Connect with us

Dvgsuddi Kannada | online news portal | Kannada news online

ದಾವಣಗೆರೆ: ಬೆಂಬಲ ಬೆಲೆ ಯೋಜನೆಯಡಿ ಭತ್ತ ಖರೀದಿಗೆ ನೋಂದಣಿ ಶುರು

ಪ್ರಮುಖ ಸುದ್ದಿ

ದಾವಣಗೆರೆ: ಬೆಂಬಲ ಬೆಲೆ ಯೋಜನೆಯಡಿ ಭತ್ತ ಖರೀದಿಗೆ ನೋಂದಣಿ ಶುರು

ದಾವಣಗೆರೆ: ಸರ್ಕಾರವು 2020-21 ನೇ ಸಾಲಿಗೆ ರೈತರಿಂದ ಕನಿಷ್ಟ ಬೆಂಬಲ ಬೆಲೆ ಯೋಜನೆಯಡಿ ಭತಕ್ಕೆ ದರ ನಿಗದಿಪಡಿಸಿದ್ದು, ಖರೀದಿ ಪ್ರಕ್ರಿಯೆಗೆ ರೈತರ ನೋಂದಣಿ ಆರಂಭವಾಗಿದೆ.

ಭತ್ತ ಸಾಮಾನ್ಯ ಪ್ರತಿ ಕ್ವಿಂಟಾಲ್‍ಗೆ ರೂ.1868 ಮತ್ತು ಭತ್ತ ಗ್ರೇಡ್ ‘ಎ’ ಗೆ ರೂ.1888 ದರವನ್ನು ಸರ್ಕಾರ ನಿಗದಿಪಡಿಸಿದ್ದು, ಕನಿಷ್ಟ ಬೆಂಬಲ ಬೆಲೆ ಯೋಜನೆಯಡಿ ಕೇಂದ್ರ ಸರ್ಕಾರವು 2020-21 ನೇ  ಸಾಲಿನ ರಾಬಿ ಋತುವಿನ 12 ಸಾವಿರ ಮೆಟ್ರಿಕ್ ಟನ್ ಭತ್ತವನ್ನು 2021-22 ನೇ ಸಾಲಿನ ಮುಂಗಾರು ಋತುವಿನಲ್ಲಿ ಖರೀದಿಸಲು ಅನುಮತಿಯನ್ನು ನೀಡಿದೆ.

ಅದರಂತೆ ಭತ್ತ ಖರೀದಿಗೆ ಸಂಬಂಧಿಸಿದಂತೆ ರೈತರು ನೋಂದಣಿ ಮಾಡಿಸಲು ಮೇ 5 ಅಂತಿಮ ದಿನವಾಗಿರುತ್ತದೆ. ಪ್ರತಿ ರೈತರಿಂದ ಪ್ರತಿ ಎಕರೆಗೆ 16 ಕ್ವಿಂಟಾಲ್‍ನಂತೆ ಗರಿಷ್ಟ 40 ಕ್ವಿಂಟಾಲ್ ಭತ್ತವನ್ನು ತಕ್ಷಣದಿಂದ ಜಾರಿಗೆ ಬರುವಂತೆ ದಿ: 30-06-2021 ರವರೆಗೆ ಖರೀದಿಸಲು ಆದೇಶಿಸಲಾಗಿದೆ. ಆದ್ದರಿಂದ ರೈತ ಬಾಂಧವರು ಭತ್ತ ಖರೀದಿ ಮಾಡುವ ಮಾರ್ಗಸೂಚಿಗಳನ್ವಯ ಇದರ ಸದುಪಯೋಗ ಪಡೆದುಕೊಳ್ಳುವಂತೆ ಜಿಲ್ಲಾಧಿಕಾರಿಕಾರಿ ಮಹಾಂತೇಶ ಬೀಳಗಿ ಕೋರಿದ್ದಾರೆ.

ಲೋಕಲ್ ಸುದ್ದಿಗಳನ್ನು ಕ್ಷಣಾರ್ಧದಲ್ಲಿ ಲೋಕದ ಜನರ ಬೆರಳ ತುದಿಗೆ ತಲುಪಿಸುವ ಉದ್ದೇಶದಿಂದ ಡಿವಿಜಿಸುದ್ದಿ.ಕಾಂ ಕನ್ನಡ ಆನ್ ಲೈನ್ ನ್ಯೂಸ್ ಪೋರ್ಟಲ್ (ಡಿಜಿಟಲ್ ಮಾಧ್ಯಮ) ಸ್ಥಾಪಿಸಲಾಗಿದೆ. ಸ್ಥಳೀಯ ಸುದ್ದಿ ಜೊತೆ ಇನ್ಫೋರ್ಮೆಟಿವ್ ನ್ಯೂಸ್ ಕೊಡುವುದು ಮೊದಲ ಆದ್ಯತೆ. ಇದಲ್ಲದೆ ರಾಜಕೀಯ, ಶಿಕ್ಷಣ, ಉದ್ಯೋಗ, ಕ್ರೀಡೆ, ಅಪರಾಧ ಸುದ್ದಿ ಹಾಗೂ ವಿಶೇಷವಾಗಿ ಕೃಷಿ ಮತ್ತು ರೈತರಿಗೆ ಉಪಯುಕ್ತ ಮಾಹಿತಿ ನೀಡುವುದು ಮುಖ್ಯ ಉದ್ದೇಶ. ಸುದ್ದಿ, ಮಾಹಿತಿ, ಸಲಹೆ, ಸೂಚನೆ ನೀಡಲು ವಾಟ್ಸಾಪ್ (7483892205) ಮಾಡಿ... Editor: munikondajji, MA journalism, contact number:7483892205, e-mail: dvgsuddi@gmail.com

Click to comment

Leave a Reply

Your email address will not be published. Required fields are marked *

More in ಪ್ರಮುಖ ಸುದ್ದಿ

ದಾವಣಗೆರೆ

Advertisement
Advertisement Enter ad code here

Title

To Top