ಬೆಂಗಳೂರು: ರಾಜ್ಯದಲ್ಲಿಇನ್ನು ಎರಡು ತಿಂಗಳು ಉದ್ಘಾಟನೆ, ಶಂಕು ಸ್ಥಾಪನೆ ಕಾರ್ಯಕ್ರಮ ಮಾಡುವಂತಿಲ್ಲ ಎಂದು ಕಂದಾಯ ಸಚಿವ ಆರ್.ಅಶೋಕ್ ಹೇಳಿದರು.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಬೆಡ್ ವ್ಯವಸ್ಥೆಯ ಮಾಹಿತಿಯನ್ನು ಪಬ್ಲಿಕ್ ಡೊಮೈನ್ ಗೆ ಹಾಕುತ್ತೇವೆ. ಇದರಿಂದ ಯಾವ ಆಸ್ಪತ್ರೆಯಲ್ಲಿ ಎಷ್ಟು ಬೆಡ್ ಖಾಲಿಯಿದೆಂದು ಗೊತ್ತಾಗುತ್ತದೆ. ಈ ಬಗ್ಗೆ ಅಧಿಕಾರಿಗಳಿಗೆ ನಿರ್ದೇಶನ ನೀಡಿದ್ದೇನೆ ಎಂದು ತಿಳಿಸಿದರು.
ಸಿದ್ದರಾಮಯ್ಯನವರು ಕೇವಲ ವಿರೋಧಕ್ಕಾಗಿ ವಿರೋಧ ಮಾಡುತ್ತಿದ್ದಾರೆ. ನಾವು ನಮ್ಮ ಕರ್ತವ್ಯವನ್ನು ನಿಭಾಯಿಸುತ್ತಿದ್ದೇವೆ. ಎಲ್ಲರೂ ಅವರವರ ಕೆಲಸ ಮಾಡುತ್ತಿದ್ದಾರೆ. ಎಲ್ಲಾ ಸಚಿವರು ಅವರಿಗೆ ಕೊಟ್ಟ ಜವಾಬ್ದಾರಿಯಂತೆ ಬೂತ್, ವಾರ್ಡ್ ನಲ್ಲಿ ಕೆಲಸ ಮಾಡುತ್ತಿದ್ದಾರೆ ಎಂದರು.
ಇಂದು ರಾತ್ರಿಯಿಂದ ಜನತಾ ಕರ್ಪ್ಯೂ ಜಾರಿಗೊಳಿಸಲಾಗುತ್ತದೆ. ಕೋವಿಡ್ ನಿಯಂತ್ರಣ ಹಿನ್ನೆಲೆಯಲ್ಲಿ ಸಾರ್ವಜನಿಕರು ನಿಯಮವನ್ನು ಪಾಲಿಸಿ, ಮನೆಯಲ್ಲಿಯೇ ಉಳಿದುಕೊಳ್ಳಿ. ಅನಗತ್ಯವಾಗಿ ಓಡಾಡದೆ ಸುರಕ್ಷಿತವಾಗಿರಿ ಎಂದು ತಿಳಿಸಿದರು.



