Connect with us

Dvgsuddi Kannada | online news portal | Kannada news online

ಬಿಜೆಪಿ ಒಬ್ಬೊಬ್ಬ ಕಾರ್ಯಕರ್ತ ಒಂದೊಂದು ಬಂಡೆ

ರಾಜಕೀಯ

ಬಿಜೆಪಿ ಒಬ್ಬೊಬ್ಬ ಕಾರ್ಯಕರ್ತ ಒಂದೊಂದು ಬಂಡೆ

ಡಿವಿಜಿ ಸುದ್ದಿ, ಹೊನ್ನಾಳಿ:  ಮುಖ್ಯಮಂತ್ರಿ ನಮ್ಮ ದೈತ್ಯ ಶಕ್ತಿಯಾಗಿದ್ದು, ಬಿಜೆಪಿಯ ಒಬ್ಬೊಬ್ಬ ಕಾರ್ಯಕರ್ತನೂ ಒಂದೊಂದು ಬಂಡೆ ಇದ್ದಂತೆ ಎಂದು ಸಿಎಂ ರಾಜಕೀಯ ಕಾರ್ಯದರ್ಶಿ ರೇಣುಕಾಚಾರ್ಯ ಹೇಳಿದರು.

ಹೊನ್ನಾಳಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕಾಂಗ್ರೆಸ್ನ ಡಿ.ಕೆ.ಶಿವಕುಮಾರ್ ಅವರನ್ನು  ಮಾಧ್ಯಮಗಳು  ಟೈಗರ್, ಬಂಡೆ ಅಂತೆಲ್ಲ  ತೋರಿಸುತ್ತಿವೆ.  ಆದ್ರೆ, ಬಿಜೆಪಿಯಲ್ಲಿ ಪ್ರತಿಯೊಬ್ಬರ ಕಾರ್ಯಕರ್ತನೂ  ಒಂದೊಂದು ಬಂಡೆ ಇದ್ದಂತೆ. ಈ ಬಾರಿಯ ಉಪಚುನಾವಣೆಯಲ್ಲಿ ನಾವೆಲ್ಲಾ ಕ್ಷೇತ್ರಗಳನ್ನು ಗೆಲ್ಲುತ್ತೇವೆ. ಅನರ್ಹ ಶಾಸಕರ ವಿಚಾರ ಕೋರ್ಟ್ ನಲ್ಲಿದ್ದು, ತೀರ್ಪು ಅವರ ಪರ ಬರ ಬಹುದು ಎಂಬ ವಿಶ್ವಾಸವಿದೆ ಎಂದರು.

ಸಿದ್ದರಾಮಯ್ಯ ಹಗಲು ಕನಸು

ಸಿದ್ದರಾಮಯ್ಯ ನಾನೇ ಮುಂದಿನ ಸಿಎಂ ಎಂದು ಹಗಲು ಗನಸು ಕಾಣುತ್ತಿದ್ದು, ಕಾಂಗ್ರೆಸ್ ಪಕ್ಷದಲ್ಲಿ ಸಿದ್ದರಾಮಯ್ಯ ಕಾಡಿ ಬೇಡಿ ವಿರೋಧ ಪಕ್ಷದ ನಾಯಕರಾಗಿದ್ದಾರೆ. ಅವರು ಭ್ರಮೆಯಲ್ಲಿ ತೇಲಾಡುತ್ತಿದ್ದಾರೆ. ಯಡಿಯೂರಪ್ಪ ಈ ಅವಧಿ ಪೂರ್ಣಗೊಳಿಸಿ ಮುಂದಿನ ಅವದಿಗೂ ಅವರೇ ಸಿಎಂ ಆಗ್ತಾರೆ ಎಂದರು.

ಲೋಕಲ್ ಸುದ್ದಿಗಳನ್ನು ಕ್ಷಣಾರ್ಧದಲ್ಲಿ ಲೋಕದ ಜನರ ಬೆರಳ ತುದಿಗೆ ತಲುಪಿಸುವ ಉದ್ದೇಶದಿಂದ ಡಿವಿಜಿಸುದ್ದಿ.ಕಾಂ ಕನ್ನಡ ಆನ್ ಲೈನ್ ನ್ಯೂಸ್ ಪೋರ್ಟಲ್ (ಡಿಜಿಟಲ್ ಮಾಧ್ಯಮ) ಸ್ಥಾಪಿಸಲಾಗಿದೆ. ಸ್ಥಳೀಯ ಸುದ್ದಿ ಜೊತೆ ಇನ್ಫೋರ್ಮೆಟಿವ್ ನ್ಯೂಸ್ ಕೊಡುವುದು ಮೊದಲ ಆದ್ಯತೆ. ಇದಲ್ಲದೆ ರಾಜಕೀಯ, ಶಿಕ್ಷಣ, ಉದ್ಯೋಗ, ಕ್ರೀಡೆ, ಅಪರಾಧ ಸುದ್ದಿ ಹಾಗೂ ವಿಶೇಷವಾಗಿ ಕೃಷಿ ಮತ್ತು ರೈತರಿಗೆ ಉಪಯುಕ್ತ ಮಾಹಿತಿ ನೀಡುವುದು ಮುಖ್ಯ ಉದ್ದೇಶ. ಸುದ್ದಿ, ಮಾಹಿತಿ, ಸಲಹೆ, ಸೂಚನೆ ನೀಡಲು ವಾಟ್ಸಾಪ್ (7483892205) ಮಾಡಿ... Editor: munikondajji, MA journalism, contact number:7483892205, e-mail: dvgsuddi@gmail.com

Click to comment

Leave a Reply

Your email address will not be published. Required fields are marked *

More in ರಾಜಕೀಯ

ದಾವಣಗೆರೆ

Advertisement
Advertisement Enter ad code here

Title

To Top