ದಾವಣಗೆರೆ: ದಾವಣಗೆರೆ ಜಿಲ್ಲೆಯ ಕೈಗಾರಿಕೋದ್ಯಮಿಗಳ ಸಮಸ್ಯೆಗಳನ್ನು ಬಗೆಹರಿಸಲು ಸಂಬಂಧಿಸಿದಂತೆ ಸೆ.27 ರಂದು ಬೆಂಗಳೂರು ವಿಭಾಗ ಮಟ್ಟದಲ್ಲಿ ಕೈಗಾರಿಕಾ ಅದಾಲತ್ ನಡೆಸಲಾಗುವುದು.
ಜಿಲ್ಲೆಯಲ್ಲಿರುವ ಸೂಕ್ಷ್ಮ, ಸಣ್ಣ ಮತ್ತು ಮಧ್ಯಮ ಕೈಗಾರಿಕೆಗಳು ಅನೇಕ ಹಲವು ತಿಂಗಳು ವರ್ಷಗಳಿಂದ ವಿವಿಧ ಇಲಾಖೆಗಳಿಂದ ಸಮಸ್ಯೆಗಳನ್ನು ಅನುಭವಿಸುತ್ತಿದ್ದು ಯಾವುದೇ ಪರಿಹಾರ ದೊರೆಯದೆ ಹತಾಶರಾದ ಸಾಧ್ಯತೆಗಳಿರುತ್ತವೆ. ಹೀಗಾಗಿ ಕೈಗಾರಿಕೋದ್ಯಮಗಳ ಸಮಸ್ಯೆಗಳನ್ನು ಬಗೆಹರಿಸಲು ವಿಭಾಗ ಮಟ್ಟದಲ್ಲಿ ಕೈಗಾರಿಕಾ ಅದಾಲತ್ ನಡೆಸಲು ಬೃಹತ್ ಮತ್ತು ಮದ್ಯಮ ಕೈಗಾರಿಕೆ ಸಚಿವರು ಸೂಚಿಸಿರುತ್ತಾರೆ. ಇದರನ್ವಯ ಜಿಲ್ಲೆಯಲ್ಲಿನ ಕೈಗಾರಿಕೋದ್ಯಮಗಳು ತಮ್ಮ ಸಮಸ್ಯೆಗಳ ಕುರಿತು ಕೈಗಾರಿಕಾ ಅದಾಲತ್ ನಮೂನೆ-1 & 2 ಅರ್ಜಿಗಳನ್ನು ತುರ್ತಾಗಿ ಜಂಟಿ ನಿರ್ದೇಶಕರು, ಜಿಲ್ಲಾ ಕೈಗಾರಿಕಾ ಕೇಂದ್ರ ದಾವಣಗೆರೆ ಇವರಿಗೆ ಸಲ್ಲಿಸಬೇಕೆಂದು ಪ್ರಕಟಣೆಯಲ್ಲಿ ತಿಳಿಸಲಾಗಿದೆ.



