Connect with us

Dvgsuddi Kannada | online news portal | Kannada news online

ದಾವಣಗೆರೆ: ಸೆ. 27 ರಂದು ಕೈಗಾರಿಕಾ ಅದಾಲತ್;  ಕೈಗಾರಿಕೋದ್ಯಮಿಗಳ ಕೇಸ್ ಗಳ ಇತ್ಯರ್ಥ

law

ದಾವಣಗೆರೆ

ದಾವಣಗೆರೆ: ಸೆ. 27 ರಂದು ಕೈಗಾರಿಕಾ ಅದಾಲತ್;  ಕೈಗಾರಿಕೋದ್ಯಮಿಗಳ ಕೇಸ್ ಗಳ ಇತ್ಯರ್ಥ

ದಾವಣಗೆರೆ: ದಾವಣಗೆರೆ ಜಿಲ್ಲೆಯ ಕೈಗಾರಿಕೋದ್ಯಮಿಗಳ ಸಮಸ್ಯೆಗಳನ್ನು ಬಗೆಹರಿಸಲು ಸಂಬಂಧಿಸಿದಂತೆ ಸೆ.27 ರಂದು ಬೆಂಗಳೂರು ವಿಭಾಗ ಮಟ್ಟದಲ್ಲಿ ಕೈಗಾರಿಕಾ ಅದಾಲತ್ ನಡೆಸಲಾಗುವುದು.

ಜಿಲ್ಲೆಯಲ್ಲಿರುವ ಸೂಕ್ಷ್ಮ, ಸಣ್ಣ ಮತ್ತು ಮಧ್ಯಮ ಕೈಗಾರಿಕೆಗಳು ಅನೇಕ ಹಲವು ತಿಂಗಳು ವರ್ಷಗಳಿಂದ ವಿವಿಧ ಇಲಾಖೆಗಳಿಂದ ಸಮಸ್ಯೆಗಳನ್ನು ಅನುಭವಿಸುತ್ತಿದ್ದು ಯಾವುದೇ ಪರಿಹಾರ ದೊರೆಯದೆ ಹತಾಶರಾದ ಸಾಧ್ಯತೆಗಳಿರುತ್ತವೆ. ಹೀಗಾಗಿ ಕೈಗಾರಿಕೋದ್ಯಮಗಳ ಸಮಸ್ಯೆಗಳನ್ನು ಬಗೆಹರಿಸಲು ವಿಭಾಗ ಮಟ್ಟದಲ್ಲಿ ಕೈಗಾರಿಕಾ ಅದಾಲತ್ ನಡೆಸಲು ಬೃಹತ್ ಮತ್ತು ಮದ್ಯಮ ಕೈಗಾರಿಕೆ ಸಚಿವರು ಸೂಚಿಸಿರುತ್ತಾರೆ. ಇದರನ್ವಯ ಜಿಲ್ಲೆಯಲ್ಲಿನ ಕೈಗಾರಿಕೋದ್ಯಮಗಳು ತಮ್ಮ ಸಮಸ್ಯೆಗಳ ಕುರಿತು ಕೈಗಾರಿಕಾ ಅದಾಲತ್ ನಮೂನೆ-1 & 2 ಅರ್ಜಿಗಳನ್ನು ತುರ್ತಾಗಿ ಜಂಟಿ ನಿರ್ದೇಶಕರು, ಜಿಲ್ಲಾ ಕೈಗಾರಿಕಾ ಕೇಂದ್ರ ದಾವಣಗೆರೆ ಇವರಿಗೆ ಸಲ್ಲಿಸಬೇಕೆಂದು ಪ್ರಕಟಣೆಯಲ್ಲಿ ತಿಳಿಸಲಾಗಿದೆ.

 

ಲೋಕಲ್ ಸುದ್ದಿಗಳನ್ನು ಕ್ಷಣಾರ್ಧದಲ್ಲಿ ಲೋಕದ ಜನರ ಬೆರಳ ತುದಿಗೆ ತಲುಪಿಸುವ ಉದ್ದೇಶದಿಂದ ಡಿವಿಜಿಸುದ್ದಿ.ಕಾಂ ಕನ್ನಡ ಆನ್ ಲೈನ್ ನ್ಯೂಸ್ ಪೋರ್ಟಲ್ (ಡಿಜಿಟಲ್ ಮಾಧ್ಯಮ) ಸ್ಥಾಪಿಸಲಾಗಿದೆ. ಸ್ಥಳೀಯ ಸುದ್ದಿ ಜೊತೆ ಇನ್ಫೋರ್ಮೆಟಿವ್ ನ್ಯೂಸ್ ಕೊಡುವುದು ಮೊದಲ ಆದ್ಯತೆ. ಇದಲ್ಲದೆ ರಾಜಕೀಯ, ಶಿಕ್ಷಣ, ಉದ್ಯೋಗ, ಕ್ರೀಡೆ, ಅಪರಾಧ ಸುದ್ದಿ ಹಾಗೂ ವಿಶೇಷವಾಗಿ ಕೃಷಿ ಮತ್ತು ರೈತರಿಗೆ ಉಪಯುಕ್ತ ಮಾಹಿತಿ ನೀಡುವುದು ಮುಖ್ಯ ಉದ್ದೇಶ. ಸುದ್ದಿ, ಮಾಹಿತಿ, ಸಲಹೆ, ಸೂಚನೆ ನೀಡಲು ವಾಟ್ಸಾಪ್ (7483892205) ಮಾಡಿ... Editor: munikondajji, MA journalism, contact number:7483892205, e-mail: dvgsuddi@gmail.com

Click to comment

Leave a Reply

Your email address will not be published. Required fields are marked *

More in ದಾವಣಗೆರೆ

To Top