Connect with us

Dvgsuddi Kannada | online news portal | Kannada news online

ಜಲಶಕ್ತಿ ಅಭಿಯಾನಕ್ಕೆ ಚಾಲನೆ

ಸಹಿ ಹಾಕುವ ಮೂಲಕ ಜಲ ಶಕ್ತಿ ಅಭಿಯಾನಕ್ಕೆ ಪಾಲಿಕೆ ಆಯುಕ್ತ ಮಂಜುನಾಥ್ ಬಳ್ಳಾರಿ ಚಾಲನೆ ನೀಡಿದರು.

Home

ಜಲಶಕ್ತಿ ಅಭಿಯಾನಕ್ಕೆ ಚಾಲನೆ

ಡಿವಿಜಿ ಸುದ್ದಿ.ಕಾಂ

ದಾವಣಗೆರೆ: ಮಹಾನಗರಪಾಲಿಕೆ ವ್ಯಾಪ್ತಿಯಲ್ಲಿ ಜಲಶಕ್ತಿ ಅಭಿಯಾನವನ್ನು ಅನುಷ್ಟಾನಗೊಳಿಸಲು ಸಾರ್ವಜನಿಕರಿಂದ ಸಹಿ ಸಂಗ್ರಹಕ್ಕೆ ಕಾರ್ಯಕ್ಕೆ ಪಾಲಿಕೆ ಆಯುಕ್ತ ಮಂಜುನಾಥ್ ಬಳ್ಳಾರಿ ಸಹಿ ಮಾಡುವ ಮೂಲಕ ಚಾಲನೆ ನೀಡಿದ್ರು.

ಚಾಲನೆ ನಂತರ ಮಾತಾನಾಡಿ, ಜಿಲ್ಲೆಯಾದ್ಯಂತ ಜಲದ ಸಂರಕ್ಷಣೆ ಮತ್ತು ಪಾರಂಪರಿಕ ಜಲಮೂಲಗಳನ್ನು ರಕ್ಷಣೆ ಮಾಡುವ ಕಾರ್ಯಕ್ರಮ ಇದಾಗಿದ್ದು, ಸಾರ್ವಜನಿಕರೆಲ್ಲರೂ ಸಹಿ ಮಾಡುವ ಮೂಲಕ ಪಾಲಿಕೆಯ ಈ ಕಾರ್ಯಕ್ಕೆ ಸಹಕಾರ ನೀಡಬೇಕೆಂದು ಹೇಳಿದರು.

ದೈನಂದಿನ ಚಟುವಟಿಕೆಗಳಲ್ಲಿ ಶುದ್ದ ಕುಡಿಯುವ ನೀರನ್ನು ಪ್ರತಿಯೊಬ್ಬರಿಗೆ ತಲುಪಿಸಲು ಆದ್ಯತೆ ನೀಡಲಾಗುವುದು. ಪ್ರಕೃತಿ, ಗಿಡ-ಮರಗಳ ಸಂರಕ್ಷಣೆ ಮತ್ತು ಬೆಳವಣೆಗೆ ನಮ್ಮ ಧ್ಯೇಯವಾಗಿದೆ. ಅಭಿಯಾನದ ನಂತರ ವಾಕ್‍ಥಾನ್, ಮ್ಯಾರಾಥಾನ್ ಮೂಲಕ ಕಾರ್ಯಕ್ರಮವನ್ನು ಯಶಸ್ವಿಗೊಳಿಸಲಾಗುವುದು ಎಂದರು.

ಈ ಸಂದರ್ಭದಲ್ಲಿ ಪಾಲಿಕೆ ಉಪ ಆಯುಕ್ತ ರವೀಂದ್ರ ಮಲ್ಲಾಪುರ, ಕಾರ್ಯಪಾಲಕ ಅಭಿಯಂತರ ಆರ್.ಪಿ ಜಾಧವ್, ಮಂಜುನಾಥ್ ಗಿರಡ್ಡಿ, ನಾಗಭೂಷಣ್ ಹಾಗೂ ಪಾಲಿಕೆಯ ಸಿಬ್ಬಂದಿ ವರ್ಗದವರು ಭಾಗಿಯಾಗಿದ್ರು.

ಹೆಚ್ಚಿನ ಸುದ್ದಿಗಾಗಿ ಭೇಟಿ ನೀಡಿ: www.dvgsuddi.com.                ಡಿವಿಜಿ ಸುದ್ದಿ.ಕಾಂ                        ಸುದ್ದಿಗಾಗಿ ಸಂಪರ್ಕಿಸಿ: 7483892205, ಜಾಹೀರಾತಿಗಾಗಿ: 9844460336

 

ಲೋಕಲ್ ಸುದ್ದಿಗಳನ್ನು ಕ್ಷಣಾರ್ಧದಲ್ಲಿ ಲೋಕದ ಜನರ ಬೆರಳ ತುದಿಗೆ ತಲುಪಿಸುವ ಉದ್ದೇಶದಿಂದ ಡಿವಿಜಿಸುದ್ದಿ.ಕಾಂ ಕನ್ನಡ ಆನ್ ಲೈನ್ ನ್ಯೂಸ್ ಪೋರ್ಟಲ್ (ಡಿಜಿಟಲ್ ಮಾಧ್ಯಮ) ಸ್ಥಾಪಿಸಲಾಗಿದೆ. ಸ್ಥಳೀಯ ಸುದ್ದಿ ಜೊತೆ ಇನ್ಫೋರ್ಮೆಟಿವ್ ನ್ಯೂಸ್ ಕೊಡುವುದು ಮೊದಲ ಆದ್ಯತೆ. ಇದಲ್ಲದೆ ರಾಜಕೀಯ, ಶಿಕ್ಷಣ, ಉದ್ಯೋಗ, ಕ್ರೀಡೆ, ಅಪರಾಧ ಸುದ್ದಿ ಹಾಗೂ ವಿಶೇಷವಾಗಿ ಕೃಷಿ ಮತ್ತು ರೈತರಿಗೆ ಉಪಯುಕ್ತ ಮಾಹಿತಿ ನೀಡುವುದು ಮುಖ್ಯ ಉದ್ದೇಶ. ಸುದ್ದಿ, ಮಾಹಿತಿ, ಸಲಹೆ, ಸೂಚನೆ ನೀಡಲು ವಾಟ್ಸಾಪ್ (7483892205) ಮಾಡಿ... Editor: munikondajji, MA journalism, contact number:7483892205, e-mail: dvgsuddi@gmail.com

Click to comment

Leave a Reply

Your email address will not be published. Required fields are marked *

More in Home

ದಾವಣಗೆರೆ

Advertisement
Advertisement Enter ad code here

Title

To Top