ದಾವಣಗೆರೆ: ಜಿಲ್ಲೆಯಲ್ಲಿ ಸರ್ಕಾರದಿಂದ ಗೋಶಾಲೆ ನಿರ್ಮಾಣಕ್ಕೆ 7 ಎಕರೆ ಭೂಮಿ ಮಂಜೂರು

Dvgsuddi
By
Dvgsuddi
ಲೋಕಲ್ ಸುದ್ದಿಗಳನ್ನು ಕ್ಷಣಾರ್ಧದಲ್ಲಿ ಲೋಕದ ಜನರ ಬೆರಳ ತುದಿಗೆ ತಲುಪಿಸುವ ಉದ್ದೇಶದಿಂದ ಡಿವಿಜಿಸುದ್ದಿ.ಕಾಂ ಕನ್ನಡ ಆನ್ ಲೈನ್ ನ್ಯೂಸ್ ಪೋರ್ಟಲ್ (ಡಿಜಿಟಲ್ ಮಾಧ್ಯಮ) ಸ್ಥಾಪಿಸಲಾಗಿದೆ. ಸ್ಥಳೀಯ ಸುದ್ದಿ ಜೊತೆ ಇನ್ಫೋರ್ಮೆಟಿವ್ ನ್ಯೂಸ್ ಕೊಡುವುದು ಮೊದಲ ಆದ್ಯತೆ....
1 Min Read

ದಾವಣಗೆರೆ: ಜಿಲ್ಲೆಗೊಂದು ಗೋಶಾಲೆ ಸ್ಥಾಪಿಸುವ ಸರ್ಕಾರದ ಆದೇಶದಂತೆ ದಾವಣಗೆರೆ ಜಿಲ್ಲೆಯಲ್ಲಿಯೂ ಗೋಶಾಲೆ ಆರಂಭಿಸಲು 7 ಎಕರೆ ಜಾಗ ಮಂಜೂರು ಮಾಡಲಾಗಿದೆ ಎಂದು ಜಿಲ್ಲಾಧಿಕಾರಿ ಮಹಾಂತೇಶ್ ಬೀಳಗಿ ತಿಳಿಸಿದರು.

ಜಿಲ್ಲಾಡಳಿತ ಭವನದಲ್ಲಿ ಪಶುಸಂಗೋಪನೆಯ ಇಲಾಖೆಯ ವತಿಯಿಂದ ಗೋಶಾಲೆ ಆರಂಭಿಸುವ ಸಂಬಂಧ ಜರುಗಿದ ಸಭೆಯ ಅಧ್ಯಕ್ಷತೆಯನ್ನು ವಹಿಸಿ ಮಾತನಾಡಿ, ಪ್ರತಿಯೊಂದು ಜಿಲ್ಲೆಯಲ್ಲಿ ಗೋಶಾಲೆ ಆರಂಭಿಸಲು ಸರ್ಕಾರ 2021-22 ನೇ ಸಾಲಿನ ಅಯ-ವ್ಯಯದಲ್ಲಿ ಘೋಷಿಸಿದ್ದು, ಅದರಂತೆ ಗೋ ಸಂಪತ್ತಿನ ಸಂರಕ್ಷಣೆಗಾಗಿ ಗೋ ಹತ್ಯೆ ನಿಷೇಧ ಜಾರಿಗೆ ತಂದಿರುವುದರಿಂದ ಇದಕ್ಕೆ ಪೂರಕವಾಗಿ ಗೋಹತ್ಯೆ ತಡಯಲು ಹಾಗೂ ಜಾನುವಾರುಗಳನ್ನು ಸಂರಕ್ಷಿಸಲು ಪ್ರತಿ ಜಿಲ್ಲೆಗೆ ರೂ.50 ಲಕ್ಷ ಅನುದಾನ ನಿಗದಿಪಡಿಸಿದೆ. ಈಗಾಗಲೇ ಮೊದಲನೇ ಕಂತಿನ ರೂ. 24 ಲಕ್ಷ ಅನುದಾನ ಬಿಡುಗಡೆ ಮಾಡಿದ್ದು, ಈಗ ಬಿಡುಗಡೆ ಮಾಡಿರುವ ರೂ 24 ಲಕ್ಷ ಅನುದಾನ ಗೋಶಾಲೆಯ ನಿರ್ಮಾಣಕ್ಕೆ ಸಾಕಾಗುವುದಿಲ್ಲ, ಹೀಗಾಗಿ ಹೆಚ್ಚಿನ ಅನುದಾನ ಒದಗಿಸುವಂತೆ ಪ್ರಸ್ತಾವನೆ ಸಲ್ಲಿಸುವುದು ಸೂಕ್ತ ಎಂದರು.

ನಗರ ವ್ಯಾಪ್ತಿಯಲ್ಲಿ ಹೆಚ್ಚು ಬಿಡಾಡಿ ದನ-ಕರುಗಳು ಇದ್ದು, ಅವುಗಳನ್ನು ಈ ಗೋಶಾಲೆಗೆ ಸೇರಿಸಲಾಗುವುದು, ಹೀಗಾಗಿ ನಗರಪಾಲಿಕೆಯಿಂದ ಹೆಚ್ಚಿನ ಅನುದಾನವನ್ನು ಹಾಗೂ ಗೋಶಾಲೆಗೆ ಸಂಬಂಧಿಸಿದ ಕೆಲ ಕಾಮಗಾರಿಗಳನ್ನು ಮಾಡಿಕೊಡುವಂತೆ ಕೋರಬಹುದು. ಇದರಿಂದ ನಗರ ವ್ಯಾಪ್ತಿಯ ಬಿಡಾಡಿ ಪ್ರಾಣಿಗಳ ನಿಗ್ರಹಕ್ಕೂ ಸಹಕಾರಿಯಾಗಲಿದ್ದು, ಮಹಾನಗರ ಪಾಲಿಕೆಯವರಿಗೂ ಇದರಿಂದ ಅನುಕೂಲವಾಗಲಿದೆ ಎಂದರು.

ಪಶುಸಂಗೋಪನೆ ಇಲಾಖೆಯ ಉಪನಿರ್ದೇಶಕ ಡಾ. ಚಂದ್ರಶೇಖರ್ ಸುಂಕದ್ ಮಾತನಾಡಿ, ಈಗಾಗಲೇ 4 ಜಿಲ್ಲೆಗಳಲ್ಲಿ ಗೋಶಾಲೆಗಳು ಆರಂಭದ ಹಂತದಲ್ಲಿವೆ. ಸರ್ಕಾರ ಒಂದು ಪಶು ನಿರ್ವಹಣೆಗೆ ದಿನಕ್ಕೆ ರೂ 17.50 ನೀಡಲು ನಿಗದಿಪಡಿಸಿದ್ದು, ಆದರೆ ಒಂದು ಪಶು ನಿರ್ವಹಣೆಗೆ ದಿನವೊಂದಕ್ಕೆ ರೂ.70 ಬೇಕಾಗುತ್ತದೆ. ಸಂಘ-ಸಂಸ್ಥೆಗಳ ನೆರವಿನಿಂದ ಈ ಖರ್ಚನ್ನು ನಿಭಾಯಿಸಲಾಗುತ್ತಿದ್ದು, ನಿರ್ವಹಣೆಗೂ ಹೆಚ್ಚಿನ ಅನುದಾನ ಬೇಕಾಗುತ್ತದೆ ಎಂದರು.

 

 

Share This Article
Follow:
ಲೋಕಲ್ ಸುದ್ದಿಗಳನ್ನು ಕ್ಷಣಾರ್ಧದಲ್ಲಿ ಲೋಕದ ಜನರ ಬೆರಳ ತುದಿಗೆ ತಲುಪಿಸುವ ಉದ್ದೇಶದಿಂದ ಡಿವಿಜಿಸುದ್ದಿ.ಕಾಂ ಕನ್ನಡ ಆನ್ ಲೈನ್ ನ್ಯೂಸ್ ಪೋರ್ಟಲ್ (ಡಿಜಿಟಲ್ ಮಾಧ್ಯಮ) ಸ್ಥಾಪಿಸಲಾಗಿದೆ. ಸ್ಥಳೀಯ ಸುದ್ದಿ ಜೊತೆ ಇನ್ಫೋರ್ಮೆಟಿವ್ ನ್ಯೂಸ್ ಕೊಡುವುದು ಮೊದಲ ಆದ್ಯತೆ. ಇದಲ್ಲದೆ ರಾಜಕೀಯ, ಶಿಕ್ಷಣ, ಉದ್ಯೋಗ, ಕ್ರೀಡೆ, ಅಪರಾಧ ಸುದ್ದಿ ಹಾಗೂ ವಿಶೇಷವಾಗಿ ಕೃಷಿ ಮತ್ತು ರೈತರಿಗೆ ಉಪಯುಕ್ತ ಮಾಹಿತಿ ನೀಡುವುದು ಮುಖ್ಯ ಉದ್ದೇಶ. ಸುದ್ದಿ, ಮಾಹಿತಿ, ಸಲಹೆ, ಸೂಚನೆ ನೀಡಲು ವಾಟ್ಸಾಪ್ (7483892205) ಮಾಡಿ... Editor: munikondajji, MA journalism, contact number:7483892205, e-mail: dvgsuddi@gmail.com
Leave a Comment

Leave a Reply

Your email address will not be published. Required fields are marked *