Connect with us

Dvgsuddi Kannada | online news portal | Kannada news online

ನಾಳೆಯಿಂದ ಏ. 20 ವರೆಗೆ ರಾಜ್ಯದ 8  ನಗರಗಳಲ್ಲಿ ನೈಟ್ ಕರ್ಫ್ಯೂ ಜಾರಿ; ಮಾರ್ಗ ಸೂಚಿ ಪ್ರಕಟಿಸಿದ ಸರ್ಕಾರ

ಪ್ರಮುಖ ಸುದ್ದಿ

ನಾಳೆಯಿಂದ ಏ. 20 ವರೆಗೆ ರಾಜ್ಯದ 8  ನಗರಗಳಲ್ಲಿ ನೈಟ್ ಕರ್ಫ್ಯೂ ಜಾರಿ; ಮಾರ್ಗ ಸೂಚಿ ಪ್ರಕಟಿಸಿದ ಸರ್ಕಾರ

ಬೆಂಗಳೂರು: ಕೊರೊನಾ ಸೋಂಕಿನ ಪ್ರಮಾಣ ಹೆಚ್ಚಳ ಹಿನ್ನೆಲೆ  ರಾಜ್ಯದ 8 ನಗರಗಳಲ್ಲಿ  ನಾಳೆಯಿಂದ (ಏ.10) ಏ.20 ವರೆಗೆ ನೈಟ್‌ ಕರ್ಫ್ಯೂ ಜಾರಿಗೊಳಿಸಲಾಗಿದೆ.

ರಾತ್ರಿ 10 ರಿಂದ ಬೆಳಿಗ್ಗೆ 5 ಗಂಟೆಯವರೆಗೆ ಈ ಕರ್ಫ್ಯೂ ಇರಲಿದ್ದು, ಅಗತ್ಯ ಸೇವೆಗಳನ್ನು ಹೊರತುಪಡಿಸಿ ಉಳಿದೆಲ್ಲಾ ಸೇವೆಗಳು ಬಂದ್‌ ಆಗಿರಲಿದೆ. ಇನ್ನು ರಾತ್ರಿ ಶಿಫ್ಟ್ ನಲ್ಲಿ  ಕೆಲಸ ಮಾಡುವವರಿಗೆ ನೈಟ್‌ ಕರ್ಫ್ಯೂವಿನಿಂದ ವಿನಾಯಿತಿ ನೀಡಲಾಗಗಿದೆ.  ಬಸ್‌, ರೈಲು ಹಾಗೂ ವಿಮಾನದ ಮೂಲಕ ಆಗಮಿಸುವವರು ತಮ್ಮ ಸ್ಥಳಗಳಿಗೆ ತಲುಪಲು ಅವಕಾಶ ಸಿಗಲಿದ್ದು, ಈ ಸಂದರ್ಭದಲ್ಲಿ ಟಿಕೆಟ್‌ ತೋರಿಸುವುದು ಕಡ್ಡಾಯವಾಗಿದೆ.

ಅಗತ್ಯ ಸೇವೆಗಳನ್ನು ಹೊರತುಪಡಿಸಿ ವಾಣಿಜ್ಯ ಚಟುವಟಿಕೆಗೆ ನಿರ್ಬಂಧಿಸಲಾಗಿದೆ. ಬೆಂಗಳೂರು ನಗರ, ಮೈಸೂರು ನಗರ, ಮಂಗಳೂರು, ಕಲಬುರ್ಗಿ, ಬೀದರ್, ತುಮಕೂರು, ಉಡುಪಿ, ಮಣಿಪಾಲದಲ್ಲಿ ನೈಟ್ ಕೊರೊನಾ ಕರ್ಫ್ಯೂ ಜಾರಿಯಲ್ಲಿರುತ್ತದೆ. ಈ 8 ನಗರ ಪ್ರದೇಶಗಳಿಗಷ್ಟೇ ನೈಟ್‌ ಕರ್ಫ್ಯೂ ಮಾರ್ಗ ಸೂಚಿ ಅನ್ವಯವಾಗಲಿದೆ. ಸರಕು ಸಾಗಣೆ ವಾಹನಗಳಿಗೆ ವಿನಾಯಿತಿ ನೀಡಲಾಗಿದೆ.

ಲೋಕಲ್ ಸುದ್ದಿಗಳನ್ನು ಕ್ಷಣಾರ್ಧದಲ್ಲಿ ಲೋಕದ ಜನರ ಬೆರಳ ತುದಿಗೆ ತಲುಪಿಸುವ ಉದ್ದೇಶದಿಂದ ಡಿವಿಜಿಸುದ್ದಿ.ಕಾಂ ಕನ್ನಡ ಆನ್ ಲೈನ್ ನ್ಯೂಸ್ ಪೋರ್ಟಲ್ (ಡಿಜಿಟಲ್ ಮಾಧ್ಯಮ) ಸ್ಥಾಪಿಸಲಾಗಿದೆ. ಸ್ಥಳೀಯ ಸುದ್ದಿ ಜೊತೆ ಇನ್ಫೋರ್ಮೆಟಿವ್ ನ್ಯೂಸ್ ಕೊಡುವುದು ಮೊದಲ ಆದ್ಯತೆ. ಇದಲ್ಲದೆ ರಾಜಕೀಯ, ಶಿಕ್ಷಣ, ಉದ್ಯೋಗ, ಕ್ರೀಡೆ, ಅಪರಾಧ ಸುದ್ದಿ ಹಾಗೂ ವಿಶೇಷವಾಗಿ ಕೃಷಿ ಮತ್ತು ರೈತರಿಗೆ ಉಪಯುಕ್ತ ಮಾಹಿತಿ ನೀಡುವುದು ಮುಖ್ಯ ಉದ್ದೇಶ. ಸುದ್ದಿ, ಮಾಹಿತಿ, ಸಲಹೆ, ಸೂಚನೆ ನೀಡಲು ವಾಟ್ಸಾಪ್ (7483892205) ಮಾಡಿ... Editor: munikondajji, MA journalism, contact number:7483892205, e-mail: dvgsuddi@gmail.com

Click to comment

Leave a Reply

Your email address will not be published. Required fields are marked *

More in ಪ್ರಮುಖ ಸುದ್ದಿ

To Top