ಡಿವಿಜಿ ಸುದ್ದಿ, ದಾವಣಗೆರೆ: ಮಹಾನಗರ ಪಾಲಿಕೆ 43 ನೇ ವಾರ್ಡ್ ವ್ಯಾಪ್ತಿಯಲ್ಲಿ ಹೊಸ ಕುಂದುವಾಡ ಗ್ರಾಮದಲ್ಲಿ ವಿವಿಧ ಮೂಲ ಸೌಕರ್ಯಕ್ಕಾಗಿ ಆಗ್ರಹಿಸಿ ಪಾಲಿಕೆ ಚುನಾವಣೆ ಬಹಿಷ್ಕರಿಸುವುದಾಗಿ ಗ್ರಾಮಸ್ಥರು ತಿಳಿಸಿದರು.
ಈ ಬಗ್ಗೆ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಗ್ರಾಮದ ಮುಖಂಡ ರಾಘವೇಂದ್ರ ಬಿ.ಡಿ, ಇಡೀ ದಾವಣಗೆರೆಗೆ ನೀರು ಪೂರೈಕೆ ಮಾಡುವ ಕುಂದುವಾಡ ಕೆರೆ ಇದ್ದರೂ, ಕುಂದುವಾಡ ಗ್ರಾಮಕ್ಕೆ ಕುಡಿಯುವ ನೀರಿಲ್ಲ. ಇನ್ನು ರಸ್ತೆಗಳು ಸಂಪೂರ್ಣವಾಗಿ ಹದಗೆಟ್ಟು ಹೋಗಿದ್ದು, ಸ್ಮಾರ್ಟ್ ಸಿಟಿ ವ್ಯಾಪ್ತಿಗೆ ಒಳಪಟ್ಟಿದ್ದರೂ, ಸೂಕ್ತ ಬಸ್ ವ್ಯವಸ್ಥೆ ಇಲ್ಲ ಎಂದರು.
ದಿನಂಪ್ರತಿ ಶಾಲಾ ಮಕ್ಕಳು, ಕೂಲಿ ಕಾರ್ಮಿಕರು ದಾವಣಗೆರೆ ನಗರಕ್ಕೆ ನಡೆದುಕೊಂಡು ಬರುವ ಸ್ಥಿತಿ ನಿರ್ಮಾಣವಾಗಿದೆ. ಇನ್ನು ರಸ್ತೆ ಬದಿಯಲ್ಲಿ ಬೀದಿ ದೀಪ ಸೇರಿದಂತೆ ಯಾವುದೇ ಸೂಕ್ತ ವ್ಯವಸ್ಥೆಯನ್ನು ಪಾಲಿಕೆ ವತಿಯಿಂದ ಕಲ್ಪಿಸಿಕೊಟ್ಟಿಲ್ಲ. ಸೂಕ್ತ ಮೂಲ ಸೌಕರ್ಯ ಕಲ್ಪಿಸುವಂತೆ ಆಗ್ರಹಿಸಿ ಅನೇಕ ಸಲ ಮನವಿ ಮಾಡಿದ್ದರೂ, ಯಾವುದೇ ಜನಪ್ರತಿನಿಧಿಗಳಾಗಲಿ, ಅಧಿಕಾರಿಗಳಾಗಲಿ ಸ್ಪಂದಿಸಿಲ್ಲ. ಹೀಗಾಗಿ 43 ನೇ ವಾರ್ಡ್ ವ್ಯಾಪ್ತಿಯಲ್ಲಿ ಬರುವ ಹೊಸ ಕುಂದವಾಡ ಗ್ರಾಮಸ್ಥರೆಲ್ಲ ಸೇರಿಕೊಂಡು ಈ ಬಾರಿಯ ಮಹಾನಗರ ಪಾಲಿಕೆ ಚುನಾವಣೆರ ಬಹಿಷ್ಕರಿಸುವ ತೀರ್ಮಾನ ಕೈಗೊಂಡಿದ್ದೇವೆ ಎಂದರು.
ಈ ಸಂದರ್ಭದಲ್ಲಿ ರಾಘವೇಂದ್ ಬಿ.ಪಿ, ಸುರೇಶ್, ಚಿರಂಜೀವಿ, ಆಂಜನೇಯ, ಹನುಮಂತಪ್ಪ , ಅಜ್ಜಯ್ಯ ಡಿ.ಎನ್, ಸಿದ್ದೇಶ್, ಹಾಲೇಜ್ , ಪ್ರವೀಣ, ಎಲ್ಲಪ್ಪ ಎಚ್.ಎಸ್, ಶಿವಕುಮಾರ್, ಶ್ರೀನಿವಾಸ್, ಮುಂಜುನಾಥ್, ರವಿಕುಮಾರ್ ಉಪಸ್ಥಿತರಿದ್ದರು.



