ದಾವಣಗೆರೆ: ಕೆಲವು ದಿನಗಳಿಂದ ನಾಪತ್ತೆಯಾಗಿದ್ದ ಜಿಲ್ಲೆಯ ಮಾಯಕೊಂಡ ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್ ಮುಖಂಡನ ಶವ ಚನ್ನಗಿರಿಯ ಬಸವಾಪಟ್ಟಣ ಗುಡ್ಡದಲ್ಲಿ ಪತ್ತೆಯಾಗಿದೆ.
ಜೈನುಲ್ಲಾಖಾನ್ (40) ಮೃತಪಟ್ಟ ಕಾಂಗ್ರೆಸ್ ಮುಜಖಂಡನಾಗಿದ್ದು, ಕೊಲೆ ಶಂಕೆ ವ್ಯಕ್ತವಾಗಿದೆ. ಕೆಲವು ದಿನಗಳ ಹಿಂದೆ ಜೈನುಲ್ಲಾಖಾನ್ ನಾಪತ್ತೆಯಾಗಿದ್ದರು. ಇದೀಗ ಮೃತಪಟ್ಟ ಸ್ಥಿತಿಯಲ್ಲಿ ವಶ ಪತ್ತೆಯಾಗಿದ್ದಾರೆ. ಮಾಯಕೊಂಡ ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್ ಅಲ್ಪಸಂಖ್ಯಾತ ಘಟಕದ ಉಪಾಧ್ಯಕ್ಷ ಹಾಗೂ ಬೆಸ್ಕಾಂ ಗುತ್ತಿಗೆದಾರರಾಗಿ ಕಾರ್ಯ ನಿರ್ವಹಿಸುತ್ತಿದ್ದರು. ಸ್ಥಳ ಕ್ಕೆ ಎಸ್ಪಿ ಸಿ.ಬಿ.ರಿಷ್ಯಂತ್ ಭೇಟಿ ನೀಡಿದ್ದಾರೆ.



