Connect with us

Dvgsuddi Kannada | online news portal | Kannada news online

ಜಮೀರ್ ಅಹ್ಮದ್ ಮೊದಲು ತಮ್ಮ ಸಮುದಾಯದವರು ಲಸಿಕೆ ಹಾಕಿಸಿಕೊಳ್ಳುವಂತೆ ಜಾಗೃತಿ ಮೂಡಿಸಲಿ: ಸಿಎಂ ಕಾರ್ಯದರ್ಶಿ ರೇಣುಕಾಚಾರ್ಯ

ಪ್ರಮುಖ ಸುದ್ದಿ

ಜಮೀರ್ ಅಹ್ಮದ್ ಮೊದಲು ತಮ್ಮ ಸಮುದಾಯದವರು ಲಸಿಕೆ ಹಾಕಿಸಿಕೊಳ್ಳುವಂತೆ ಜಾಗೃತಿ ಮೂಡಿಸಲಿ: ಸಿಎಂ ಕಾರ್ಯದರ್ಶಿ ರೇಣುಕಾಚಾರ್ಯ

ದಾವಣಗೆರೆ: ಬೆಡ್ ಬ್ಲಾಕಿಂಗ್ ದಂಧೆಯನ್ನು ಪತ್ತೆ ಮಾಡಿದ ಸಂಸದ ತೇಜಸ್ವಿ ಸೂರ್ಯ ವಿರುದ್ಧ ಹರಗುರವಾಗಿ ಮಾತನಾಡಿದ ಶಾಸಕ ಜಮೀರ್ ಅಹ್ಮದ್ ವಿರುದ್ಧ ಕ್ರಿಮಿನಲ್ ಕೇಸ್ ದಾಖಲಿಸಬೇಕಾಗುತ್ತದೆ ಎಂದು ಸಿಎಂ ರಾಜಕೀಯ ಕಾರರ್ಯದರ್ಶಿ ರೇಣುಕಾಚಾರ್ಯ ಎಚ್ಚರಿಕೆ ನೀಡಿದರು.

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕೊರೊನಾದಂತಹ ಸಮಯದಲ್ಲಿ ಬೆಡ್ ಬ್ಲಾಕಿಂಗ್ ದಂಧೆ ನಡೆಯುತ್ತಿದೆ. ಇಂತಹ ಪ್ರಕರಣವನ್ನು ಸಂಸದರು ಪತ್ತೆಹಚ್ಚಿದ್ದಾರೆ. ಅವರು ಜಾತಿ,ಧರ್ಮ ನೋಡಿ ಹಗರಣ ಬಯಲಿಗೆ ಎಳೆದಿಲ್ಲ.

ನೀವು ಒಬ್ಬ ಶಾಸಕರಾಗಿ ಸಂಸದರ ಬಗ್ಗೆ ಹಗುರವಾಗಿ ಮಾತನಾಡುವುದು ಸರಿಯಲ್ಲ. ನಿಮ್ಮ ಅನುಯಾಯಿಗಳು ಪಾದರಾಯನಪುರದಲ್ಲಿ ಕೊರೊನಾ ವಾರಿಯರ್ಸ್ ಮೇಲೆ ದಾಳಿ ಮಾಡಿದವರನ್ನು ನೀವು ಹೋಗಿ ಸನ್ಮಾನ ಮಾಡಿದ್ದೀರಿ. ಅವರ ಬೆಂಬಲಕ್ಕೆ ನಿಲ್ಲುವ ಕೆಲಸ ಮಾಡಿದ್ದರೀರಿ. ನೀವು ಇದೇ ರೀತಿ ವರ್ತನೆ ತೋರಿದ್ರೆ ನಿಮ್ಮ ಮೇಲೆ ಕ್ರಿಮಿನಲ್ ಕೇಸ್ ದಾಖಲಿಸಬೇಕಾಗುತ್ತದೆ. ಮೊದಲು ನಿಮ್ಮ ಸಮುದಾಯದವರಿಗೆ ಕೊರೊನಾ ಲಸಿಕೆ ಹಾಕಿಸಿಕೊಳ್ಳುವಂತೆ ಜಾಗೃತಿ ಮೂಡಿಸುವ ಕೆಲಸ ಮಾಡಿ ಎಂದರು.

ಲೋಕಲ್ ಸುದ್ದಿಗಳನ್ನು ಕ್ಷಣಾರ್ಧದಲ್ಲಿ ಲೋಕದ ಜನರ ಬೆರಳ ತುದಿಗೆ ತಲುಪಿಸುವ ಉದ್ದೇಶದಿಂದ ಡಿವಿಜಿಸುದ್ದಿ.ಕಾಂ ಕನ್ನಡ ಆನ್ ಲೈನ್ ನ್ಯೂಸ್ ಪೋರ್ಟಲ್ (ಡಿಜಿಟಲ್ ಮಾಧ್ಯಮ) ಸ್ಥಾಪಿಸಲಾಗಿದೆ. ಸ್ಥಳೀಯ ಸುದ್ದಿ ಜೊತೆ ಇನ್ಫೋರ್ಮೆಟಿವ್ ನ್ಯೂಸ್ ಕೊಡುವುದು ಮೊದಲ ಆದ್ಯತೆ. ಇದಲ್ಲದೆ ರಾಜಕೀಯ, ಶಿಕ್ಷಣ, ಉದ್ಯೋಗ, ಕ್ರೀಡೆ, ಅಪರಾಧ ಸುದ್ದಿ ಹಾಗೂ ವಿಶೇಷವಾಗಿ ಕೃಷಿ ಮತ್ತು ರೈತರಿಗೆ ಉಪಯುಕ್ತ ಮಾಹಿತಿ ನೀಡುವುದು ಮುಖ್ಯ ಉದ್ದೇಶ. ಸುದ್ದಿ, ಮಾಹಿತಿ, ಸಲಹೆ, ಸೂಚನೆ ನೀಡಲು ವಾಟ್ಸಾಪ್ (7483892205) ಮಾಡಿ... Editor: munikondajji, MA journalism, contact number:7483892205, e-mail: dvgsuddi@gmail.com

Click to comment

Leave a Reply

Your email address will not be published. Required fields are marked *

More in ಪ್ರಮುಖ ಸುದ್ದಿ

To Top