ಡಿವಿಜಿ ಸುದ್ದಿ, ದಾವಣಗೆರೆ: ಮಹಾ ನಗರ ಪಾಲಿಕೆಯ 45 ವಾರ್ಡ್ ಗಳಲ್ಲಿ ಪಿಜೆ ಬಡಾವಣೆ ಮಾದರಿ ವಾರ್ಡ್ ಆಗಿ ರೂಪಿಸಿದ್ದೇನೆ. ಮುಂದಿನ ದಿನಗಳಲ್ಲಿ ಇನ್ನಷ್ಟು ಉತ್ತಮ ಕೆಲಸ ಮಾಡುವ ಗುರಿ ಇದೆ ಎಂದು 17 ನೇ ವಾರ್ಡ್ ಕಾಂಗ್ರೆಸ್ ಅಭ್ಯರ್ಥಿ ದಿನೇಶ್ ಕೆ. ಶೆಟ್ಟಿ ಹೇಳಿದರು.
ನಾಮಪತ್ರ ಸಲ್ಲಿಸುವುದಕ್ಕಿಂತ ಮುನ್ನ ರಾಮ್ ಅಂಡ್ ಕೋ ಸರ್ಕಲ್ ಬಳಿ ಗಣಪತಿ ದೇವಸ್ಥಾನದಲ್ಲಿ ಪೂಜೆ ಸಲ್ಲಿಸಿದ ನಂತರ ಮಾತನಾಡಿ, ಕಾಂಗ್ರೆಸ್ ಪಕ್ಷದ ವರಿಷ್ಠರಾದ ಶಾಮನೂರು ಶಿವಶಂಕರಪ್ಪ, ಮಾಜಿ ಸಚಿವರಾದ ಎಸ್.ಎಸ್. ಮಲ್ಲಿಕಾರ್ಜುನ್ ಅವರ ಸಹಕಾರದಿಂದ ದಾವಣಗೆರೆ ಮಹಾನಗರ ಪಾಲಿಕೆಯಲ್ಲಿ ಉತ್ತಮ ಕೆಲಸಗಳಾಗಿವೆ.
ನಾನು ಕೂಡ ಇದೇ ವಾರ್ಡ್ ನವನಾಗಿರುವುದರಿಂದ 45 ವಾರ್ಡ್ ಗಳಲ್ಲಿ ಪಿಜೆ ಬಡಾವಣೆಯನ್ನು ಉತ್ತಮ ವಾರ್ಡ್ ಆಗಿ ರೂಪಿಸಿದ್ದೇನೆ. ಮುಂದಿನ ದಿನಗಳಲ್ಲಿ ಇನ್ನಷ್ಟು ಕೆಲಸ ಮಾಡಲು ಮತದಾರರು ಅವಕಾಶ ಕಲ್ಪಿಸಿ ಕೊಡಬೇಕೆಂದರು.



