ಬೆಂಗಳೂರು: ಕೊರೊನಾ ಸೋಂಕಿನ ಪ್ರಮಾಣ ಹೆಚ್ಚಳ ಹಿನ್ನೆಲೆ ರಾಜ್ಯದ 8 ನಗರಗಳಲ್ಲಿ ನಾಳೆಯಿಂದ (ಏ.10) ಏ.20 ವರೆಗೆ ನೈಟ್ ಕರ್ಫ್ಯೂ ಜಾರಿಗೊಳಿಸಲಾಗಿದೆ.
ರಾತ್ರಿ 10 ರಿಂದ ಬೆಳಿಗ್ಗೆ 5 ಗಂಟೆಯವರೆಗೆ ಈ ಕರ್ಫ್ಯೂ ಇರಲಿದ್ದು, ಅಗತ್ಯ ಸೇವೆಗಳನ್ನು ಹೊರತುಪಡಿಸಿ ಉಳಿದೆಲ್ಲಾ ಸೇವೆಗಳು ಬಂದ್ ಆಗಿರಲಿದೆ. ಇನ್ನು ರಾತ್ರಿ ಶಿಫ್ಟ್ ನಲ್ಲಿ ಕೆಲಸ ಮಾಡುವವರಿಗೆ ನೈಟ್ ಕರ್ಫ್ಯೂವಿನಿಂದ ವಿನಾಯಿತಿ ನೀಡಲಾಗಗಿದೆ. ಬಸ್, ರೈಲು ಹಾಗೂ ವಿಮಾನದ ಮೂಲಕ ಆಗಮಿಸುವವರು ತಮ್ಮ ಸ್ಥಳಗಳಿಗೆ ತಲುಪಲು ಅವಕಾಶ ಸಿಗಲಿದ್ದು, ಈ ಸಂದರ್ಭದಲ್ಲಿ ಟಿಕೆಟ್ ತೋರಿಸುವುದು ಕಡ್ಡಾಯವಾಗಿದೆ.
ಅಗತ್ಯ ಸೇವೆಗಳನ್ನು ಹೊರತುಪಡಿಸಿ ವಾಣಿಜ್ಯ ಚಟುವಟಿಕೆಗೆ ನಿರ್ಬಂಧಿಸಲಾಗಿದೆ. ಬೆಂಗಳೂರು ನಗರ, ಮೈಸೂರು ನಗರ, ಮಂಗಳೂರು, ಕಲಬುರ್ಗಿ, ಬೀದರ್, ತುಮಕೂರು, ಉಡುಪಿ, ಮಣಿಪಾಲದಲ್ಲಿ ನೈಟ್ ಕೊರೊನಾ ಕರ್ಫ್ಯೂ ಜಾರಿಯಲ್ಲಿರುತ್ತದೆ. ಈ 8 ನಗರ ಪ್ರದೇಶಗಳಿಗಷ್ಟೇ ನೈಟ್ ಕರ್ಫ್ಯೂ ಮಾರ್ಗ ಸೂಚಿ ಅನ್ವಯವಾಗಲಿದೆ. ಸರಕು ಸಾಗಣೆ ವಾಹನಗಳಿಗೆ ವಿನಾಯಿತಿ ನೀಡಲಾಗಿದೆ.



