Connect with us

Dvgsuddi Kannada | online news portal | Kannada news online

ದಾವಣಗೆರೆ ತಹಶೀಲ್ದಾರ್ ಗೆ ಸರ್ಕಾರದ ಸರ್ವೋತ್ತಮ ಸೇವಾ ಪ್ರಶಸ್ತಿ

ಪ್ರಮುಖ ಸುದ್ದಿ

ದಾವಣಗೆರೆ ತಹಶೀಲ್ದಾರ್ ಗೆ ಸರ್ಕಾರದ ಸರ್ವೋತ್ತಮ ಸೇವಾ ಪ್ರಶಸ್ತಿ

ದಾವಣಗೆರೆ: ಉತ್ತಮ ಸಾಧನೆ ಮಾಡಿದವರಿಗೆ ರಾಜ್ಯ ಸರ್ಕಾರ ನೀಡುವ ಸರ್ವೋತ್ತಮ ಸೇವಾ ಪ್ರಶಸ್ತಿಗೆ ದಾವಣಗೆರೆ ತಾಲ್ಲೂಕು ತಹಶೀಲ್ದಾರ್ ಬಿ.ಎನ್‌. ಗಿರೀಶ್‌ ಅವರು ಭಾಜನರಾಗಿದ್ದಾರೆ.

ಬಿ.ಎನ್. ಗಿರೀಶ್ ಅವರು ಶಿವಮೊಗ್ಗದಲ್ಲಿ ತಹಶೀಲ್ದರ್ ಆಗಿದ್ದ ವೇಳೆ ಮಾರುವೇಷದಲ್ಲಿ ಅಕ್ರಮ ಕಲ್ಲು ಕ್ವಾರಿಗಳ ಮೇಲೆ ದಾಳಿ ನಡೆಸಿದ್ದರು.  ಇದರಿಂದ ಗಣಿ ಕ್ವಾರಿಗಳು ಮುಚ್ಚಿದ್ದವು.  ಇದರ ಜೊತೆಗೆ  6 ತಿಂಗಳಲ್ಲಿ 70 ಸಾವಿರ ಕಡತಗಳನ್ನು ವಿಲೇವಾರಿ ಮಾಡಿದ ಗೌರವ ಅವರಿಗೆ ಸಲ್ಲುತ್ತದೆ.

ಶಿವಮೊಗ್ಗ ತಾಲ್ಲೂಕಿನಲ್ಲಿ ಅತಿವೃಷ್ಟಿಯಿಂದಾಗಿ ಮನೆಗಳಿಗೆ ಹಾನಿಯಾದಾಗ ಹೆಚ್ಚಿನ ಪರಿಹಾರ ಕೊಡಿಸಿದ್ದಾರೆ. ಕೋವಿಡ್ ಸಂದರ್ಭದಲ್ಲಿ ನಿಷ್ಠೆಯಿಂದ ಕೆಲಸ ಮಾಡಿದ್ದರು.  ಹೀಗಾಗಿ ಬಿ.ಎನ್. ಗಿರೀಶ್ ಅವರಿಗೆ ಈ ಪ್ರಶಸ್ತಿ ಲಭಿಸಿದೆ. ಪ್ರಶಸ್ತಿಯು ತಲಾ 25 ಸಾವಿರ ಪ್ರೋತ್ಸಾಹ ಧನ, ಪ್ರಶಸ್ತಿ ಪ್ರಮಾಣ ಪತ್ರ ಹೊಂದಿದೆ.

ಲೋಕಲ್ ಸುದ್ದಿಗಳನ್ನು ಕ್ಷಣಾರ್ಧದಲ್ಲಿ ಲೋಕದ ಜನರ ಬೆರಳ ತುದಿಗೆ ತಲುಪಿಸುವ ಉದ್ದೇಶದಿಂದ ಡಿವಿಜಿಸುದ್ದಿ.ಕಾಂ ಕನ್ನಡ ಆನ್ ಲೈನ್ ನ್ಯೂಸ್ ಪೋರ್ಟಲ್ (ಡಿಜಿಟಲ್ ಮಾಧ್ಯಮ) ಸ್ಥಾಪಿಸಲಾಗಿದೆ. ಸ್ಥಳೀಯ ಸುದ್ದಿ ಜೊತೆ ಇನ್ಫೋರ್ಮೆಟಿವ್ ನ್ಯೂಸ್ ಕೊಡುವುದು ಮೊದಲ ಆದ್ಯತೆ. ಇದಲ್ಲದೆ ರಾಜಕೀಯ, ಶಿಕ್ಷಣ, ಉದ್ಯೋಗ, ಕ್ರೀಡೆ, ಅಪರಾಧ ಸುದ್ದಿ ಹಾಗೂ ವಿಶೇಷವಾಗಿ ಕೃಷಿ ಮತ್ತು ರೈತರಿಗೆ ಉಪಯುಕ್ತ ಮಾಹಿತಿ ನೀಡುವುದು ಮುಖ್ಯ ಉದ್ದೇಶ. ಸುದ್ದಿ, ಮಾಹಿತಿ, ಸಲಹೆ, ಸೂಚನೆ ನೀಡಲು ವಾಟ್ಸಾಪ್ (7483892205) ಮಾಡಿ... Editor: munikondajji, MA journalism, contact number:7483892205, e-mail: dvgsuddi@gmail.com

Click to comment

Leave a Reply

Your email address will not be published. Required fields are marked *

More in ಪ್ರಮುಖ ಸುದ್ದಿ

To Top