ದಾವಣಗೆರೆ: ಮಳೆ ನೀರು ನಿಂತಿದ್ದ ರೈಲ್ವೆ ಅಂಡರ್ ಬ್ರಿಡ್ಜ್ ಗೆ ದಿಢೀರ್ ಭೇಟಿ ನೀಡಿದ ಮೇಯರ್ ಎಸ್.ಟಿ ವೀರೇಶ್

Dvgsuddi
By
Dvgsuddi
ಲೋಕಲ್ ಸುದ್ದಿಗಳನ್ನು ಕ್ಷಣಾರ್ಧದಲ್ಲಿ ಲೋಕದ ಜನರ ಬೆರಳ ತುದಿಗೆ ತಲುಪಿಸುವ ಉದ್ದೇಶದಿಂದ ಡಿವಿಜಿಸುದ್ದಿ.ಕಾಂ ಕನ್ನಡ ಆನ್ ಲೈನ್ ನ್ಯೂಸ್ ಪೋರ್ಟಲ್ (ಡಿಜಿಟಲ್ ಮಾಧ್ಯಮ) ಸ್ಥಾಪಿಸಲಾಗಿದೆ. ಸ್ಥಳೀಯ ಸುದ್ದಿ ಜೊತೆ ಇನ್ಫೋರ್ಮೆಟಿವ್ ನ್ಯೂಸ್ ಕೊಡುವುದು ಮೊದಲ ಆದ್ಯತೆ....
1 Min Read

ದಾವಣಗೆರೆ: ಸ್ವಲ್ಪ ಮಳೆ ಬಂದರೂ ಸಾಕು ನೀರು ತುಂಬಿಕೊಂಡು ಸಾರ್ವಜನಿಕರ ಓಡಾಟಕ್ಕೆ ತೊಂದರೆಯಾಗುವ ಪಾಲಿಕೆ ಎದುರಿನ ರೈಲ್ವೆ ಅಂಡರ್ ಬ್ರಿಡ್ಜ್ ಗೆ ಮೇಯರ್ ಎಸ್.ಟಿ. ವೀರೇಶ್ ದಿಢೀರ್ ಭೇಟಿ ನೀಡಿ ಪರಿಶೀಲನೆ ನಡೆಸಿದರು.

IMG 20210414 WA0011

ಸಂಜೆ ಮಳೆಯಾಗಿದ್ದರಿಂದ ರೈಲ್ವೆ ಅಂಡರ್ ಪಾಸ್ ನಲ್ಲಿ  ನೀರು ತುಂಬಿಕೊಂಡಿತ್ತು. ಇದರಿಂದ ಸಾರ್ವಜನಿಕರು ಓಡಾಟಕ್ಕೆ ತೊಂದರೆ ಆಗುತ್ತಿತ್ತು. ಇದನ್ನು ಗಮಸಿದ ಮೇಯರ್ ರಾತ್ರಿಯೇ ಸ್ಥಳಕ್ಕೆ ಭೇಟಿ ನೀಡಿ ಸಮಸ್ಯೆ ಆಲಿಸಿದರು‌. ನೀರು ಸರಾಗವಾಗಿ ಹರಿಯದೇ ಇರುವುದರಿಂದ ತೊಂದರೆ ಉಂಟಾಗಿದೆ. ಇದರ ಜೊತೆಗೆ ಪಕ್ಕದ ಇಂಜಿನಿಯರ್ ಬಿಲ್ಡಿಂಗ್ ನಿಂದ ಚರಂಡಿ ನೀರು ಸೋರಿಕೆ ಆಗುತ್ತಿದೆ. ಈ ಬಗ್ಗೆ ಮೇಯರ್ ಪರಿಶೀಲಿಸಿದರು.

IMG 20210414 WA0013

 

 

 

ಚರಂಡಿಯಲ್ಲಿ ತುಂಬಿದ್ದ  ಕಸವನ್ನು  ತಾವೇ ಸ್ವತಃ ತೆಗೆದು ನೀರು ಸರಾಗವಾಗಿ ಹರಿಯುವಂತೆ ಮಾಡಿದ ಮೇಯರ್ ಎಸ್. ಟಿ ವೀರೇಶ್ ಅವರು, ನಾಳೆ ಅಧಿಕಾರಗಳ ಜೊತೆ ಚರ್ಚಿಸಿ ಸೂಕ್ತ ಪರಿಹಾರ ಕಂಡುಕೊಳ್ಳಲಾಗುವುದು ಎಂದು ತಿಳಿಸಿದರು. ಈ ವೇಳೆ ಪಾಲಿಕೆ ಸದಸ್ಯ ಶಿವನಗೌಡ ಪಾಟೀಲ್ ಉಪಸ್ಥಿತರಿದ್ದರು.

Share This Article
Follow:
ಲೋಕಲ್ ಸುದ್ದಿಗಳನ್ನು ಕ್ಷಣಾರ್ಧದಲ್ಲಿ ಲೋಕದ ಜನರ ಬೆರಳ ತುದಿಗೆ ತಲುಪಿಸುವ ಉದ್ದೇಶದಿಂದ ಡಿವಿಜಿಸುದ್ದಿ.ಕಾಂ ಕನ್ನಡ ಆನ್ ಲೈನ್ ನ್ಯೂಸ್ ಪೋರ್ಟಲ್ (ಡಿಜಿಟಲ್ ಮಾಧ್ಯಮ) ಸ್ಥಾಪಿಸಲಾಗಿದೆ. ಸ್ಥಳೀಯ ಸುದ್ದಿ ಜೊತೆ ಇನ್ಫೋರ್ಮೆಟಿವ್ ನ್ಯೂಸ್ ಕೊಡುವುದು ಮೊದಲ ಆದ್ಯತೆ. ಇದಲ್ಲದೆ ರಾಜಕೀಯ, ಶಿಕ್ಷಣ, ಉದ್ಯೋಗ, ಕ್ರೀಡೆ, ಅಪರಾಧ ಸುದ್ದಿ ಹಾಗೂ ವಿಶೇಷವಾಗಿ ಕೃಷಿ ಮತ್ತು ರೈತರಿಗೆ ಉಪಯುಕ್ತ ಮಾಹಿತಿ ನೀಡುವುದು ಮುಖ್ಯ ಉದ್ದೇಶ. ಸುದ್ದಿ, ಮಾಹಿತಿ, ಸಲಹೆ, ಸೂಚನೆ ನೀಡಲು ವಾಟ್ಸಾಪ್ (7483892205) ಮಾಡಿ... Editor: munikondajji, MA journalism, contact number:7483892205, e-mail: dvgsuddi@gmail.com
Leave a Comment

Leave a Reply

Your email address will not be published. Required fields are marked *