ದಾವಣಗೆರೆ: ವೈದ್ಯ, ಅರೆ ವೈದ್ಯ, ನರ್ಸ್ ನೇಮಕಕ್ಕೆ ಮೇ. 10 ರಂದು ನೇರ ಸಂದರ್ಶನ

Dvgsuddi
By
Dvgsuddi
ಲೋಕಲ್ ಸುದ್ದಿಗಳನ್ನು ಕ್ಷಣಾರ್ಧದಲ್ಲಿ ಲೋಕದ ಜನರ ಬೆರಳ ತುದಿಗೆ ತಲುಪಿಸುವ ಉದ್ದೇಶದಿಂದ ಡಿವಿಜಿಸುದ್ದಿ.ಕಾಂ ಕನ್ನಡ ಆನ್ ಲೈನ್ ನ್ಯೂಸ್ ಪೋರ್ಟಲ್ (ಡಿಜಿಟಲ್ ಮಾಧ್ಯಮ) ಸ್ಥಾಪಿಸಲಾಗಿದೆ. ಸ್ಥಳೀಯ ಸುದ್ದಿ ಜೊತೆ ಇನ್ಫೋರ್ಮೆಟಿವ್ ನ್ಯೂಸ್ ಕೊಡುವುದು ಮೊದಲ ಆದ್ಯತೆ....
2 Min Read

ದಾವಣಗೆರೆ:  ಜಿಲ್ಲೆಯಲ್ಲಿ ಕೋವಿಡ್-19 ಸಾಂಕ್ರಾಮಿಕ ರೋಗ ನಿರ್ವಹಣೆಗಾಗಿ ದಾವಣಗೆರೆ ಚಿಗಟೇರಿ ಜಿಲ್ಲಾ ಆಸ್ಪತ್ರೆ ಹಾಗೂ ವಿವಿಧ ತಾಲ್ಲೂಕು ಆಸ್ಪತ್ರೆಗಳಿಗೆ ವೈದ್ಯರು ಮತ್ತು ಅರೆ ವೈದ್ಯಕೀಯ ಸಿಬ್ಬಂದಿ ನೇಮಕ್ಕೆ ಸಂದರ್ಶನಕ್ಕೆ ಆಹ್ವಾನಿಸಿದೆ.  ಒಟ್ಟು 63 ಹುದ್ದೆಗಳನ್ನು 06 ತಿಂಗಳ ಮಟ್ಟಿಗೆ ತಾತ್ಕಾಲಿಕವಾಗಿ ಗುತ್ತಿಗೆ ಆಧಾರದಲ್ಲಿ ನೇಮಕ ಮಾಡಿಕೊಳ್ಳಲು ಉದ್ದೇಶಿಸಲಾಗಿದ್ದು, ಅರ್ಹ ಅಭ್ಯರ್ಥಿಗಳಿಗೆ ಮೇ. 10 ರಂದು ಬೆಳಿಗ್ಗೆ 11 ಗಂಟೆಗೆ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿಗಳ ಕಚೇರಿಯಲ್ಲಿ ನೇರ ಸಂದರ್ಶನ ಏರ್ಪಡಿಸಲಾಗಿದೆ.

ಕೋವಿಡ್ ಸಾಂಕ್ರಾಮಿಕ ರೋಗ ನಿರ್ವಹಣೆಗೆ ಜಿಲ್ಲಾ ಮತ್ತು ತಾಲ್ಲೂಕು ಆಸ್ಪತ್ರೆಗಳಲ್ಲಿ ರಚಿಸಲಾದ ಐಸಿಯುಗಳು ಮತ್ತು ಆಮ್ಲಜನಕ ಬೆಂಬಲಿತ ಹಾಸಿಗೆಗಳನ್ನು ಕಾರ್ಯಗತಗೊಳಿಸಿ ನಿರ್ವಹಿಸಲು ಚಿಗಟೇರಿ ಜಿಲ್ಲಾಸ್ಪತ್ರೆ, ಹರಿಹರ, ಜಗಳೂರು, ಹೊನ್ನಾಳಿ ಮತ್ತು ಚನ್ನಗಿರಿ ತಾಲ್ಲೂಕು ಆಸ್ಪತ್ರೆಗಳಿಗೆ 06 ತಿಂಗಳ ಮಟ್ಟಿಗೆ ತಾತ್ಕಾಲಿಕವಾಗಿ ಗುತ್ತಿಗೆ ಆಧಾರದ ಮೇಲೆ ವೈದ್ಯರು ಮತ್ತು ಅರೆವೈದ್ಯಕೀಯ ಸಿಬ್ಬಂದಿಗಳನ್ನು ನೇರ ಸಂದರ್ಶನ ಮೂಲಕ ಆಯ್ಕೆ ಮಾಡಿಕೊಳ್ಳಲು ಜಿಲ್ಲಾಧಿಕಾರಿಗಳು ಅನುಮತಿ ನೀಡಿದ್ದಾರೆ.

ನೇಮಕ ಮಾಡಿಕೊಳ್ಳುವ ಹುದ್ದೆ ಹಾಗೂ ವೇತನ ವಿವರ ಇಂತಿದೆ. ಜಿಲ್ಲಾ ಆಸ್ಪತ್ರೆಗೆ ತಜ್ಞ ವೈದ್ಯರು-06, ವೇತನ ತಿಂಗಳಿಗೆ ಒಬ್ಬರಿಗೆ ರೂ. 1,20,000. ವೈದ್ಯರು ಜಿಲ್ಲಾ ಆಸ್ಪತ್ರೆಗೆ 12, ತಾಲ್ಲೂಕು ಆಸ್ಪತ್ರೆಗಳಿಗೆ 12 ಸೇರಿದಂತೆ ಒಟ್ಟು 24 ವೈದ್ಯರು, ವೇತನ ರೂ. 60000. ಶುಶ್ರೂಷಕರ ಹುದ್ದೆ ಜಿಲ್ಲಾ ಆಸ್ಪತ್ರೆ-18, ತಾಲ್ಲೂಕು ಆಸ್ಪತ್ರೆಗಳಿಗೆ 12, ಒಟ್ಟು 30, ವೇತನ ರೂ. 25000. ಜಿಲ್ಲಾ ಆಸ್ಪತ್ರೆಗಾಗಿ ಐಸಿಯು ಟೆಕ್ನಿಷಿಯನ್ 01 ಹುದ್ದೆ, ವೇತನ ರೂ. 25000. ಮೆಂಟೇನನ್ಸ್ ಇಂಜಿನಿಯರ್-01 ಹುದ್ದೆ, ವೇತನ ರೂ. 30000. ಬಯೋಮೆಡಿಕಲ್ ಇಂಜಿನಿಯರ್ 01 ಹುದ್ದೆ, ವೇತನ ರೂ. 30000. ತಜ್ಞ ವೈದ್ಯರ ಹುದ್ದೆಗೆ ಅಂಗೀಕೃತ ವಿಶ್ವವಿದ್ಯಾಲಯದಿಂದ ಸ್ನಾತಕೋತ್ತರ ವೈದ್ಯಕೀಯ ಪದವಿ ಪಡೆದಿರಬೇಕು.

ವೈದ್ಯರು ಕಡ್ಡಾಯವಾಗಿ ಸಕ್ಷಮ ಪ್ರಾಧಿಕಾರದಲ್ಲಿ ನೊಂದಣಿಯಾಗಿರಬೇಕು. ಶುಶ್ರೂಷಕರು ಇಲಾಖೆ ನಿಗದಿಪಡಿಸಿರುವ ಬಿಎಸ್‍ಸಿ/ಜೆಎನ್‍ಎಂ ನರ್ಸಿಂಗ್ ಹೊಂದಿರಬೇಕು ಹಾಗೂ ನೊಂದಣಿ ಪ್ರಾಧಿಕಾರದಲ್ಲಿ ನೊಂದಣಿಯಾಗಿರಬೇಕು. ಉಳಿದ ಹುದ್ದೆಗಳಿಗೆ ನಿಗದಿಪಡಿಸಲಾಗಿರುವ ಅರ್ಹ ವಿದ್ಯಾರ್ಹತೆ ಹೊಂದಿರಬೇಕು. ನೇಮಕಾತಿಗೊಂಡ ವೈದ್ಯರು, ಅರೆವೈದ್ಯಕೀಯ ಸಿಬ್ಬಂದಿಗಳು ಬಂಧಪತ್ರ ಹಾಗೂ ವೈದ್ಯಕೀಯ ಪ್ರಮಾಣಪತ್ರ ಸಲ್ಲಿಸುವ ಷರತ್ತಿಗೆ ಒಳಪಟ್ಟಿರುತ್ತಾರೆ.

ಆಸಕ್ತ ಅರ್ಹ ಅಭ್ಯರ್ಥಿಗಳಿಗೆ ಮೇ. 10 ರಂದು ಬೆಳಿಗ್ಗೆ 11 ಗಂಟೆಯಿಂದ ಮಧ್ಯಾಹ್ನ 02 ರವರೆಗೆ ಜಿಲ್ಲಾಧಿಕಾರಿಗಳ ಅಧ್ಯಕ್ಷತೆಯಲ್ಲಿ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿಗಳ ಕಚೇರಿಯಲ್ಲಿ ನೇರ ಸಂದರ್ಶನ ನಡೆಸಲಾಗುವುದು. ಅಭ್ಯರ್ಥಿಗಳು ತಮ್ಮ ವಿದ್ಯಾರ್ಹತೆ ಮೂಲ ದಾಖಲಾತಿಗಳು ಮತ್ತು ಪ್ರಮಾಣಪತ್ರಗಳೊಂದಿಗೆ ಹಾಗೂ ಒಂದು ಸೆಟ್ ಜೆರಾಕ್ಸ್ ಪ್ರತಿಯೊಂದಿಗೆ ಸಂದರ್ಶನಕ್ಕೆ ಹಾಜರಾಗಬೇಕು ಎಂದು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ. ನಾಗರಾಜ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

 

 

 

Share This Article
Follow:
ಲೋಕಲ್ ಸುದ್ದಿಗಳನ್ನು ಕ್ಷಣಾರ್ಧದಲ್ಲಿ ಲೋಕದ ಜನರ ಬೆರಳ ತುದಿಗೆ ತಲುಪಿಸುವ ಉದ್ದೇಶದಿಂದ ಡಿವಿಜಿಸುದ್ದಿ.ಕಾಂ ಕನ್ನಡ ಆನ್ ಲೈನ್ ನ್ಯೂಸ್ ಪೋರ್ಟಲ್ (ಡಿಜಿಟಲ್ ಮಾಧ್ಯಮ) ಸ್ಥಾಪಿಸಲಾಗಿದೆ. ಸ್ಥಳೀಯ ಸುದ್ದಿ ಜೊತೆ ಇನ್ಫೋರ್ಮೆಟಿವ್ ನ್ಯೂಸ್ ಕೊಡುವುದು ಮೊದಲ ಆದ್ಯತೆ. ಇದಲ್ಲದೆ ರಾಜಕೀಯ, ಶಿಕ್ಷಣ, ಉದ್ಯೋಗ, ಕ್ರೀಡೆ, ಅಪರಾಧ ಸುದ್ದಿ ಹಾಗೂ ವಿಶೇಷವಾಗಿ ಕೃಷಿ ಮತ್ತು ರೈತರಿಗೆ ಉಪಯುಕ್ತ ಮಾಹಿತಿ ನೀಡುವುದು ಮುಖ್ಯ ಉದ್ದೇಶ. ಸುದ್ದಿ, ಮಾಹಿತಿ, ಸಲಹೆ, ಸೂಚನೆ ನೀಡಲು ವಾಟ್ಸಾಪ್ (7483892205) ಮಾಡಿ... Editor: munikondajji, MA journalism, contact number:7483892205, e-mail: dvgsuddi@gmail.com
Leave a Comment

Leave a Reply

Your email address will not be published. Required fields are marked *