Connect with us

Dvgsuddi Kannada | online news portal | Kannada news online

ದಾವಣಗೆರೆ: ಏ.11 ರಂದು ಕರ್ನಾಟಕ ರಾಜ್ಯ ಉಪನ್ಯಾಸಕರ ಅರ್ಹತಾ ಪರೀಕ್ಷೆ

ದಾವಣಗೆರೆ

ದಾವಣಗೆರೆ: ಏ.11 ರಂದು ಕರ್ನಾಟಕ ರಾಜ್ಯ ಉಪನ್ಯಾಸಕರ ಅರ್ಹತಾ ಪರೀಕ್ಷೆ

ದಾವಣಗೆರೆ: ಕರ್ನಾಟಕ ರಾಜ್ಯ ಉಪನ್ಯಾಸಕರ ಅರ್ಹತಾ (ಕೆ-ಸ್ಲೆಟ್ ಪರೀಕ್ಷೆ) ಪರೀಕ್ಷೆಯನ್ನು ಏಪ್ರಿಲ್ 11ರಂದು ನಡೆಯಲಿದೆ.

ಪರೀಕ್ಷೆಗೆ ಸಂಬಂಧಿಸಿದ ಸೂಚನೆ, ಪ್ರವೇಶ ಪತ್ರ ಹಾಗೂ ಇನ್ನಿತರ ಮಾಹಿತಿಯನ್ನು ಕೆ-ಸ್ಲೆಟ್ ಅಂತರ್ಜಾಲ (http:/kset.uni.mysore.ac.in) ಇಲ್ಲಿಗೆ ಕಳುಹಿಸಲಾಗಿದ್ದು, ಅಭ್ಯರ್ಥಿಗಳು ಪ್ರವೇಶಪತ್ರವನ್ನು ಡೌನ್‍ಲೋಡ್ ಮಾಡಿಕೊಂಡು, ಭಾವಚಿತ್ರವಿರುವ ಗುರುತಿನ ಚೀಟಿಯನ್ನು ಪರೀಕ್ಷೆಗೆ ಬರುವಾಗ ತರಬೇಕು. ಪ್ರವೇಶಪತ್ರವಿಲ್ಲದ ಅಭ್ಯರ್ಥಿಗಳಿಗೆ ಪರೀಕ್ಷೆ ಬರೆಯಲು ಅವಕಾಶ ನೀಡುವುದಿಲ್ಲ.

ಅಭ್ಯರ್ಥಿಗಳು ಪರೀಕ್ಷೆಗೆ ಅರ್ಧಗಂಟೆ ಮುಂಚೆ ಹಾಜರಿರಬೇಕು, ಸಾಮಾಜಿಕ ಅಂತರ ಕಾಪಾಡಿಕೊಳ್ಳಬೇಕು, ಮಾಸ್ಕ್‍ನ್ನು ಕಡ್ಡಾಯವಾಗಿ ಧರಿಸಬೇಕು. ಪರೀಕ್ಷಾ ಕೇಂದ್ರದಲ್ಲಿ ಮೊಬೈಲ್ ಅಥವಾ ಎಲೆಕ್ಟ್ರಾನಿಕ್ ಉಪಕರಣಗಳನ್ನು ತರಬಾರದು ಎಂದು ಸೂಚಿಸಿದ್ದಾರೆ.

ದಾವಣಗೆರೆಯ ಪರೀಕ್ಷಾ ಕೇಂದ್ರಗಳಾಗಿ ಎಸ್‍ಬಿಸಿ ಮಹಿಳಾ ಪ್ರಥಮದರ್ಜೆ ಕಾಲೇಜು, ಬಿ.ಎಸ್. ಚನ್ನಬಸಪ್ಪ ಪ್ರಥಮದರ್ಜೆ ಕಾಲೇಜು, ಬಾಪೂಜಿ ಎಂಜಿನಿಯರಿಂಗ್ ಮತ್ತು ತಂತ್ರಜ್ಞಾನ ಕಾಲೇಜು, ಸರ್ಕಾರಿ ಪ್ರಥಮದರ್ಜೆ ಕಾಲೇಜು, ಎ.ಆರ್.ಜಿ. ಕಲಾ ಮತ್ತು ವಾಣಿಜ್ಯ ಕಾಲೇಜು, ಎ.ವಿ. ಕಮಲಮ್ಮ ಮಹಿಳಾ ಕಾಲೇಜು, ಜಿ.ಎಂ. ಇನ್‍ಸ್ಟಿಟ್ಯೂಟ್ ಆಫ್ ಟೆಕ್ನಾಲಜಿ, ಜಿ.ಎಂ.ಎಸ್ ಅಕಾಡೆಮಿ ಪ್ರಥಮದರ್ಜೆ ಕಾಲೇಜು, ಹಾಗೂ ದವನ್ ನೂತನ್‍ಅಲಯನ್ಸ್ ನೂತನ್ ಇನ್‍ಸ್ಟಿಟ್ಯೂಟ್ ಆಫ್ ಮ್ಯಾನೇಜ್‍ಮೆಂಟ್ ಸೇರಿ ನಗರದಲ್ಲಿ ಒಟ್ಟು 9 ಕೇಂದ್ರಗಳಲ್ಲಿ ಪರೀಕ್ಷೆಗೆ ಸಿದ್ಧತೆ ಮಾಡಿಕೊಳ್ಳಲಾಗುತ್ತಿದೆ ಎಂದು ದಾವಣಗೆರೆ ವಿಶ್ವವಿದ್ಯಾನಿಲಯದ ನೋಡಲ್‍ ಅಧಿಕಾರಿ ಪ್ರೊ.ಜೆ.ಕೆ.ರಾಜು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

 

 

 

ಲೋಕಲ್ ಸುದ್ದಿಗಳನ್ನು ಕ್ಷಣಾರ್ಧದಲ್ಲಿ ಲೋಕದ ಜನರ ಬೆರಳ ತುದಿಗೆ ತಲುಪಿಸುವ ಉದ್ದೇಶದಿಂದ ಡಿವಿಜಿಸುದ್ದಿ.ಕಾಂ ಕನ್ನಡ ಆನ್ ಲೈನ್ ನ್ಯೂಸ್ ಪೋರ್ಟಲ್ (ಡಿಜಿಟಲ್ ಮಾಧ್ಯಮ) ಸ್ಥಾಪಿಸಲಾಗಿದೆ. ಸ್ಥಳೀಯ ಸುದ್ದಿ ಜೊತೆ ಇನ್ಫೋರ್ಮೆಟಿವ್ ನ್ಯೂಸ್ ಕೊಡುವುದು ಮೊದಲ ಆದ್ಯತೆ. ಇದಲ್ಲದೆ ರಾಜಕೀಯ, ಶಿಕ್ಷಣ, ಉದ್ಯೋಗ, ಕ್ರೀಡೆ, ಅಪರಾಧ ಸುದ್ದಿ ಹಾಗೂ ವಿಶೇಷವಾಗಿ ಕೃಷಿ ಮತ್ತು ರೈತರಿಗೆ ಉಪಯುಕ್ತ ಮಾಹಿತಿ ನೀಡುವುದು ಮುಖ್ಯ ಉದ್ದೇಶ. ಸುದ್ದಿ, ಮಾಹಿತಿ, ಸಲಹೆ, ಸೂಚನೆ ನೀಡಲು ವಾಟ್ಸಾಪ್ (7483892205) ಮಾಡಿ... Editor: munikondajji, MA journalism, contact number:7483892205, e-mail: dvgsuddi@gmail.com

Click to comment

Leave a Reply

Your email address will not be published. Required fields are marked *

More in ದಾವಣಗೆರೆ

To Top