ಬೆಂಗಳೂರು: ವಂಚನೆ ಆರೋಪದಲ್ಲಿ ಬಂಧಿತನಾಗಿರುವ ಯುವರಾಜ್ ಸ್ವಾಮಿಯ ಜಾಮೀನು ಅರ್ಜಿಯನ್ನು ಹೈಕೋರ್ಟ್ ತಿರಸ್ಕರಿಸಿದ್ದು, ಉನ್ನತ ಹುದ್ದೆ ಪಡೆಯಲು ನಿವೃತ್ತ ನ್ಯಾಯಮೂರ್ತಿಯೊಬ್ಬರು ಲಂಚ ನೀಡಿದ್ದು ದುರದೃಷ್ಟಕರ ಎಂದು ಹೈಕೋರ್ಟ್ ಅಭಿಪ್ರಾಯಪಟ್ಟಿದೆ.
ಈ ಬಗ್ಗ ಅರ್ಜಿ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಕೆ. ನಟರಾಜನ್ ಅವರಿದ್ದ ನ್ಯಾಯಪೀಠ, ಆರೋಪಿ ಯುವರಾಜ್ ಗೆ ಜಾಮೀನು ನೀಡಲು ನಿರಾಕರಿಸಿದೆ. ಈ ಪ್ರಕಣದಲ್ಲಿ ನ್ಯಾಯಮೂರ್ತಿ ಮತ್ತು ರಾಜ್ಯಪಾಲರ ಹುದ್ದೆ ಘನತೆ ಕುಗ್ಗಿಸುವಂತಾಗಿದೆ ಎಂದು ನ್ಯಾಯಾಲಯ ಅಭಿಪ್ರಾಯಪಟ್ಟಿದೆ. ಅರ್ಜಿದಾರರನ್ನು ಜಾಮೀನಿನ ಮೇಲೆ ಹೊರಗೆ ಬಿಟ್ಟರೆ ಆತ ಸಾಕ್ಷಿ ನಾಶ ಮಾಡಬಹುದು ಎಂದು ನ್ಯಾಯಾಲಯ ತಿಳಿಸಿದೆ.



