Connect with us

Dvgsuddi Kannada | online news portal | Kannada news online

ಕೊರೊನಾ ಹೆಚ್ಚಳ; ಉಚ್ಚoಗಿದುರ್ಗದ ಎಲ್ಲಾ ದೇವಸ್ಥಾನಗಳು ಬಂದ್: ತಹಶೀಲ್ದಾರ್ ನಂದೀಶ್

ಪ್ರಮುಖ ಸುದ್ದಿ

ಕೊರೊನಾ ಹೆಚ್ಚಳ; ಉಚ್ಚoಗಿದುರ್ಗದ ಎಲ್ಲಾ ದೇವಸ್ಥಾನಗಳು ಬಂದ್: ತಹಶೀಲ್ದಾರ್ ನಂದೀಶ್

ಹರಪನಹಳ್ಳಿ: ಜಿಲ್ಲಾಧಿಕಾರಿಗಳ ಆದೇಶದಂತೆ  ಕೋವಿಡ್-19 ಸೋಂಕು ಹೆಚ್ಚಾಗುತ್ತಿರುವ ಹಿನ್ನೆಲೆಯಲ್ಲಿ ಹರಪನಹಳ್ಳಿ ತಾಲ್ಲೂಕಿನಾದ್ಯಂತ ಯಾವುದೇ ಸಭೆ ಸಮಾರಂಭ ಹಾಗೂ ಧಾರ್ಮಿಕ ಕಾರ್ಯಕ್ರಮಗಳನ್ನು ಮಾಡುವುದನ್ನು ನಿರ್ಬಂಧಿಸಿ ಜಿಲ್ಲಾಧಿಕಾರಿಗಳು ಆದೇಶ ನೀಡಿದ್ದಾರೆ ಹಾಗಾಗಿ ಸಾರ್ವಜನಿಕರೂ ಗುಂಪು ಸೇರಬಾರದು ಎಂದು ತಿಳಿಸಿದರು.

ಜಿಲ್ಲಾಧಿಕಾರಿಗಳ ಆದೇಶದಂತೆ ಉಚ್ಚoಗಿದುರ್ಗ ಗ್ರಾಮ ಪಂಚಾಯಿತಿ,ಗ್ರಾಮ ಲೆಕ್ಕದಿಕಾರಿ,ಮುಜುರಾಯಿ ಇಲಾಖೆ ಸಿಬ್ಬಂದಿಗಳು ಗ್ರಾಮದಲ್ಲಿ ಎಲ್ಲಾ ದೇವಸ್ಥಾನಗಳಿಗೆ ಬೀಗ ಹಾಕಿ,ಗ್ರಾಮದಲ್ಲಿರುವ ಭಕ್ತರಿಗೆ ಹಾಗೂ ಗ್ರಾಮಸ್ಥರಿಗೆ ಜಾಗೃತಿ ಮೂಡಿಸಿ ಹಾಲಮ್ಮ,ಪಾದಗಟ್ಟೆ,ಉಚ್ಚoಗೆಮ್ಮನ ದೇವಸ್ಥಾನಕ್ಕೆ ಬೀಗ ಹಾಕಿ ಮುಂದಿನ ಆದೇಶ ಬರುವವರೆಗೂ ಯಾರು ಗುಂಪು ಗುಂಪು ಸೇರಬಾರದು ಎಂದು ಜಾಗೃತಿ ಮೂಡಿಸಿದರು.

covid uchangiduruga 2

 

ಈ ವೇಳೆ ಮಾತನಾಡಿದ ಉಚ್ಚoಗೆಮ್ಮನ ದೇವಸ್ಥಾನದ ಕಾರ್ಯನಿರ್ವಾಹಕ ಅಧಿಕಾರಿ ಎಚ್ ಮಲ್ಲಪ್ಪ ರಾಜ್ಯ ಸರ್ಕಾರ ಹಾಗೂ ಜಿಲ್ಲಾಧಿಕಾರಿಗಳ ಆದೇಶದಂತೆ ಉಚ್ಚoಗೆಮ್ಮನ ದೇವಸ್ಥಾನ ಬಂದ್ ಮಾಡಿದ್ದು ಮುಂದಿನ ಆದೇಶದವೆರೆಗೂ ದೇವಸ್ಥಾನದಲ್ಲಿ ಭಕ್ತರ ದರ್ಶನಕ್ಕೆ ನಿರ್ಬಂಧ ಹೇರಲಾಗಿದೆ ಎಂದು ತಿಳಿಸಿದರು.

ಲೋಕಲ್ ಸುದ್ದಿಗಳನ್ನು ಕ್ಷಣಾರ್ಧದಲ್ಲಿ ಲೋಕದ ಜನರ ಬೆರಳ ತುದಿಗೆ ತಲುಪಿಸುವ ಉದ್ದೇಶದಿಂದ ಡಿವಿಜಿಸುದ್ದಿ.ಕಾಂ ಕನ್ನಡ ಆನ್ ಲೈನ್ ನ್ಯೂಸ್ ಪೋರ್ಟಲ್ (ಡಿಜಿಟಲ್ ಮಾಧ್ಯಮ) ಸ್ಥಾಪಿಸಲಾಗಿದೆ. ಸ್ಥಳೀಯ ಸುದ್ದಿ ಜೊತೆ ಇನ್ಫೋರ್ಮೆಟಿವ್ ನ್ಯೂಸ್ ಕೊಡುವುದು ಮೊದಲ ಆದ್ಯತೆ. ಇದಲ್ಲದೆ ರಾಜಕೀಯ, ಶಿಕ್ಷಣ, ಉದ್ಯೋಗ, ಕ್ರೀಡೆ, ಅಪರಾಧ ಸುದ್ದಿ ಹಾಗೂ ವಿಶೇಷವಾಗಿ ಕೃಷಿ ಮತ್ತು ರೈತರಿಗೆ ಉಪಯುಕ್ತ ಮಾಹಿತಿ ನೀಡುವುದು ಮುಖ್ಯ ಉದ್ದೇಶ. ಸುದ್ದಿ, ಮಾಹಿತಿ, ಸಲಹೆ, ಸೂಚನೆ ನೀಡಲು ವಾಟ್ಸಾಪ್ (7483892205) ಮಾಡಿ... Editor: munikondajji, MA journalism, contact number:7483892205, e-mail: dvgsuddi@gmail.com

Click to comment

Leave a Reply

Your email address will not be published. Required fields are marked *

More in ಪ್ರಮುಖ ಸುದ್ದಿ

ದಾವಣಗೆರೆ

Advertisement
Advertisement Enter ad code here

Title

To Top