ದಾವಣಗೆರೆ: ನಗರದ ಜೆ.ಹೆಚ್.ಪಟೇಲ್ ಬಡಾವಣೆಯ ಮೇಲ್ಮಟ್ಟದ ಜಲಾಗಾರವನ್ನು ನಿರಂತರ ಕುಡಿಯುವ ನೀರು ಸರಬರಾಜು ಯೋಜನೆಯ ಪೈಪ್ಲೈನ್ಗಳಿಗೆ ಜೋಡಣೆ ಮಾಡಬೇಕಾಗಿರುವುದರಿಂದ ಸೆ.14 ರಿಂದ 23ರ ವರೆಗೆ 10 ದಿನಗಳು ನೀರು ಸರಬರಾಜನ್ನು ಸ್ಥಗಿತಗೊಳಿಸಲಾಗುತ್ತದೆ.
ಜಲಸಿರಿ ಯೋಜನೆ ಅಡಿಯಲ್ಲಿ ಕೆ.ಯು.ಐ.ಡಿ.ಎಫ್.ಸಿಯವರು ನಗರದೆಲ್ಲಡೆ ನಿರಂತರ ಕುಡಿಯುವ ನೀರಿನ ಪೈಪ್ಲೈನ್ಗಳನ್ನು ಅಳವಡಿಸುವ ಕಾಮಗಾರಿ ಹಾಗೂ ಮೇಲ್ಮಟ್ಟದ ಜಲಸಂಗ್ರಹಗಾರಗಳ ಪುನಶ್ಚೇತನದ ಕಾಮಗಾರಿಗಳು ಪ್ರಗತಿಯಲ್ಲಿರುತ್ತವೆ. ಹೀಗಾಗಿ ಜೆ.ಹೆಚ್.ಪಟೇಲ್ ಬಡಾವಣೆಯ ಸಾರ್ವಜನಿಕರು ಸಹಕರಿಸಬೇಕು ಎಂದು ದಾವಣಗೆರೆ-ಹರಿಹರ ನಗರಾಭಿವೃದ್ಧಿ ಪ್ರಾಧಿಕಾರದ ಆಯುಕ್ತರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ



