Connect with us

Dvgsuddi Kannada | online news portal | Kannada news online

ದಾವಣಗೆರೆ: ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಸಮಾಲೋಚಕ ಹುದ್ದೆಗೆ ಅರ್ಜಿ ಆಹ್ವಾನ

job

ಪ್ರಮುಖ ಸುದ್ದಿ

ದಾವಣಗೆರೆ: ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಸಮಾಲೋಚಕ ಹುದ್ದೆಗೆ ಅರ್ಜಿ ಆಹ್ವಾನ

ದಾವಣಗೆರೆ: ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಅನುದಾನದಡಿ ನಿರ್ವಹಿಸಲಾಗುವ ಹರಿಹರದಲ್ಲಿನ ಸಾಂತ್ವನ ಮಹಿಳಾ ಸಹಾಯವಾಣಿ ಕೇಂದ್ರಕ್ಕೆ ಅಗತ್ಯವಿರುವ ಗೌರವಧನ ಆಧಾರದ ಸಮಾಲೋಚಕರ 01 ಹುದ್ದೆಯನ್ನು ಭರ್ತಿ ಮಾಡಲು ಉದ್ದೇಶಿಸಿದ್ದು ಆಸಕ್ತ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ.

ಸಮಾಲೋಚಕರಿಗೆ ಪ್ರತಿ ತಿಂಗಳು ರೂ. 15,000 ಗಳ ಗೌರವಧನ ನೀಡಲಾಗುವುದು. ವಯೋಮಿತಿ 18 ರಿಂದ 45 ವರ್ಷದೊಳಗಿರಬೇಕು, ವಿದ್ಯಾರ್ಹತೆ ಎಂ.ಎಸ್.ಡಬ್ಲ್ಯೂ, ಎಂ.ಎ(ಸೈಕಾಲಜಿ/ಸೋಷಿಯಾಲಜಿ/ಎಂ.ಎಸ್) ಕೌನ್ಸಲಿಂಗ್ ಮತ್ತು ಸೈಕೋಥೆರಪಿ ಜೊತೆಗೆ ಒಂದು ವರ್ಷ ಕಂಪ್ಯೂಟರ್ ಅನುಭವ ಇರಬೇಕು.

ಅರ್ಜಿ ಸಲ್ಲಿಸಲು ಸೆ.25 ಕೊನೆಯ ದಿನವಾಗಿದ್ದು, ಅಗತ್ಯ ದಾಖಲೆಗಳೊಂದಿಗೆ ಅರ್ಜಿಯನ್ನು ಸಾಂತ್ವನ ಮಹಿಳಾ ಸಹಾಯವಾಣಿ ಕೇಂದ್ರ, ಆಸ್ಪತ್ರೆ ರಸ್ತೆ, ಮೋಚಿ ಕಾಲೋನಿ, ಹರಿಹರ ಇವರಿಗೆ ಸಲ್ಲಿಸಬಹುದು. ಹೆಚ್ಚಿನ ಮಾಹಿತಿಗಾಗಿ ದೂರವಾಣಿ ಸಂಖ್ಯೆ : 08192-244045, ಮೊಬೈಲ್ ನಂ.9845908219, 9742550797 ಇವರನ್ನು ಸಂಪರ್ಕಿಸಬಹುದು ಎಂದು ಸಾಂತ್ವನ ಮಹಿಳಾ ಸಹಾಯವಾಣಿ ಕೇಂದ್ರದ ಅಧ್ಯಕ್ಷರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಲೋಕಲ್ ಸುದ್ದಿಗಳನ್ನು ಕ್ಷಣಾರ್ಧದಲ್ಲಿ ಲೋಕದ ಜನರ ಬೆರಳ ತುದಿಗೆ ತಲುಪಿಸುವ ಉದ್ದೇಶದಿಂದ ಡಿವಿಜಿಸುದ್ದಿ.ಕಾಂ ಕನ್ನಡ ಆನ್ ಲೈನ್ ನ್ಯೂಸ್ ಪೋರ್ಟಲ್ (ಡಿಜಿಟಲ್ ಮಾಧ್ಯಮ) ಸ್ಥಾಪಿಸಲಾಗಿದೆ. ಸ್ಥಳೀಯ ಸುದ್ದಿ ಜೊತೆ ಇನ್ಫೋರ್ಮೆಟಿವ್ ನ್ಯೂಸ್ ಕೊಡುವುದು ಮೊದಲ ಆದ್ಯತೆ. ಇದಲ್ಲದೆ ರಾಜಕೀಯ, ಶಿಕ್ಷಣ, ಉದ್ಯೋಗ, ಕ್ರೀಡೆ, ಅಪರಾಧ ಸುದ್ದಿ ಹಾಗೂ ವಿಶೇಷವಾಗಿ ಕೃಷಿ ಮತ್ತು ರೈತರಿಗೆ ಉಪಯುಕ್ತ ಮಾಹಿತಿ ನೀಡುವುದು ಮುಖ್ಯ ಉದ್ದೇಶ. ಸುದ್ದಿ, ಮಾಹಿತಿ, ಸಲಹೆ, ಸೂಚನೆ ನೀಡಲು ವಾಟ್ಸಾಪ್ (7483892205) ಮಾಡಿ... Editor: munikondajji, MA journalism, contact number:7483892205, e-mail: dvgsuddi@gmail.com

Click to comment

Leave a Reply

Your email address will not be published. Required fields are marked *

More in ಪ್ರಮುಖ ಸುದ್ದಿ

ದಾವಣಗೆರೆ

Advertisement
Advertisement Enter ad code here

Title

To Top