ಕಮ್ಯೂನಿಷ್ಟ್ ಪಕ್ಷದ ಅಭ್ಯರ್ಥಿ ಗೆಲುವಿಗೆ ಶ್ರಮಿಸಿ: ಎಚ್.ಕೆ ರಾಮಚಂದ್ರಪ್ಪ

Dvgsuddi
By
Dvgsuddi
ಲೋಕಲ್ ಸುದ್ದಿಗಳನ್ನು ಕ್ಷಣಾರ್ಧದಲ್ಲಿ ಲೋಕದ ಜನರ ಬೆರಳ ತುದಿಗೆ ತಲುಪಿಸುವ ಉದ್ದೇಶದಿಂದ ಡಿವಿಜಿಸುದ್ದಿ.ಕಾಂ ಕನ್ನಡ ಆನ್ ಲೈನ್ ನ್ಯೂಸ್ ಪೋರ್ಟಲ್ (ಡಿಜಿಟಲ್ ಮಾಧ್ಯಮ) ಸ್ಥಾಪಿಸಲಾಗಿದೆ. ಸ್ಥಳೀಯ ಸುದ್ದಿ ಜೊತೆ ಇನ್ಫೋರ್ಮೆಟಿವ್ ನ್ಯೂಸ್ ಕೊಡುವುದು ಮೊದಲ ಆದ್ಯತೆ....
1 Min Read

ಡಿವಿಜಿ, ಸುದ್ದಿ, ದಾವಣಗೆರೆ: ಈ ಬಾರಿಯ ದಾವಣಗೆರೆ ಮಹಾನಗರ ಪಾಲಿಕೆ ಚುನಾವಣೆಯಲ್ಲಿ  ಕಮ್ಯೂನಿಷ್ಟ್ ಪಕ್ಷ 7 ರಿಂದ 8 ಸೀಟ್ ಗೆಲ್ಲುವ ವಿಶ್ವಾಸವಿದ್ದು, ಪಕ್ಷದ ಕಾರ್ಯಕರ್ತರು  ಅಭ್ಯರ್ಥಿ ಗೆಲ್ಲಿಸುವಲ್ಲಿ ಶ್ರಮಿಸಬೇಕು ಎಂದು ಕಮ್ಯೂನಿಸ್ಟ್ ಪಕ್ಷದ ಹಿರಿಯ ಮುಖಂಡ ಎಚ್.ಕೆ. ರಾಮಚಂದ್ರಪ್ಪ ಪಕ್ಷದ ಕಾರ್ಯಕರ್ತರಿಗೆ ಕರೆ ನೀಡಿದರು.

ಚುನಾವಣಾ ಆಕಾಂಕ್ಷಿಗಳ ಸಭೆ ಉದ್ದೇಶಿಸಿ ಮಾತನಾಡಿದ ಅವರು, ಕಮ್ಯೂನಿಸ್ಟ್ ಪಕ್ಷದ ವತಿಯಿಂದ  ರಾಜ್ಯದಲ್ಲಿನ ಅಂಗನವಾಡಿ ಕಾರ್ಯಕರ್ತರು, ಕಟ್ಟಡ ಕಾರ್ಮಿಕರು, ಕೂಲಿ ಕಾರ್ಮಿಕರ ಸಮಸ್ಯೆ ಸೇರಿದಂತೆ ಅನೇಕ ಸಮಸ್ಯೆಗಳ ಕುರಿತು ಹೋರಾಟ ಮಾಡಿದ್ದೇವೆ. ದಾವಣಗೆರೆಯಲ್ಲಿಯೂ ಅನೇಕ ಸಮಸ್ಯೆಗಳ ಬಗ್ಗೆ ಹೋರಾಟ ಮಾಡಿದ್ದು, ಈ ಬಾರಿಯ ದಾವಣಗೆರೆ ಮಹಾನಗರ ಪಾಲಿಕೆ ಚುನಾವಣೆಯಲ್ಲಿ ಎಲ್ಲಾ 45 ವಾರ್ಡ್ ಗಳಲ್ಲಿಯೂ ಅಭ್ಯರ್ಥಿಗಳನ್ನು ಹಾಕಲಿದ್ದು, ಕನಿಷ್ಟ 7 ರಿಂದ 8 ಸೀಟು ಗೆಲ್ಲುವ ವಿಶ್ವಾಸವಿದೆ ಎಂದರು.

ಈ ಹಿಂದೆ ಪಾಲಿಕೆ ಸದಸ್ಯರಾಗಿ ಕಾಂಮ್ರೆಡ್ ಪಂಪಾಪತಿ,ನಾನು ಸೇರಿದಂತೆ ಅನೇಕರು ಪಾಲಿಕೆ ಚುನಾವಣೆಯಲ್ಲಿ ನಿಂತು ಗೆದ್ದಿದ್ದೇವೆ. ಪಂಪಾಪತಿ ಅವರು ಪಾಲಿಕೆ ಸದಸ್ಯರಾಗಿದ್ದಾಗ ಹಾಕಿದ ಮರಗಳು ಇಂದಿಗೂ ನೆರಳು ನೀಡುತ್ತಿವೆ.  ಆರಗೆರೆ ಉಮೇಶ್ ಪಾಲಿಕೆ ಸದಸ್ಯರಾಗಿ ಉತ್ತಮ ಕೆಲಸ ಮಾಡಿದ್ದಾರೆ. ಈ ಬಾರಿಯೂ ನಮ್ಮ ಪಕ್ಷದ  ಅಭ್ಯರ್ಥಿಗಳು ಗೆಲ್ಲುವ ವಿಶ್ವಾಸವಿದ್ದು, ಕಾರ್ಯಕರ್ತರು ಒಗ್ಗಟ್ಟು ಪ್ರದರ್ಶಿಸಬೇಕು ಎಂದು ಹೇಳಿದರು.

ಈ ಸಭೆಯಲ್ಲಿ ಆವರಗೆರೆ ಉಮೇಶ್, ಐರಣಿ ಚಂದ್ರು, ಸುರೇಶ್, ಲಕ್ಷ್ಮಣ್, ವಾಸು , ಚಂದ್ರು, ಆನಂದರಾಜ ಸೇರಿದಂತೆ ಅನೇಕರು ಉಪಸ್ಥಿತರಿದ್ದರು.

Share This Article
Follow:
ಲೋಕಲ್ ಸುದ್ದಿಗಳನ್ನು ಕ್ಷಣಾರ್ಧದಲ್ಲಿ ಲೋಕದ ಜನರ ಬೆರಳ ತುದಿಗೆ ತಲುಪಿಸುವ ಉದ್ದೇಶದಿಂದ ಡಿವಿಜಿಸುದ್ದಿ.ಕಾಂ ಕನ್ನಡ ಆನ್ ಲೈನ್ ನ್ಯೂಸ್ ಪೋರ್ಟಲ್ (ಡಿಜಿಟಲ್ ಮಾಧ್ಯಮ) ಸ್ಥಾಪಿಸಲಾಗಿದೆ. ಸ್ಥಳೀಯ ಸುದ್ದಿ ಜೊತೆ ಇನ್ಫೋರ್ಮೆಟಿವ್ ನ್ಯೂಸ್ ಕೊಡುವುದು ಮೊದಲ ಆದ್ಯತೆ. ಇದಲ್ಲದೆ ರಾಜಕೀಯ, ಶಿಕ್ಷಣ, ಉದ್ಯೋಗ, ಕ್ರೀಡೆ, ಅಪರಾಧ ಸುದ್ದಿ ಹಾಗೂ ವಿಶೇಷವಾಗಿ ಕೃಷಿ ಮತ್ತು ರೈತರಿಗೆ ಉಪಯುಕ್ತ ಮಾಹಿತಿ ನೀಡುವುದು ಮುಖ್ಯ ಉದ್ದೇಶ. ಸುದ್ದಿ, ಮಾಹಿತಿ, ಸಲಹೆ, ಸೂಚನೆ ನೀಡಲು ವಾಟ್ಸಾಪ್ (7483892205) ಮಾಡಿ... Editor: munikondajji, MA journalism, contact number:7483892205, e-mail: dvgsuddi@gmail.com
Leave a Comment

Leave a Reply

Your email address will not be published. Required fields are marked *