Connect with us

Dvgsuddi Kannada | online news portal | Kannada news online

ಕೊರೊನಾ ಲಸಿಕೆಯ ತಪ್ಪು ಗ್ರಹಿಕೆಗೆ ಕಿವಿಗೊಡಬೇಡಿ: ಮಹಾಂತೇಶ್ ಬೀಳಗಿ

ದಾವಣಗೆರೆ

ಕೊರೊನಾ ಲಸಿಕೆಯ ತಪ್ಪು ಗ್ರಹಿಕೆಗೆ ಕಿವಿಗೊಡಬೇಡಿ: ಮಹಾಂತೇಶ್ ಬೀಳಗಿ

ದಾವಣಗೆರೆ: ಕೊರೊನಾ ಲಸಿಕೆ ಬಗ್ಗೆ ಯಾವುದೇ ತಪ್ಪು ಗ್ರಹಿಕೆಗೆ  ಕಿವಿಗೋಡಬೇಡಿ. ಎಲ್ಲರೂ ಲಸಿಕೆ ಹಾಕಿಸಿಕೊಳ್ಳಿ ಎಂದು ಜಿಲ್ಲಾಧಿಕಾರಿ ಮಹಾಂತೇಶ್ ಬೀಳಗಿ ಕರೆ ನೀಡಿದರು.

ಇತ್ತೀಚೆಗೆ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಮತ್ತು ಸುಬಿಕ್ಷಾ ಫೌಂಡೇಷನ್ ಆಯೋಜಿಸಿದ್ದ ಕೊರೊನಾ ಲಸಿಕಾ ಅಭಿಯಾನ ಉದ್ಘಾಟಿಸಿ ಮಾತನಾಡಿದರು. ಕೊರೊನಾ ಎರಡನೇ ಅಲೆ ಆರಂಭವಾಗಿದ್ದು, ಸೋಂಕಿನ ಸಂಖ್ಯೆ ಮತ್ತೆ ಹೆಚ್ಚಳವಾಗುತ್ತಿದೆ. ಹೀಗಾಗಿ ಸಾರ್ವಜನಿರು ಯಾವುದೇ ತಪ್ಪು ಗ್ರಹಿಕೆಗೆ ಕಿವಿಗೊಡದೇ ಧೈರ್ಯದಿಂದ ಮುಂದೆ ಬಂದು ಲಸಿಕೆ ಹಾಕಿಸಿಕೊಳ್ಳಬೇಕು ಎಂದು ತಿಳಿಸಿದರು.

subiksh vaccine.jpg 2

ಆರೋಗ್ಯ ಇಲಾಖೆ ಕೆಲವು ಎನ್ ಜಿಒಗಳ ಸಹಯೋಗದೊಂದಿಗೆ ಲಸಿಕೆ ಅಭಿಯಾನ ನಡೆಸುತ್ತಿದೆ. ಇಂದು ಆಯೋಜಿಸಿರುವ ಈ ಕಾರ್ಯಕ್ರಮದಲ್ಲಿ ದುರ್ಗಾಂಬಿಕ ದೇವಸ್ಥಾನದ ಧರ್ಮದರ್ಶಿ ಗೌಡ್ರು ಚನ್ನಬಸಪ್ಪ, ಬಿಜೆಪಿ ಜಿಲ್ಲಾ ಘಟಕದ ಮಾಜಿ ಅಧ್ಯಕ್ಷ ಯಶವಂತ್ ರಾವ್ ಜಾಧವ್ ಅವರು ಸೇರಿದಂತೆ ಅನೇಕ ಸಾರ್ವಜನಿಕರು ಲಸಿಕೆ ಹಾಕಿಸಿಕೊಂಡರು. ನೀವು ಕೂಡ ನಿಮ್ಮ ಸುತ್ತಮುತ್ತಲಿನವರನ್ನು ಕರೆ ತಂದು ಲಸಿಕೆ ಹಾಕಿಸಿ ಎಂದು ಸಾರ್ವಜನಿಕರಿಗೆ  ಡಿಸಿ ಕರೆ ನೀಡಿದರು. ಒಟ್ಟು 30 ಜನರು ಕೊರೊನಾ  ಲಸಿಕೆ ಹಾಕಿಸಿಕೊಂಡರು.

ಲೋಕಲ್ ಸುದ್ದಿಗಳನ್ನು ಕ್ಷಣಾರ್ಧದಲ್ಲಿ ಲೋಕದ ಜನರ ಬೆರಳ ತುದಿಗೆ ತಲುಪಿಸುವ ಉದ್ದೇಶದಿಂದ ಡಿವಿಜಿಸುದ್ದಿ.ಕಾಂ ಕನ್ನಡ ಆನ್ ಲೈನ್ ನ್ಯೂಸ್ ಪೋರ್ಟಲ್ (ಡಿಜಿಟಲ್ ಮಾಧ್ಯಮ) ಸ್ಥಾಪಿಸಲಾಗಿದೆ. ಸ್ಥಳೀಯ ಸುದ್ದಿ ಜೊತೆ ಇನ್ಫೋರ್ಮೆಟಿವ್ ನ್ಯೂಸ್ ಕೊಡುವುದು ಮೊದಲ ಆದ್ಯತೆ. ಇದಲ್ಲದೆ ರಾಜಕೀಯ, ಶಿಕ್ಷಣ, ಉದ್ಯೋಗ, ಕ್ರೀಡೆ, ಅಪರಾಧ ಸುದ್ದಿ ಹಾಗೂ ವಿಶೇಷವಾಗಿ ಕೃಷಿ ಮತ್ತು ರೈತರಿಗೆ ಉಪಯುಕ್ತ ಮಾಹಿತಿ ನೀಡುವುದು ಮುಖ್ಯ ಉದ್ದೇಶ. ಸುದ್ದಿ, ಮಾಹಿತಿ, ಸಲಹೆ, ಸೂಚನೆ ನೀಡಲು ವಾಟ್ಸಾಪ್ (7483892205) ಮಾಡಿ... Editor: munikondajji, MA journalism, contact number:7483892205, e-mail: dvgsuddi@gmail.com

Click to comment

Leave a Reply

Your email address will not be published. Required fields are marked *

More in ದಾವಣಗೆರೆ

ದಾವಣಗೆರೆ

Advertisement
Advertisement Enter ad code here

Title

To Top