ್ನು ಬಿಡುಗಡೆ ಮಾಡುತ್ತೇನೆ. ಸಿದ್ದರಾಮಯ್ಯ ವಿರುದ್ಧ ಕಾಂಗ್ರೆಸ್ ಪಕ್ಷದಲ್ಲಿ ಅಸಮಾಧಾನವಿದ್ದು, ಮೊದಲು ವಿಪಕ್ಷ ನಾಯಕ ಸ್ಥಾನಕ್ಕೆ ರಾಜೀನಾಮೆ ನೀಡಲಿ ಎಂದರು.



