ದಾವಣಗೆರೆ: 220 ಕೆ.ವಿ ಎಸ್.ಆರ್.ಎಸ್. ವಿದ್ಯುತ್ ಸ್ವೀಕರಣಾ ಕೇಂದ್ರದಿಂದ ಹೊರಡುವ ವಿದ್ಯಾನಗರ, ರಂಗನಾಥ ಫೀಡರ್ಗಳಲ್ಲಿ ಕೆ.ಯು.ಐ.ಡಿ.ಎಫ್.ಸಿ./ಬೆ.ವಿ.ಕಂ.ವತಿಯಿಂದ ಜಲಸಿರಿ ಯೋಜನೆಯಡಿಯಲ್ಲಿ ನಿರಂತರ ಶುದ್ದ ಕುಡಿಯುವ ನೀರಿನ ಸರಬರಾಜು ಯೋಜನೆ ಕಾಮಗಾರಿಯನ್ನು ಹಮ್ಮಿಕೊಂಡಿರುವುದರಿಂದ ಇಂದು (ಏ.23) ರಂದು ಈ ಕೆಳಗಿನ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯವಾಗಲಿದೆ.
ಬೆಳಿಗ್ಗೆ 10 ರಿಂದ ಸಂಜೆ 5 ಗಂಟೆಯವರೆಗೆ ಸರಸ್ವತಿ ಫೀಡರ್ನ ವ್ಯಾಪ್ತಿಯ ಸರಸ್ವತಿ ಬಡಾವಣೆ ಎ ಮತ್ತು ಬಿ ಬ್ಲಾಕ್, ಜಯನಗರ ಎ,ಬಿ & ಸಿ ಬ್ಲಾಕ್ ಭೂಮಿಕನಗರ ಮತ್ತು ಸುತ್ತ ಮುತ್ತ ಪ್ರದೇಶಗಳು. ಬೆಳಿಗ್ಗೆ 10 ರಿಂದ ಮಧ್ಯಾಹ್ನ 1 ಗಂಟೆಯವರೆಗೆ ರಂಗನಾಥ ಫೀಡರ್ನ ವ್ಯಾಪ್ತಿಯ ರಂಗನಾಥ ಬಡಾವಣೆ, ವಿದ್ಯಾನಗರ, ತರಳಬಾಳು ಬಡಾವಣೆ, ವಿನಾಯಕ ಬಡಾವಣೆ ಹಾಗೂ ಸುತ್ತ ಮುತ್ತಲಿನ ಪ್ರದೇಶಗಳು. ಹಾಗೂ
ಜೆ.ಹೆಚ್.ಪಿ-2 ಫೀಡರ್ನ ವ್ಯಾಪ್ತಿಯ ಗ್ರಾಮಾಂತರ ಉಪವಿಭಾಗದ ವ್ಯಾಪ್ತಿಯ ಜರೀಕಟ್ಟೆ, ಮುದಹದಡಿ ಹಾಗೂ ಸುತ್ತಮುತ್ತಲಿನ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯವಾಗಲಿದೆ ಎಂದು ಬೆಸ್ಕಾಂ ಪ್ರಕಟಣೆ ತಿಳಿಸಿದೆ.



