ದಾವಣಗೆರೆ: 2020 ನೇ ಸಾಲಿನ ದ್ವಿತೀಯ ಅಧಿವೇಶನದ ಇಲಾಖಾ ಪರೀಕ್ಷೆಗಳನ್ನು ಏ.22 ರಿಂದ 30 ರವೆರೆಗೆ ನಡೆಸಲು ನಿಗದಿಪಡಿಸಲಾಗಿತ್ತು. ಆದರೆ, ಕೋವಿಡ್ ಹಿನ್ನೆಲೆ ಪರೀಕ್ಷೆಗಳನ್ನು ತಾತ್ಕಾಲಿಕವಾಗಿ ಮುಂದೂಡಲಾಗಿದೆ.
ರಾಜ್ಯದ ಎಲ್ಲಾ ಜಿಲ್ಲೆಗಳಿಂದ ಪರೀಕ್ಷೆಗಳಿಗೆ ಅಭ್ಯರ್ಥಿಗಳು ಹಾಜರಾಗಬೇಕಿದ್ದು, ಕೋವಿಡ್ ಹೆಚ್ಚಾಗುತ್ತಿರುವ ಹಿನ್ನೆಲೆಯಲ್ಲಿ ಸರ್ಕಾರ ಹೊಡಿಸಿರುವ ಆದೇಶದ ಮಾರ್ಗಸೂಚಿಗಳನ್ನು ಪಾಲಿಸುವ ಉದ್ದೇಶದಿಂದ ಏ.21 ರಿಂದ ಮೇ 4 ರವರೆಗೆ ರಾತ್ರಿ ಮತ್ತು ವಾರಾಂತ್ಯದವರೆಗೂ ಕಫ್ರ್ಯೂ ಜಾರಿಯಾಗಿರುವುದರಿಂದ ಮುಂದಿನ ಪರೀಕ್ಷಾ ದಿನಾಂಕವನ್ನು ನಂತರದ ದಿನಗಳಲ್ಲಿ ಆಯೋಗದ ಅಂತರ್ಜಾಲದಲ್ಲಿ ಪ್ರಕಟಿಸಲಾಗುವುದು ಎಂದು ಕರ್ನಾಟಕ ಲೋಕಸೇವಾ ಆಯೋಗದ ಕಾರ್ಯದರ್ಶಿ ಜಿ.ಸತ್ಯವತಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.



